AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ
ನಿರ್ಮಲಾ ಚೆನ್ನಪ್ಪ
ರಾಜೇಶ್ ದುಗ್ಗುಮನೆ
|

Updated on: Mar 14, 2021 | 10:17 PM

Share

ಬಹುಪ್ರತಿಭಾನ್ವಿತ ನಿರ್ಮಲಾ ಚೆನ್ನಪ್ಪ ಅವರು ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಗಳಲ್ಲಿ ಒಬ್ಬರಾಗಿ ಮನೆ ಸೇರಿದ್ದರು. ಆದರೆ, ಅವರು ಅಂದುಕೊಂಡ ಮಟ್ಟದಲ್ಲಿ ಆಟವಾಡಿಲ್ಲ. ಸತತ ಎರಡನೇ ವಾರವೂ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಕಳೆದ ವಾರ ಬಚಾವ್​ ಆಗಿದ್ದ ಅವರು, ಈ ವಾರ ಎಲಿಮಿನೇಟ್​ ಆಗಿದ್ದಾರೆ. ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದರು. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿತ್ತು.

ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾರೆ ಎಂಬುದು. ಹಗಲು-ರಾತ್ರಿ ಎನ್ನದೇ ಅವರು ಏನೇನೋ ಮಾತನಾಡುತ್ತ ಇರುತ್ತಿದ್ದರು. ಸೋಮವಾರ ನಾಮಿನೇಷನ್​ ಆಗುವಾಗ ಅತಿ ಹೆಚ್ಚು ಮತ ಬಿದ್ದಿದ್ದು ಕೂಡ ಇವರಿಗೇ ಆಗಿತ್ತು. ಈಗ ವೀಕ್ಷಕರು ನಿರ್ಮಲಾ ಕೈ ಹಿಡಿದಿಲ್ಲ. ಹೀಗಾಗಿ, ಅವರು ಬಿಗ್​ ಬಾಸ್ ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಅಭ್ಯರ್ಥಿ ಇವರಾಗಿದ್ದಾರೆ.

ನಾಮಿನೇಟ್​ ಆಗಿದ್ದರು. ಆದರೆ ಶನಿವಾರದ (ಮಾ.13) ‘ವಾರದ ಕಥೆ ಕಿಚ್ಚನ ಕಥೆ’ ಎಪಿಸೋಡ್​ನಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಮತ್ತು ದಿವ್ಯಾ ಸುರೇಶ್​ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​, ಗೀತಾ, ವಿಶ್ವ, ಚಂದ್ರಕಲಾ ಸೇಫ್​ ಆದರು. ಈ ಬಾರಿ ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಹೋಗುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಕೂದಲೆಳೆಯಲ್ಲಿ ಬಚಾವ್​ ಆಗಿದ್ದಾರೆ.

ವಿಚಿತ್ರವಾಗಿ ನಡೆದುಕೊಂಡಿದ್ದ ನಿರ್ಮಲಾ: ಕಳೆದವಾರ ದಿನವಿಡೀ ತುಂಬಾ ಸಿಂಪಲ್​ ಆಗಿ ಬಟ್ಟೆ ಧರಿಸಿದ್ದ ನಿರ್ಮಲಾ ಚೆನ್ನಪ್ಪ ಅವರು ಮಧ್ಯರಾತ್ರಿ ಆಗುತ್ತಿದ್ದಂತೆಯೇ ಸೀರೆ ಧರಿಸಿದ್ದರು. ಅಷ್ಟೇ ಅಲ್ಲ, ಮೇಕಪ್​ ಮಾಡಿಕೊಂಡು ಕನ್ನಡಿ ಮುಂದೆ ನಿಂತಿದ್ದರು. ಅದೂ ಸಾಲದೆಂಬಂತೆ ಮೂಲೆಯಲ್ಲಿ ಕುಳಿತು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಿದ್ದರು! ಇದನ್ನು ನೋಡಿದ ಎಲ್ಲರೂ ಅಚ್ಚರಿಗೆ ಒಳಗಾಗಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು.

ನಿರ್ಮಲಾ ಹಿನ್ನೆಲೆ: 2012 ರಲ್ಲಿ ತಲ್ಲಣ ಚಿತ್ರಕ್ಕಾಗಿ ನಿರ್ಮಲಾ ಪ್ರಶಸ್ತಿ ಗೆದ್ದಿದ್ದಾರೆ. ಮೂಲತಃ ಮಧ್ಯಮ ವರ್ಗದಿಂದ ಬಂದಿರುವ ಚೆನ್ನಪ್ಪ ತಮ್ಮ ಪದವಿ ಶಿಕ್ಷಣವನ್ನು ಮುಗಿಸಿದ್ದಾರೆ. ಕನ್ನಡ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ನೆಲೆಕಂಡುಕೊಂಡಿರುವ ಈ ನಟಿ, ಕನ್ನಡದ ಖ್ಯಾತ ಬರಹಗಾರ ಪೂರ್ಣ ಚಂದ್ರ ತೇಜಸ್ವಿಯವರ ಕಿರಗೂರಿನ ಗೈಯಾಳಿಗಳು ಕಾದಂಬರಿ ಆಧಾರಿತ ಚಿತ್ರಕ್ಕೆ ಡಬ್ಬಿಂಗ್​ ಕಲಾವಿದೆಯಾಗಿ ಸಹ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು