Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ.

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!
ಬಿಗ್ ಬಾಸ್​ ಕನ್ನಡ ಸೀಸನ್​ 8
Follow us
|

Updated on: May 02, 2021 | 9:39 PM

ಬಿಗ್​ ಬಾಸ್​ ಎಂಟನೇ ಸೀಸನ್​ ಈಗ ಒಂಬತ್ತನೇ ವಾರ ಪೂರೈಸಿದೆ. ಪ್ರತಿವಾರವೂ ಒಬ್ಬರೊಬ್ಬರು ಹೊರ ಹೋಗಿದ್ದಾರೆ. ಆದರೆ, ಒಂಬತ್ತನೇ ವಾರ ಹೊಸ ಟ್ವಿಸ್ಟ್​ ಸಿಕ್ಕಿದೆ. ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ! ಈ ಮೂಲಕ ನಾಮಿನೇಟ್​ ಆದ ಎಲ್ಲರೂ 10ನೇ ವಾರವೂ ಮುಂದುವರಿಯುತ್ತಿದ್ದಾರೆ.  ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ. ಹೀಗಾಗಿ, ಎಲಿಮಿನೇಷನ್​ ನಡೆದಿಲ್ಲ.

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಇವರಲ್ಲಿ ಮನೆಯಿಂದ ಹೊರ ಹೋಗೋದು ಯಾರು ಅನ್ನೋ ಪ್ರಶ್ನೆ ಆಗಿತ್ತು.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಪ್ರಶಾಂತ್​ ಹಾಗೂ ಚಕ್ರವರ್ತಿಯಿಂದ ಮನೆಯ ವಾತಾವರಣ ಹಾಳಾಯಿತು ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಮನೆಯವರು ಅವರನ್ನೂ ನಾಮಿನೇಟ್​ ಮಾಡಿದರು. ಅರವಿಂದ್ ಸ್ಟ್ರಾಂಗ್​ ಅಭ್ಯರ್ಥಿ ಎಂದು ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದರು. ಆದರೆ, ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಸುದೀಪ್ ಗುಣಮುಖ ಆಗಿದ್ದರೂ ಯಾಕೆ ಬಿಗ್​ ಬಾಸ್​ ನಡೆಸಿಕೊಡುತ್ತಿಲ್ಲ? ಜನರ ಪ್ರಶ್ನೆಗೆ ಇಲ್ಲಿದೆ ಕಿಚ್ಚನ ಉತ್ತರ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ