AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!

ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!
ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 6:56 PM

Share

ಬಿಗ್​ ಬಾಸ್​ ಮನೆ ಸೇರಿದವರಿಗೆ ಸ್ವಾರ್ಥ ಸ್ವಲ್ಪ ಹೆಚ್ಚೇ ಇರುತ್ತದೆ. ನಾನು ಗೆಲ್ಲಬೇಕು ಎನ್ನುವುದನ್ನು ತಲೆಯಲ್ಲಿ ತುಂಬಿಕೊಂಡು ಸ್ಪರ್ಧಿಗಳು ಆಟವಾಡುತ್ತಾರೆ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭವಾಗಿ ವಾರ ಕಳೆದಿದೆ. ಸ್ಪರ್ಧಿಗಳ ನಡುವೆ ನಿಧಾನವಾಗಿ ತಿಕ್ಕಾಟ ಆರಂಭವಾಗುತ್ತಿದೆ. ಎಲ್ಲರ ಸ್ವಾರ್ಥದ ಮುಖ ಅನಾವರಣಗೊಳ್ಳುತ್ತಿದೆ. ಇತ್ತೀಚೆಗೆ ಪ್ರಶಾಂತ್ ಸಂಬರಗಿ​-ಬ್ರೋ ಗೌಡ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಈಗ ಅಂಥದ್ದೇ ಘಟನೆ ಮರುಕಳಿಸಿದೆ. ದೊಡ್ಡವರು ಅಂತ ಸುಮ್ನೆ ಬಿಟ್ಟೀದಿನಿ ಮಗನೆ ಎಂದು ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​ ಹಾಕಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ಸ್ಪರ್ಧಿಗಳ ನಡುವೆ ನಡೆದ ಕಿತ್ತಾಟದ ಅನಾವರಣ ಆಗಿದೆ. ಇಂದು ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ ಒಂದು ಟೀಂ ವೈರಸ್​ ಆದರೆ, ಮತ್ತೊಬ್ಬರು ಮನುಷ್ಯರು. ವೈರಸ್​​ನಿಂದ ಮನುಷ್ಯರು ತಪ್ಪಿಸಿಕೊಳ್ಳಬೇಕು.

ಈ ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ. ಇದೇ ವಿಚಾರ ಬ್ರೋ ಗೌಡ ಅವರನ್ನು ಕೆರಳಿಸಿದೆ. ನೀನು ಮನುಷ್ಯನೋ ಅಥವಾ ಮೃಗವೋ? ಕತ್ತನ್ನು ಹಿಚಕುತ್ತೀಯಾ. ದೊಡ್ಡವನು ಎಂದು ಸುಮ್ನೆ ಬಿಟ್ಟಿದೀನಿ ಮಗನೆ ಎಂದು ಆವಾಜ್​ ಹಾಕಿದ್ದಾರೆ. ಆದರೆ, ಪ್ರಶಾಂತ್​ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಂತೆ ಕಂಡಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಅವರು ಕೂತಿದ್ದರು. ಅಷ್ಟಕ್ಕೂ ಕೊನೆಗೆ ಆಟ ಯಾವ ಗತಿ ಪಡೆದುಕೊಂಡಿತು, ಮನೆಯಲ್ಲಿ ಏನೆಲ್ಲ ಆಯಿತು ಎಂಬುದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

Published On - 6:11 pm, Tue, 9 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?