AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಈ ಬಾರಿ ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಇವರೇ.. ಎಂದು ಭವಿಷ್ಯ ನುಡಿದ ಶಂಕರ್​ ಅಶ್ವತ್ಥ್​! ಆದರೆ

Bigg Boss Kannada Updates (Day 5) : ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಆರಂಭವಾಗಿ ಈಗತಾನೆ ಒಂದು ವಾರ ಕಳೆಯುತ್ತಿದೆ. ಅಷ್ಟರಲ್ಲಾಗಲೇ ವಿನ್ನರ್​ ಆಗುವವರು ಯಾರು ಎಂದು ಶಂಕರ್ ಅಶ್ವತ್ಥ್​ ಭವಿಷ್ಯ ನುಡಿದಿದ್ದಾರೆ.

Bigg Boss Kannada: ಈ ಬಾರಿ ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಇವರೇ.. ಎಂದು ಭವಿಷ್ಯ ನುಡಿದ ಶಂಕರ್​ ಅಶ್ವತ್ಥ್​!  ಆದರೆ
ಮಂಜು ಪಾವಗಡ ಮತ್ತು ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 06, 2021 | 12:45 PM

Share

ಬಿಗ್​ ಬಾಸ್​ ಆಟದ ಲೆಕ್ಕಾಚಾರವೇ ಬೇರೆ. ಪ್ರೇಕ್ಷಕರು ನಿರೀಕ್ಷೆಯೇ ಮಾಡಿರದ ಸ್ಪರ್ಧಿ ಏಕಾಏಕಿ ಹೈಲೈಟ್ ಆಗಿಬಿಡಬಹುದು. ಸದ್ಯ ಈ ಹೊಸ ಸೀಸನ್​ನಲ್ಲಿ ಅದೇ ರೀತಿ ಆಗುತ್ತಿದೆ. ಹಾಸ್ಯ ಕಲಾವಿದ ಮಂಜು ಪಾವಗಡ ಸಿಕ್ಕಾಪಟ್ಟೆ ಹೈಪ್​ ಪಡೆದುಕೊಳ್ಳುತ್ತಿದ್ದಾರೆ. ಹಲವು ಕಾರಣಗಳಿಗಾಗಿ ಅವರನ್ನು ಜನರು ಇಷ್ಟ ಪಡುತ್ತಿದ್ದಾರೆ. ಮನೆಯೊಳಗಿನ ಸದಸ್ಯರಿಗೂ ಅದೇ ಭಾವನೆ ವ್ಯಕ್ತವಾಗುತ್ತಿದೆ. ಎಷ್ಟರಮಟ್ಟಿಗೆಂದರೆ ಈ ಬಾರಿ ಬಿಗ್​ ಬಾಸ್​ ಗೆಲ್ಲುವುದು ಮಂಜು ಪಾವಗಡೆ ಅವರೇ ಎಂದು ಹಿರಿಯ ನಟ ಶಂಕರ್​ ಅಶ್ವತ್ಥ್​ ಭವಿಷ್ಯ ನುಡಿದಿದ್ದಾರೆ!

ಬಿಗ್​ ಬಾಸ್​ನಲ್ಲಿ 5ನೇ ದಿನ ಎಲ್ಲರೂ ತಮಗೆ ಇಷ್ಟ ಆಗುವ ಮತ್ತು ಇಷ್ಟ ಆಗದ ಸದಸ್ಯರ ಹೆಸರು ಹೇಳಿ, ಅವರಿಗೆ ಲೈಕ್​ ಹಾಗೂ ಡಿಸ್ಲೈಕ್​ ಬ್ಯಾಡ್ಜ್​ ನೀಡಬೇಕು ಎಂದು ಬಿಗ್​ ಬಾಸ್​ ಆದೇಶಿಸಿದರು. ಆ ಸಂದರ್ಭದಲ್ಲಿ ಮಂಜು ಪಾವಗಡ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘ಈ ಮನೆಯಲ್ಲಿ ಎಲ್ಲರೂ ಅವರನ್ನೇ ಇಷ್ಟಪಡುತ್ತಾರೆ. ಪ್ರಾಯಶಃ ಅವರೇ ವಿನ್​ ಆಗುತ್ತಾರೆ ಎಂದು ನನ್ನ ಮನಸ್ಸು ಹೇಳುತ್ತಿದೆ. ಇಲ್ಲಿ ಹೆಚ್ಚು ಜನರು ಅದನ್ನೇ ಒಪ್ಪಿಕೊಳ್ಳುತ್ತಿದ್ದಾರೆ’ ಎಂದಿದ್ದಾರೆ ಶಂಕರ್​. ಹಾಗಂತ ಮಂಜುಗೆ ಅವರು ಲೈಕ್​ ಬ್ಯಾಡ್ಜ್​ ನೀಡಿಲ್ಲ. ಬದಲಿಗೆ ಡಿಸ್ಲೈಕ್​ ಬ್ಯಾಡ್ಜ್​ ನೀಡಿದ್ದಾರೆ!

ಮಂಜು ವಿನ್​ ಆಗುತ್ತಾರೆ ಎಂದು ಭರವಸೆ ಮೂಡುವ ಮಟ್ಟಕ್ಕೆ ಅವರು ಎಲ್ಲರಿಗೂ ಇಷ್ಟವಾಗಿದ್ದಾರೆ. ಆದರೂ ಕೂಡ ಶಂಕರ್​ ಅಶ್ವತ್ಥ್​ ಅವರು ಮಂಜುಗೆ ಡಿಸ್ಲೈಕ್​ ಬ್ಯಾಡ್ಜ್​ ನೀಡಿದ್ದಕ್ಕೆ ಒಂದು ಬಲವಾದ ಕಾರಣ ಇದೆ. ಅದು ಕೂಡ ತುಂಬ ಫನ್ನಿ. ’ಯಾರಿಗೂ ಗೊತ್ತಿರದ ವಿಷಯದಲ್ಲಿ ಒಂದು ತೊಂದರೆ ಆಗಿದೆ. ಅದನ್ನು ಹೇಳುತ್ತೇನೆ. ಮಂಜು ರಾತ್ರಿ ಹೊತ್ತು ಒಳ್ಳೇ ಮೋಟಾರ್​ ಬೋಟ್​. ಅಷ್ಟು ಗೊರಕೆ ಹೊಡೆಯುತ್ತಾರೆ. ಅದಕ್ಕಾಗಿ ನಾನು ಅವರಿಗೆ ಡಿಸ್ಲೈಕ್​ ನೀಡುತ್ತೇನೆ’ ಎಂದು ಶಂಕರ್​ ಅಶ್ವತ್ಥ್​ ಹೇಳಿದ್ದಾರೆ.

ತಮ್ಮನ್ನು ಎಲ್ಲರೂ ಇಷ್ಟಪಡುತ್ತಿರುವುದಕ್ಕೆ ಮಂಜು ಸಂತಸ ವ್ಯಕ್ತಪಡಿಸಿದ್ದಾರೆ. ‘ಬಹಳ ಖುಷಿ ಆಗುತ್ತದೆ. ನನ್ನ ಕಲ್ಪನೆಯಲ್ಲಿ ಬಿಗ್​ ಬಾಸ್​ ಎಂದರೆ ಹೊಡೆದಾಟ, ಜಗಳ ಎಂದುಕೊಂಡಿದ್ದೆ. ನಾನು ಟಿವಿಯಲ್ಲಿ ನೋಡಿದ್ದು ಹಾಗೆಯೇ. ನನಗೆ ಈ ಬಾರಿ ಆಫರ್​ ಬಂದಾಗ ಅಯ್ಯಯ್ಯೋ ಎನಿಸಿತ್ತು. ಒಳಗಡಗೆ ಬಂದಾಗ ಎಲ್ಲರೂ ಅವರವರ ಪಾಡಿಗೆ ಊಟ ಮಾಡುತ್ತಿದ್ದರು. ಅಲ್ಲಿಂದಲೇ ಜಳಗ ಶುರು ಅಂದುಕೊಂಡಿದ್ದೆ. ಆದರೆ ಇಷ್ಟು ಬೇಗ ಹೊಂದಾಣಿಕೆಯೊಂದಿಗೆ ಎಲ್ಲರೂ ಖುಷಿಖುಷಿಯಾಗಿ ಇದ್ದೇವೆ’ ಎಂದಿದ್ದಾರೆ ಮಂಜು.

ಇದನ್ನೂ ಓದಿ: Bigg Boss Kannada: ಮಂಜು ಕಂಡರೆ ದಿವ್ಯಾಗೆ ಯಾಕಿಷ್ಟು ಲವ್​? ಬಯಲಾಯ್ತು ಅಸಲಿ ವಿಷಯ!

Bigg Boss Kannada: ಮಧ್ಯರಾತ್ರಿ ನಾಗವಲ್ಲಿ ರೀತಿ ವರ್ತಿಸಿದ ನಿರ್ಮಲಾ! ವಿಚಿತ್ರ ವೇಷ ಕಂಡು ಬೆಚ್ಚಿ ಬಿತ್ತು ದೊಡ್ಮನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ