AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಒಂಬತ್ತನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ.

Bigg Boss Kannada Elimination: ಒಂಬತ್ತನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: May 02, 2021 | 2:21 PM

Share

ಒಂಬತ್ತನೇ ವಾರ ಬಿಗ್​ ಬಾಸ್ ಮನೆ ಸಾಕಷ್ಟು ಕುತೂಹಲಗಳಿಗೆ ಕಾರಣವಾಯಿತು. ಘಟಾನುಘಟಿ ಎನಿಸಿಕೊಂಡ ಸ್ಪರ್ಧಿಗಳೇ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​​ ಆಗಿದ್ದಾರೆ. ಹೀಗಾಗಿ, ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಕಡಿಮೆ ಸಮಯ ಸಿಕ್ಕಿದೆ. ಇದರಿಂದಲೂ ಈ ಬಾರಿಯ ಎಲಿಮಿನೇಷನ್​ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ.

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಇವರಲ್ಲಿ ಮನೆಯಿಂದ ಹೊರ ಹೋಗೋದು ಯಾರು ಅನ್ನೋದು ಸದ್ಯದ ಪ್ರಶ್ನೆ.

ಈ ಬಾರಿಯ ನಾಮಿನೇಷನ್​ನಲ್ಲಿ ಮಂಜುಗೆ ಹೆಚ್ಚು ವೋಟ್​ ಬಿದ್ದಿದೆ. ಆದರೆ, ಅವರ ಟಿಆರ್​ಪಿ ಕಡಿಮೆ ಆಗಿಲ್ಲ. ಹೀಗಾಗಿ, ಅವರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದು ಅನುಮಾನವೇ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟಂಟ್​ ಎನಿಸಿಕೊಂಡಿದ್ದಾರೆ. ಅವರು ಫೈನಲ್​ ವರೆಗೂ ಇರುತ್ತಾರೆ ಎಂಬುದು ಪ್ರೇಕ್ಷಕರ ಅಭಿಪ್ರಾಯ.

ಚಕ್ರವರ್ತಿ ಚಂದ್ರಚೂಡ್ ಕ್ಯಾಪ್ಟನ್​ ಆಗಿದ್ದಾರೆ. ಈ ಮೂಲಕ ಅವರು ಸ್ಟ್ರಾಂಗ್​ ಎಂದು ಗುರುತಿಸಿಕೊಂಡಿದ್ದಾರೆ. ಪ್ರಶಾಂತ್​ ಸಂಬರಗಿ ಕಳೆದವಾರದ ಎಲಿಮಿನೆಷನ್​ನಲ್ಲಿ ಜಸ್ಟ್ ಮಿಸ್​ ಆಗಿದ್ದರು. ಈ ವಾರ ಅವರು ಬಚಾವ್​ ಆಗಬಹುದು ಎನ್ನಲಾಗುತ್ತಿದೆ. ಈಗ ಉಳಿದಿದ್ದು, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್. ಇವರಲ್ಲಿ ಈ ವಾರ ಒಬ್ಬರು ಮನೆಯಿಂದ ಹೊರ ಹೋಗಬಹುದು ಎಂಬುದು ಪ್ರೇಕ್ಷಕರ ಅಭಿಪ್ರಾಯ. ಕೆಲವರು ಈ ವಾರ ಎಲಿಮಿನೇಷನ್​ ಇಲ್ಲ ಎಂದು ಕೂಡ ಹೇಳುತ್ತಿದ್ದಾರೆ. ಇದಕ್ಕೆ ಇಂದು (ಮೇ 2)  ರಾತ್ರಿ ಉತ್ತರ ಸಿಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಸುದೀಪ್ ಗುಣಮುಖ ಆಗಿದ್ದರೂ ಯಾಕೆ ಬಿಗ್​ ಬಾಸ್​ ನಡೆಸಿಕೊಡುತ್ತಿಲ್ಲ? ಜನರ ಪ್ರಶ್ನೆಗೆ ಇಲ್ಲಿದೆ ಕಿಚ್ಚನ ಉತ್ತರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್