AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಒಂಬತ್ತನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ.

Bigg Boss Kannada Elimination: ಒಂಬತ್ತನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: May 02, 2021 | 2:21 PM

Share

ಒಂಬತ್ತನೇ ವಾರ ಬಿಗ್​ ಬಾಸ್ ಮನೆ ಸಾಕಷ್ಟು ಕುತೂಹಲಗಳಿಗೆ ಕಾರಣವಾಯಿತು. ಘಟಾನುಘಟಿ ಎನಿಸಿಕೊಂಡ ಸ್ಪರ್ಧಿಗಳೇ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​​ ಆಗಿದ್ದಾರೆ. ಹೀಗಾಗಿ, ಈ ವಾರ ಬಿಗ್​ ಬಾಸ್​ ಮನೆಯಿಂದ ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಕಡಿಮೆ ಸಮಯ ಸಿಕ್ಕಿದೆ. ಇದರಿಂದಲೂ ಈ ಬಾರಿಯ ಎಲಿಮಿನೇಷನ್​ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ.

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಇವರಲ್ಲಿ ಮನೆಯಿಂದ ಹೊರ ಹೋಗೋದು ಯಾರು ಅನ್ನೋದು ಸದ್ಯದ ಪ್ರಶ್ನೆ.

ಈ ಬಾರಿಯ ನಾಮಿನೇಷನ್​ನಲ್ಲಿ ಮಂಜುಗೆ ಹೆಚ್ಚು ವೋಟ್​ ಬಿದ್ದಿದೆ. ಆದರೆ, ಅವರ ಟಿಆರ್​ಪಿ ಕಡಿಮೆ ಆಗಿಲ್ಲ. ಹೀಗಾಗಿ, ಅವರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದು ಅನುಮಾನವೇ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟಂಟ್​ ಎನಿಸಿಕೊಂಡಿದ್ದಾರೆ. ಅವರು ಫೈನಲ್​ ವರೆಗೂ ಇರುತ್ತಾರೆ ಎಂಬುದು ಪ್ರೇಕ್ಷಕರ ಅಭಿಪ್ರಾಯ.

ಚಕ್ರವರ್ತಿ ಚಂದ್ರಚೂಡ್ ಕ್ಯಾಪ್ಟನ್​ ಆಗಿದ್ದಾರೆ. ಈ ಮೂಲಕ ಅವರು ಸ್ಟ್ರಾಂಗ್​ ಎಂದು ಗುರುತಿಸಿಕೊಂಡಿದ್ದಾರೆ. ಪ್ರಶಾಂತ್​ ಸಂಬರಗಿ ಕಳೆದವಾರದ ಎಲಿಮಿನೆಷನ್​ನಲ್ಲಿ ಜಸ್ಟ್ ಮಿಸ್​ ಆಗಿದ್ದರು. ಈ ವಾರ ಅವರು ಬಚಾವ್​ ಆಗಬಹುದು ಎನ್ನಲಾಗುತ್ತಿದೆ. ಈಗ ಉಳಿದಿದ್ದು, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್. ಇವರಲ್ಲಿ ಈ ವಾರ ಒಬ್ಬರು ಮನೆಯಿಂದ ಹೊರ ಹೋಗಬಹುದು ಎಂಬುದು ಪ್ರೇಕ್ಷಕರ ಅಭಿಪ್ರಾಯ. ಕೆಲವರು ಈ ವಾರ ಎಲಿಮಿನೇಷನ್​ ಇಲ್ಲ ಎಂದು ಕೂಡ ಹೇಳುತ್ತಿದ್ದಾರೆ. ಇದಕ್ಕೆ ಇಂದು (ಮೇ 2)  ರಾತ್ರಿ ಉತ್ತರ ಸಿಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಸುದೀಪ್ ಗುಣಮುಖ ಆಗಿದ್ದರೂ ಯಾಕೆ ಬಿಗ್​ ಬಾಸ್​ ನಡೆಸಿಕೊಡುತ್ತಿಲ್ಲ? ಜನರ ಪ್ರಶ್ನೆಗೆ ಇಲ್ಲಿದೆ ಕಿಚ್ಚನ ಉತ್ತರ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್