AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!

ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ.

Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!
ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 6:56 PM

Share

ಬಿಗ್​ ಬಾಸ್​ ಮನೆ ಸೇರಿದವರಿಗೆ ಸ್ವಾರ್ಥ ಸ್ವಲ್ಪ ಹೆಚ್ಚೇ ಇರುತ್ತದೆ. ನಾನು ಗೆಲ್ಲಬೇಕು ಎನ್ನುವುದನ್ನು ತಲೆಯಲ್ಲಿ ತುಂಬಿಕೊಂಡು ಸ್ಪರ್ಧಿಗಳು ಆಟವಾಡುತ್ತಾರೆ. ಈಗ ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭವಾಗಿ ವಾರ ಕಳೆದಿದೆ. ಸ್ಪರ್ಧಿಗಳ ನಡುವೆ ನಿಧಾನವಾಗಿ ತಿಕ್ಕಾಟ ಆರಂಭವಾಗುತ್ತಿದೆ. ಎಲ್ಲರ ಸ್ವಾರ್ಥದ ಮುಖ ಅನಾವರಣಗೊಳ್ಳುತ್ತಿದೆ. ಇತ್ತೀಚೆಗೆ ಪ್ರಶಾಂತ್ ಸಂಬರಗಿ​-ಬ್ರೋ ಗೌಡ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಈಗ ಅಂಥದ್ದೇ ಘಟನೆ ಮರುಕಳಿಸಿದೆ. ದೊಡ್ಡವರು ಅಂತ ಸುಮ್ನೆ ಬಿಟ್ಟೀದಿನಿ ಮಗನೆ ಎಂದು ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​ ಹಾಕಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ಸ್ಪರ್ಧಿಗಳ ನಡುವೆ ನಡೆದ ಕಿತ್ತಾಟದ ಅನಾವರಣ ಆಗಿದೆ. ಇಂದು ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ ಒಂದು ಟೀಂ ವೈರಸ್​ ಆದರೆ, ಮತ್ತೊಬ್ಬರು ಮನುಷ್ಯರು. ವೈರಸ್​​ನಿಂದ ಮನುಷ್ಯರು ತಪ್ಪಿಸಿಕೊಳ್ಳಬೇಕು.

ಈ ಆಟದಲ್ಲಿ ಪ್ರಶಾಂತ್​ ಸಂಬರಗಿ ತುಂಬಾನೇ ವೈಲೆಂಟ್​ ಆಗಿ ನಡೆದುಕೊಂಡಂತೆ ಕಾಣುತ್ತದೆ. ಆಟ ಆಡುವ ಭರದಲ್ಲಿ ಕೆಲವರಿಗೆ ಗಾಯ ಮಾಡಿದಂತೆಯೂ ಕಾಣುತ್ತಿದೆ. ಇದೇ ವಿಚಾರ ಬ್ರೋ ಗೌಡ ಅವರನ್ನು ಕೆರಳಿಸಿದೆ. ನೀನು ಮನುಷ್ಯನೋ ಅಥವಾ ಮೃಗವೋ? ಕತ್ತನ್ನು ಹಿಚಕುತ್ತೀಯಾ. ದೊಡ್ಡವನು ಎಂದು ಸುಮ್ನೆ ಬಿಟ್ಟಿದೀನಿ ಮಗನೆ ಎಂದು ಆವಾಜ್​ ಹಾಕಿದ್ದಾರೆ. ಆದರೆ, ಪ್ರಶಾಂತ್​ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಂತೆ ಕಂಡಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಅವರು ಕೂತಿದ್ದರು. ಅಷ್ಟಕ್ಕೂ ಕೊನೆಗೆ ಆಟ ಯಾವ ಗತಿ ಪಡೆದುಕೊಂಡಿತು, ಮನೆಯಲ್ಲಿ ಏನೆಲ್ಲ ಆಯಿತು ಎಂಬುದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

Published On - 6:11 pm, Tue, 9 March 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ