AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ

ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ.

Bigg Boss Kannada Elimination: ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆದ ನಿರ್ಮಲಾ ಚೆನ್ನಪ್ಪ; ಇಲ್ಲಿದೆ ಕಾರಣ
ನಿರ್ಮಲಾ ಚೆನ್ನಪ್ಪ
ರಾಜೇಶ್ ದುಗ್ಗುಮನೆ
|

Updated on: Mar 14, 2021 | 10:17 PM

Share

ಬಹುಪ್ರತಿಭಾನ್ವಿತ ನಿರ್ಮಲಾ ಚೆನ್ನಪ್ಪ ಅವರು ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಗಳಲ್ಲಿ ಒಬ್ಬರಾಗಿ ಮನೆ ಸೇರಿದ್ದರು. ಆದರೆ, ಅವರು ಅಂದುಕೊಂಡ ಮಟ್ಟದಲ್ಲಿ ಆಟವಾಡಿಲ್ಲ. ಸತತ ಎರಡನೇ ವಾರವೂ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಕಳೆದ ವಾರ ಬಚಾವ್​ ಆಗಿದ್ದ ಅವರು, ಈ ವಾರ ಎಲಿಮಿನೇಟ್​ ಆಗಿದ್ದಾರೆ. ನಿರ್ಮಲಾ ಮನೆಯವರ ಜತೆ ಹೆಚ್ಚು ಹೊಂದುಕೊಳ್ಳುತ್ತಿಲ್ಲ. ಅವರೇ ಬೇರೆ ರೀತಿ ಇರುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದರು. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿತ್ತು.

ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾರೆ ಎಂಬುದು. ಹಗಲು-ರಾತ್ರಿ ಎನ್ನದೇ ಅವರು ಏನೇನೋ ಮಾತನಾಡುತ್ತ ಇರುತ್ತಿದ್ದರು. ಸೋಮವಾರ ನಾಮಿನೇಷನ್​ ಆಗುವಾಗ ಅತಿ ಹೆಚ್ಚು ಮತ ಬಿದ್ದಿದ್ದು ಕೂಡ ಇವರಿಗೇ ಆಗಿತ್ತು. ಈಗ ವೀಕ್ಷಕರು ನಿರ್ಮಲಾ ಕೈ ಹಿಡಿದಿಲ್ಲ. ಹೀಗಾಗಿ, ಅವರು ಬಿಗ್​ ಬಾಸ್ ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಅಭ್ಯರ್ಥಿ ಇವರಾಗಿದ್ದಾರೆ.

ನಾಮಿನೇಟ್​ ಆಗಿದ್ದರು. ಆದರೆ ಶನಿವಾರದ (ಮಾ.13) ‘ವಾರದ ಕಥೆ ಕಿಚ್ಚನ ಕಥೆ’ ಎಪಿಸೋಡ್​ನಲ್ಲಿ ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಮತ್ತು ದಿವ್ಯಾ ಸುರೇಶ್​ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​, ಗೀತಾ, ವಿಶ್ವ, ಚಂದ್ರಕಲಾ ಸೇಫ್​ ಆದರು. ಈ ಬಾರಿ ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಹೋಗುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಕೂದಲೆಳೆಯಲ್ಲಿ ಬಚಾವ್​ ಆಗಿದ್ದಾರೆ.

ವಿಚಿತ್ರವಾಗಿ ನಡೆದುಕೊಂಡಿದ್ದ ನಿರ್ಮಲಾ: ಕಳೆದವಾರ ದಿನವಿಡೀ ತುಂಬಾ ಸಿಂಪಲ್​ ಆಗಿ ಬಟ್ಟೆ ಧರಿಸಿದ್ದ ನಿರ್ಮಲಾ ಚೆನ್ನಪ್ಪ ಅವರು ಮಧ್ಯರಾತ್ರಿ ಆಗುತ್ತಿದ್ದಂತೆಯೇ ಸೀರೆ ಧರಿಸಿದ್ದರು. ಅಷ್ಟೇ ಅಲ್ಲ, ಮೇಕಪ್​ ಮಾಡಿಕೊಂಡು ಕನ್ನಡಿ ಮುಂದೆ ನಿಂತಿದ್ದರು. ಅದೂ ಸಾಲದೆಂಬಂತೆ ಮೂಲೆಯಲ್ಲಿ ಕುಳಿತು ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಿದ್ದರು! ಇದನ್ನು ನೋಡಿದ ಎಲ್ಲರೂ ಅಚ್ಚರಿಗೆ ಒಳಗಾಗಿದ್ದರು. ಇದು ಸಾಕಷ್ಟು ಚರ್ಚೆ ಆಗಿತ್ತು.

ನಿರ್ಮಲಾ ಹಿನ್ನೆಲೆ: 2012 ರಲ್ಲಿ ತಲ್ಲಣ ಚಿತ್ರಕ್ಕಾಗಿ ನಿರ್ಮಲಾ ಪ್ರಶಸ್ತಿ ಗೆದ್ದಿದ್ದಾರೆ. ಮೂಲತಃ ಮಧ್ಯಮ ವರ್ಗದಿಂದ ಬಂದಿರುವ ಚೆನ್ನಪ್ಪ ತಮ್ಮ ಪದವಿ ಶಿಕ್ಷಣವನ್ನು ಮುಗಿಸಿದ್ದಾರೆ. ಕನ್ನಡ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ನೆಲೆಕಂಡುಕೊಂಡಿರುವ ಈ ನಟಿ, ಕನ್ನಡದ ಖ್ಯಾತ ಬರಹಗಾರ ಪೂರ್ಣ ಚಂದ್ರ ತೇಜಸ್ವಿಯವರ ಕಿರಗೂರಿನ ಗೈಯಾಳಿಗಳು ಕಾದಂಬರಿ ಆಧಾರಿತ ಚಿತ್ರಕ್ಕೆ ಡಬ್ಬಿಂಗ್​ ಕಲಾವಿದೆಯಾಗಿ ಸಹ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:‘ಅಸಭ್ಯವಾಗಿ ಮುಟ್ಟಿದರೆ ಬಿಗ್​ ಬಾಸ್​ ಸಹಿಸಲ್ಲ’: ಸುದೀಪ್​ ಹೀಗೆ ಎಚ್ಚರಿಕೆ ನೀಡಿದ್ದು ಯಾರಿಗೆ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್