Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

|

Updated on: May 02, 2021 | 9:39 PM

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ.

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!
ಬಿಗ್ ಬಾಸ್​ ಕನ್ನಡ ಸೀಸನ್​ 8
Follow us on

ಬಿಗ್​ ಬಾಸ್​ ಎಂಟನೇ ಸೀಸನ್​ ಈಗ ಒಂಬತ್ತನೇ ವಾರ ಪೂರೈಸಿದೆ. ಪ್ರತಿವಾರವೂ ಒಬ್ಬರೊಬ್ಬರು ಹೊರ ಹೋಗಿದ್ದಾರೆ. ಆದರೆ, ಒಂಬತ್ತನೇ ವಾರ ಹೊಸ ಟ್ವಿಸ್ಟ್​ ಸಿಕ್ಕಿದೆ. ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ! ಈ ಮೂಲಕ ನಾಮಿನೇಟ್​ ಆದ ಎಲ್ಲರೂ 10ನೇ ವಾರವೂ ಮುಂದುವರಿಯುತ್ತಿದ್ದಾರೆ.  ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಹೀಗಾಗಿ ವೀಕ್ಷಕರಿಗೆ ಮತ ಹಾಕಲು ಸಮಯ ಸಿಕ್ಕಿಲ್ಲ. ಹೀಗಾಗಿ, ಎಲಿಮಿನೇಷನ್​ ನಡೆದಿಲ್ಲ.

ಈ ಬಾರಿ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.​, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಇವರಲ್ಲಿ ಮನೆಯಿಂದ ಹೊರ ಹೋಗೋದು ಯಾರು ಅನ್ನೋ ಪ್ರಶ್ನೆ ಆಗಿತ್ತು.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಪ್ರಶಾಂತ್​ ಹಾಗೂ ಚಕ್ರವರ್ತಿಯಿಂದ ಮನೆಯ ವಾತಾವರಣ ಹಾಳಾಯಿತು ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಮನೆಯವರು ಅವರನ್ನೂ ನಾಮಿನೇಟ್​ ಮಾಡಿದರು. ಅರವಿಂದ್ ಸ್ಟ್ರಾಂಗ್​ ಅಭ್ಯರ್ಥಿ ಎಂದು ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದರು. ಆದರೆ, ಈ ವಾರ ಯಾರೊಬ್ಬರೂ ಮನೆಯಿಂದ ಹೊರ ಹೋಗಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಸುದೀಪ್ ಗುಣಮುಖ ಆಗಿದ್ದರೂ ಯಾಕೆ ಬಿಗ್​ ಬಾಸ್​ ನಡೆಸಿಕೊಡುತ್ತಿಲ್ಲ? ಜನರ ಪ್ರಶ್ನೆಗೆ ಇಲ್ಲಿದೆ ಕಿಚ್ಚನ ಉತ್ತರ