AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ.

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: May 02, 2021 | 9:39 PM

Share

ಬಿಗ್​ ಬಾಸ್​ ಎಂಟನೇ ಸೀಸನ್​ ಈಗ ಒಂಬತ್ತನೇ ವಾರ ಪೂರೈಸಿದೆ. ಪ್ರತಿವಾರವೂ ಒಬ್ಬರೊಬ್ಬರು ಹೊರ ಹೋಗಿದ್ದಾರೆ. ಆದರೆ, ಒಂಬತ್ತನೇ ವಾರ ಹೊಸ ಟ್ವಿಸ್ಟ್​ ಸಿಕ್ಕಿದೆ. ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ! ಈ ಮೂಲಕ ನಾಮಿನೇಟ್​ ಆದ ಎಲ್ಲರೂ 10ನೇ ವಾರವೂ ಮುಂದುವರಿಯುತ್ತಿದ್ದಾರೆ.  ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ. ಹೀಗಾಗಿ, ಎಲಿಮಿನೇಷನ್​ ನಡೆದಿಲ್ಲ.

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಇವರಲ್ಲಿ ಮನೆಯಿಂದ ಹೊರ ಹೋಗೋದು ಯಾರು ಅನ್ನೋ ಪ್ರಶ್ನೆ ಆಗಿತ್ತು.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಪ್ರಶಾಂತ್​ ಹಾಗೂ ಚಕ್ರವರ್ತಿಯಿಂದ ಮನೆಯ ವಾತಾವರಣ ಹಾಳಾಯಿತು ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಮನೆಯವರು ಅವರನ್ನೂ ನಾಮಿನೇಟ್​ ಮಾಡಿದರು. ಅರವಿಂದ್ ಸ್ಟ್ರಾಂಗ್​ ಅಭ್ಯರ್ಥಿ ಎಂದು ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದರು. ಆದರೆ, ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಸುದೀಪ್ ಗುಣಮುಖ ಆಗಿದ್ದರೂ ಯಾಕೆ ಬಿಗ್​ ಬಾಸ್​ ನಡೆಸಿಕೊಡುತ್ತಿಲ್ಲ? ಜನರ ಪ್ರಶ್ನೆಗೆ ಇಲ್ಲಿದೆ ಕಿಚ್ಚನ ಉತ್ತರ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ