AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ
ನಿರ್ಮಲಾ ಚೆನ್ನಪ್ಪ
ರಾಜೇಶ್ ದುಗ್ಗುಮನೆ
|

Updated on: Mar 14, 2021 | 10:17 PM

Share

ಬಹುಪ್ರತಿಭಾನ್ವಿತ ನಿರ್ಮಲಾ ಚೆನ್ನಪ್ಪ ಅವರು ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಗಳಲ್ಲಿ ಒಬ್ಬರಾಗಿ ಮನೆ ಸೇರಿದ್ದರು. ಆದರೆ, ಅವರು ಅಂದುಕೊಂಡ ಮಟ್ಟದಲ್ಲಿ ಆಟವಾಡಿಲ್ಲ. ಸತತ ಎರಡನೇ ವಾರವೂ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಕಳೆದ ವಾರ ಬಚಾವ್​ ಆಗಿದ್ದ ಅವರು, ಈ ವಾರ ಎಲಿಮಿನೇಟ್​ ಆಗಿದ್ದಾರೆ. ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದರು. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿತ್ತು.

ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾರೆ ಎಂಬುದು. ಹಗಲು-ರಾತ್ರಿ ಎನ್ನದೇ ಅವರು ಏನೇನೋ ಮಾತನಾಡುತ್ತ ಇರುತ್ತಿದ್ದರು. ಸೋಮವಾರ ನಾಮಿನೇಷನ್​ ಆಗುವಾಗ ಅತಿ ಹೆಚ್ಚು ಮತ ಬಿದ್ದಿದ್ದು ಕೂಡ ಇವರಿಗೇ ಆಗಿತ್ತು. ಈಗ ವೀಕ್ಷಕರು ನಿರ್ಮಲಾ ಕೈ ಹಿಡಿದಿಲ್ಲ. ಹೀಗಾಗಿ, ಅವರು ಬಿಗ್​ ಬಾಸ್ ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಅಭ್ಯರ್ಥಿ ಇವರಾಗಿದ್ದಾರೆ.

ನಾಮಿನೇಟ್​ ಆಗಿದ್ದರು. ಆದರೆ ಶನಿವಾರದ (ಮಾ.13) ‘ವಾರದ ಕಥೆ ಕಿಚ್ಚನ ಕಥೆ’ ಎಪಿಸೋಡ್​ನಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಮತ್ತು ದಿವ್ಯಾ ಸುರೇಶ್​ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​, ಗೀತಾ, ವಿಶ್ವ, ಚಂದ್ರಕಲಾ ಸೇಫ್​ ಆದರು. ಈ ಬಾರಿ ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಹೋಗುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಕೂದಲೆಳೆಯಲ್ಲಿ ಬಚಾವ್​ ಆಗಿದ್ದಾರೆ.

ವಿಚಿತ್ರವಾಗಿ ನಡೆದುಕೊಂಡಿದ್ದ ನಿರ್ಮಲಾ: ಕಳೆದವಾರ ದಿನವಿಡೀ ತುಂಬಾ ಸಿಂಪಲ್​ ಆಗಿ ಬಟ್ಟೆ ಧರಿಸಿದ್ದ ನಿರ್ಮಲಾ ಚೆನ್ನಪ್ಪ ಅವರು ಮಧ್ಯರಾತ್ರಿ ಆಗುತ್ತಿದ್ದಂತೆಯೇ ಸೀರೆ ಧರಿಸಿದ್ದರು. ಅಷ್ಟೇ ಅಲ್ಲ, ಮೇಕಪ್​ ಮಾಡಿಕೊಂಡು ಕನ್ನಡಿ ಮುಂದೆ ನಿಂತಿದ್ದರು. ಅದೂ ಸಾಲದೆಂಬಂತೆ ಮೂಲೆಯಲ್ಲಿ ಕುಳಿತು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಿದ್ದರು! ಇದನ್ನು ನೋಡಿದ ಎಲ್ಲರೂ ಅಚ್ಚರಿಗೆ ಒಳಗಾಗಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು.

ನಿರ್ಮಲಾ ಹಿನ್ನೆಲೆ: 2012 ರಲ್ಲಿ ತಲ್ಲಣ ಚಿತ್ರಕ್ಕಾಗಿ ನಿರ್ಮಲಾ ಪ್ರಶಸ್ತಿ ಗೆದ್ದಿದ್ದಾರೆ. ಮೂಲತಃ ಮಧ್ಯಮ ವರ್ಗದಿಂದ ಬಂದಿರುವ ಚೆನ್ನಪ್ಪ ತಮ್ಮ ಪದವಿ ಶಿಕ್ಷಣವನ್ನು ಮುಗಿಸಿದ್ದಾರೆ. ಕನ್ನಡ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ನೆಲೆಕಂಡುಕೊಂಡಿರುವ ಈ ನಟಿ, ಕನ್ನಡದ ಖ್ಯಾತ ಬರಹಗಾರ ಪೂರ್ಣ ಚಂದ್ರ ತೇಜಸ್ವಿಯವರ ಕಿರಗೂರಿನ ಗೈಯಾಳಿಗಳು ಕಾದಂಬರಿ ಆಧಾರಿತ ಚಿತ್ರಕ್ಕೆ ಡಬ್ಬಿಂಗ್​ ಕಲಾವಿದೆಯಾಗಿ ಸಹ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!