Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ
ನಿರ್ಮಲಾ ಚೆನ್ನಪ್ಪ
Follow us
ರಾಜೇಶ್ ದುಗ್ಗುಮನೆ
|

Updated on: Mar 14, 2021 | 10:17 PM

ಬಹುಪ್ರತಿಭಾನ್ವಿತ ನಿರ್ಮಲಾ ಚೆನ್ನಪ್ಪ ಅವರು ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಗಳಲ್ಲಿ ಒಬ್ಬರಾಗಿ ಮನೆ ಸೇರಿದ್ದರು. ಆದರೆ, ಅವರು ಅಂದುಕೊಂಡ ಮಟ್ಟದಲ್ಲಿ ಆಟವಾಡಿಲ್ಲ. ಸತತ ಎರಡನೇ ವಾರವೂ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಕಳೆದ ವಾರ ಬಚಾವ್​ ಆಗಿದ್ದ ಅವರು, ಈ ವಾರ ಎಲಿಮಿನೇಟ್​ ಆಗಿದ್ದಾರೆ. ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದರು. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿತ್ತು.

ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾರೆ ಎಂಬುದು. ಹಗಲು-ರಾತ್ರಿ ಎನ್ನದೇ ಅವರು ಏನೇನೋ ಮಾತನಾಡುತ್ತ ಇರುತ್ತಿದ್ದರು. ಸೋಮವಾರ ನಾಮಿನೇಷನ್​ ಆಗುವಾಗ ಅತಿ ಹೆಚ್ಚು ಮತ ಬಿದ್ದಿದ್ದು ಕೂಡ ಇವರಿಗೇ ಆಗಿತ್ತು. ಈಗ ವೀಕ್ಷಕರು ನಿರ್ಮಲಾ ಕೈ ಹಿಡಿದಿಲ್ಲ. ಹೀಗಾಗಿ, ಅವರು ಬಿಗ್​ ಬಾಸ್ ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಅಭ್ಯರ್ಥಿ ಇವರಾಗಿದ್ದಾರೆ.

ನಾಮಿನೇಟ್​ ಆಗಿದ್ದರು. ಆದರೆ ಶನಿವಾರದ (ಮಾ.13) ‘ವಾರದ ಕಥೆ ಕಿಚ್ಚನ ಕಥೆ’ ಎಪಿಸೋಡ್​ನಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಮತ್ತು ದಿವ್ಯಾ ಸುರೇಶ್​ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​, ಗೀತಾ, ವಿಶ್ವ, ಚಂದ್ರಕಲಾ ಸೇಫ್​ ಆದರು. ಈ ಬಾರಿ ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಹೋಗುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಕೂದಲೆಳೆಯಲ್ಲಿ ಬಚಾವ್​ ಆಗಿದ್ದಾರೆ.

ವಿಚಿತ್ರವಾಗಿ ನಡೆದುಕೊಂಡಿದ್ದ ನಿರ್ಮಲಾ: ಕಳೆದವಾರ ದಿನವಿಡೀ ತುಂಬಾ ಸಿಂಪಲ್​ ಆಗಿ ಬಟ್ಟೆ ಧರಿಸಿದ್ದ ನಿರ್ಮಲಾ ಚೆನ್ನಪ್ಪ ಅವರು ಮಧ್ಯರಾತ್ರಿ ಆಗುತ್ತಿದ್ದಂತೆಯೇ ಸೀರೆ ಧರಿಸಿದ್ದರು. ಅಷ್ಟೇ ಅಲ್ಲ, ಮೇಕಪ್​ ಮಾಡಿಕೊಂಡು ಕನ್ನಡಿ ಮುಂದೆ ನಿಂತಿದ್ದರು. ಅದೂ ಸಾಲದೆಂಬಂತೆ ಮೂಲೆಯಲ್ಲಿ ಕುಳಿತು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಿದ್ದರು! ಇದನ್ನು ನೋಡಿದ ಎಲ್ಲರೂ ಅಚ್ಚರಿಗೆ ಒಳಗಾಗಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು.

ನಿರ್ಮಲಾ ಹಿನ್ನೆಲೆ: 2012 ರಲ್ಲಿ ತಲ್ಲಣ ಚಿತ್ರಕ್ಕಾಗಿ ನಿರ್ಮಲಾ ಪ್ರಶಸ್ತಿ ಗೆದ್ದಿದ್ದಾರೆ. ಮೂಲತಃ ಮಧ್ಯಮ ವರ್ಗದಿಂದ ಬಂದಿರುವ ಚೆನ್ನಪ್ಪ ತಮ್ಮ ಪದವಿ ಶಿಕ್ಷಣವನ್ನು ಮುಗಿಸಿದ್ದಾರೆ. ಕನ್ನಡ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ನೆಲೆಕಂಡುಕೊಂಡಿರುವ ಈ ನಟಿ, ಕನ್ನಡದ ಖ್ಯಾತ ಬರಹಗಾರ ಪೂರ್ಣ ಚಂದ್ರ ತೇಜಸ್ವಿಯವರ ಕಿರಗೂರಿನ ಗೈಯಾಳಿಗಳು ಕಾದಂಬರಿ ಆಧಾರಿತ ಚಿತ್ರಕ್ಕೆ ಡಬ್ಬಿಂಗ್​ ಕಲಾವಿದೆಯಾಗಿ ಸಹ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ