ಶಮಂತ್​ ಉಳಿದುಕೊಂಡಿದ್ದು ಸರಿ ಇದೆ; ಮನೆಯಿಂದ ಹೊರ ಬರುವಾಗ ಭಾವುಕರಾದ ಅಶ್ವತ್ಥ್​

ಮನೆಯಲ್ಲಿ ಎಲ್ಲರೂ ಇವರನ್ನು ತಂದೆ ರೀತಿಯಲ್ಲಿ ನೋಡುತ್ತಿದ್ದರು. ಇದೇ ಭಾವನಾತ್ಮಕ ಅಂಶ ಶಂಕರ್​ ಅವರು ಎರಡು ವಾರ ಎಲಿಮಿನೇಷ್​ನಗೆ ನಾಮಿನೇಟ್​ ಆಗುವುದನ್ನು ತಪ್ಪಿಸಿತ್ತು.

ಶಮಂತ್​ ಉಳಿದುಕೊಂಡಿದ್ದು ಸರಿ ಇದೆ; ಮನೆಯಿಂದ ಹೊರ ಬರುವಾಗ ಭಾವುಕರಾದ ಅಶ್ವತ್ಥ್​
ಶಂಕರ್​ ಅಶ್ವತ್ಥ್​

Updated on: Apr 04, 2021 | 10:38 PM

ಬಿಗ್​ ಬಾಸ್​ ಮನೆಯಲ್ಲಿ ಐದನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಕಳೆದ ವಾರ ಮನೆಯಲ್ಲಿ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದ ಶಂಕರ್​ ಅಶ್ವತ್ಥ್​ ಈ ವಾರ ಮನೆಯಿಂದ ಹೊರ ಬಿದ್ದಿದ್ದಾರೆ. ಅವರು ಮನೆಯಿಂದ ಹೊರಗೆ ಹೋಗೋಕೆ ಬಲವಾದ ಕಾರಣ ಕೂಡ ಇದೆ. 

ಈ ಬಾರಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದ ಸ್ಪರ್ಧಿಗಳಲ್ಲಿ ಶಂಕರ್​ ಅಶ್ವತ್ಥ್​ ವಯಸ್ಸಿನಲ್ಲಿ ಹಿರಿಯರಾಗಿದ್ದರು. ಇದು ಅವರಿಗೆ ಲಾಭವಾಗಿತ್ತು. ಮನೆಯಲ್ಲಿ ಎಲ್ಲರೂ ಇವರನ್ನು ತಂದೆ ರೀತಿಯಲ್ಲಿ ನೋಡುತ್ತಿದ್ದರು. ಇದೇ ಭಾವನಾತ್ಮಕ ಅಂಶ ಶಂಕರ್​ ಅವರು ಎರಡು ವಾರ ಎಲಿಮಿನೇಷ್​ನಗೆ ನಾಮಿನೇಟ್​ ಆಗುವುದನ್ನು ತಪ್ಪಿಸಿತ್ತು.

ಇತರ ಸ್ಪರ್ಧಿಗಳ ಜೊತೆಗೆ ವಯಸ್ಸಿನ ಅಂತರ ಇರುವುದರಿಂದ ಶಂಕರ್​ ಅಶ್ವತ್ಥ್​ ಅವರು ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಇದು ಅನೇಕ ಬಾರಿ ಸಾಬೀತಾಗಿದೆ. ಶಂಕರ್​ ಒಮ್ಮೊಮ್ಮೆ ಅವರ ಪಾಡಿಗೆ ಅವರು ಇದ್ದುಬಿಡುತ್ತಿದ್ದರು. ಇನ್ನು, ಸತತ ಎರಡು ವಾರ ಶಂಕರ್​ ಅಶ್ವತ್ಥ್​ ಅವರು ಕಳಪೆ ಪ್ರದರ್ಶನ ನೀಡಿದರು. ಮನೆಯ ಎಲ್ಲ ಸದಸ್ಯರು ಅವರಿಗೆ ಕಳಪೆ ಹಣೆಪಟ್ಟಿ ನೀಡಿದ್ದರಿಂದ ಎರಡು ಬಾರಿ ಅವರು ಜೈಲಿಗೆ ಹೋಗಬೇಕಾಯಿತು.

ಟಾಸ್ಕ್​ವೊಂದರಲ್ಲಿ ದಿವ್ಯಾ ಸುರೇಶ್​ ಮತ್ತು ವೈಷ್ಣವಿ ನಡುವೆ ಪೈಪೋಟಿ ನಡೆಯುತ್ತಿತ್ತು. ಸ್ವಿಮಿಂಗ್​ ಪೂಲ್​ನಲ್ಲಿ ಇಬ್ಬರೂ ನಿಂತುಕೊಂಡಿರುವಾಗ ಆ ಆಟವನ್ನು ನಿಲ್ಲಿಸಲು ಶಂಕರ್​ ಅಶ್ವತ್ಥ್​ ಪೂಲ್​ಗೆ ಹಾರಿ ವೈಷ್ಣವಿ ಅವರನ್ನು ಬೀಳಿಸಿದರು. ಅವರ ಈ ವರ್ತನೆಯಿಂದ ಅನೇಕರಿಗೆ ಬೇಸರ ಆಗಿತ್ತು. ಹೀಗಾಗಿ ಅವರು ಮನೆಯಿಂದ ಹೊರ ಬಂದಿದ್ದಾರೆ. ಬರುವಾಗ, ಶಮಂತ್​ ಉಳಿದುಕೊಂಡಿದ್ದು ಸರಿ ಇದೆ ಎಂದಿದ್ದಾರೆ.

ದಿನದಿಂದ ದಿನಕ್ಕೆ ಟಾಸ್ಕ್​ಗಳ ಸ್ವರೂಪ ತೀವ್ರವಾಗುತ್ತಲೇ ಇದೆ. ವಯಸ್ಸಿನ ಕಾರಣದಿಂದ ಶಂಕರ್​ ಅಶ್ವತ್ಥ್​ ಅವರು ಟಾಸ್ಕ್​ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಕಷ್ಟ ಆಗುತ್ತಿತ್ತು. ಇದು ಅನೇಕ ಬಾರಿ ಸಾಬೀತು ಕೂಡ ಆಗಿದೆ. ಸದ್ಯ 13 ಸ್ಪರ್ಧಿಗಳ ನಡುವೆ ಪೈಪೋಟಿ ಮುಂದುವರಿದಿದೆ. ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್​ ಅವರು ದೊಡ್ಮನೆಗೆ ಪ್ರವೇಶ ಪಡೆದಿದ್ದಾರೆ. ಅವರ ಆಗಮನದಿಂದಾಗಿ ಮನೆಯ ವಾತಾವರಣದಲ್ಲಿ ಬದಲಾವಣೆ ಬಂದಿದೆ. ಸದ್ಯ ಕ್ಯಾಪ್ಟನ್​ ಆಗಿ ಮಂಜು ಪಾವಗಡ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Published On - 10:23 pm, Sun, 4 April 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us