AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!

ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!
ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 6:56 PM

Share

ಬಿಗ್​ ಬಾಸ್​ ಮನೆ ಸೇರಿದವರಿಗೆ ಸ್ವಾರ್ಥ ಸ್ವಲ್ಪ ಹೆಚ್ಚೇ ಇರುತ್ತದೆ. ನಾನು ಗೆಲ್ಲಬೇಕು ಎನ್ನುವುದನ್ನು ತಲೆಯಲ್ಲಿ ತುಂಬಿಕೊಂಡು ಸ್ಪರ್ಧಿಗಳು ಆಟವಾಡುತ್ತಾರೆ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭವಾಗಿ ವಾರ ಕಳೆದಿದೆ. ಸ್ಪರ್ಧಿಗಳ ನಡುವೆ ನಿಧಾನವಾಗಿ ತಿಕ್ಕಾಟ ಆರಂಭವಾಗುತ್ತಿದೆ. ಎಲ್ಲರ ಸ್ವಾರ್ಥದ ಮುಖ ಅನಾವರಣಗೊಳ್ಳುತ್ತಿದೆ. ಇತ್ತೀಚೆಗೆ ಪ್ರಶಾಂತ್ ಸಂಬರಗಿ​-ಬ್ರೋ ಗೌಡ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಈಗ ಅಂಥದ್ದೇ ಘಟನೆ ಮರುಕಳಿಸಿದೆ. ದೊಡ್ಡವರು ಅಂತ ಸುಮ್ನೆ ಬಿಟ್ಟೀದಿನಿ ಮಗನೆ ಎಂದು ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​ ಹಾಕಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ಸ್ಪರ್ಧಿಗಳ ನಡುವೆ ನಡೆದ ಕಿತ್ತಾಟದ ಅನಾವರಣ ಆಗಿದೆ. ಇಂದು ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ ಒಂದು ಟೀಂ ವೈರಸ್​ ಆದರೆ, ಮತ್ತೊಬ್ಬರು ಮನುಷ್ಯರು. ವೈರಸ್​​ನಿಂದ ಮನುಷ್ಯರು ತಪ್ಪಿಸಿಕೊಳ್ಳಬೇಕು.

ಈ ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ. ಇದೇ ವಿಚಾರ ಬ್ರೋ ಗೌಡ ಅವರನ್ನು ಕೆರಳಿಸಿದೆ. ನೀನು ಮನುಷ್ಯನೋ ಅಥವಾ ಮೃಗವೋ? ಕತ್ತನ್ನು ಹಿಚಕುತ್ತೀಯಾ. ದೊಡ್ಡವನು ಎಂದು ಸುಮ್ನೆ ಬಿಟ್ಟಿದೀನಿ ಮಗನೆ ಎಂದು ಆವಾಜ್​ ಹಾಕಿದ್ದಾರೆ. ಆದರೆ, ಪ್ರಶಾಂತ್​ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಂತೆ ಕಂಡಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಅವರು ಕೂತಿದ್ದರು. ಅಷ್ಟಕ್ಕೂ ಕೊನೆಗೆ ಆಟ ಯಾವ ಗತಿ ಪಡೆದುಕೊಂಡಿತು, ಮನೆಯಲ್ಲಿ ಏನೆಲ್ಲ ಆಯಿತು ಎಂಬುದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

Published On - 6:11 pm, Tue, 9 March 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!