AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!

ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!
ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 6:56 PM

Share

ಬಿಗ್​ ಬಾಸ್​ ಮನೆ ಸೇರಿದವರಿಗೆ ಸ್ವಾರ್ಥ ಸ್ವಲ್ಪ ಹೆಚ್ಚೇ ಇರುತ್ತದೆ. ನಾನು ಗೆಲ್ಲಬೇಕು ಎನ್ನುವುದನ್ನು ತಲೆಯಲ್ಲಿ ತುಂಬಿಕೊಂಡು ಸ್ಪರ್ಧಿಗಳು ಆಟವಾಡುತ್ತಾರೆ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭವಾಗಿ ವಾರ ಕಳೆದಿದೆ. ಸ್ಪರ್ಧಿಗಳ ನಡುವೆ ನಿಧಾನವಾಗಿ ತಿಕ್ಕಾಟ ಆರಂಭವಾಗುತ್ತಿದೆ. ಎಲ್ಲರ ಸ್ವಾರ್ಥದ ಮುಖ ಅನಾವರಣಗೊಳ್ಳುತ್ತಿದೆ. ಇತ್ತೀಚೆಗೆ ಪ್ರಶಾಂತ್ ಸಂಬರಗಿ​-ಬ್ರೋ ಗೌಡ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಈಗ ಅಂಥದ್ದೇ ಘಟನೆ ಮರುಕಳಿಸಿದೆ. ದೊಡ್ಡವರು ಅಂತ ಸುಮ್ನೆ ಬಿಟ್ಟೀದಿನಿ ಮಗನೆ ಎಂದು ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​ ಹಾಕಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ಸ್ಪರ್ಧಿಗಳ ನಡುವೆ ನಡೆದ ಕಿತ್ತಾಟದ ಅನಾವರಣ ಆಗಿದೆ. ಇಂದು ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ ಒಂದು ಟೀಂ ವೈರಸ್​ ಆದರೆ, ಮತ್ತೊಬ್ಬರು ಮನುಷ್ಯರು. ವೈರಸ್​​ನಿಂದ ಮನುಷ್ಯರು ತಪ್ಪಿಸಿಕೊಳ್ಳಬೇಕು.

ಈ ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ. ಇದೇ ವಿಚಾರ ಬ್ರೋ ಗೌಡ ಅವರನ್ನು ಕೆರಳಿಸಿದೆ. ನೀನು ಮನುಷ್ಯನೋ ಅಥವಾ ಮೃಗವೋ? ಕತ್ತನ್ನು ಹಿಚಕುತ್ತೀಯಾ. ದೊಡ್ಡವನು ಎಂದು ಸುಮ್ನೆ ಬಿಟ್ಟಿದೀನಿ ಮಗನೆ ಎಂದು ಆವಾಜ್​ ಹಾಕಿದ್ದಾರೆ. ಆದರೆ, ಪ್ರಶಾಂತ್​ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಂತೆ ಕಂಡಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಅವರು ಕೂತಿದ್ದರು. ಅಷ್ಟಕ್ಕೂ ಕೊನೆಗೆ ಆಟ ಯಾವ ಗತಿ ಪಡೆದುಕೊಂಡಿತು, ಮನೆಯಲ್ಲಿ ಏನೆಲ್ಲ ಆಯಿತು ಎಂಬುದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

Published On - 6:11 pm, Tue, 9 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ