AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಓವರ್​ ಕಾನ್ಫಿಡೆನ್ಸ್​ ಮುಳುವಾಯ್ತು; ಬಿಗ್​ ಬಾಸ್​ನಿಂದ ರಾಜೀವ್​ ಔಟ್

Rajeev: ಪ್ರತಿ ಸ್ಪರ್ಧಿಗೆ ಭಿನ್ನ ಭಿನ್ನ ಟಾಸ್ಕ್​ ನೀಡುವ ಮೂಲಕ ಎಲಿಮಿನೇಷನ್​ನಿಂದ ಬಚಾವ್ ಮಾಡಲಾಯಿತು. ಕೊನೆಗೆ ಮನೆಯಿಂದ ಹೊರ ಹೋಗುವವರ ವಿಟಿ ತೋರಿಸಲಾಯಿತು. ಈ ವೇಳೆ ರಾಜೀವ್​ ಅವರ ವಿಡಿಯೋ ಬಂತು.

Bigg Boss Kannada Elimination: ಓವರ್​ ಕಾನ್ಫಿಡೆನ್ಸ್​ ಮುಳುವಾಯ್ತು; ಬಿಗ್​ ಬಾಸ್​ನಿಂದ ರಾಜೀವ್​ ಔಟ್
ರಾಜೀವ್​ - ಬಿಗ್​ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on:Apr 25, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ಓವರ್​ ಕಾನ್ಫಿಡೆನ್ಸ್​​ ಆಗಿದ್ದವರು ರಾಜೀವ್​. ಈಗ ಅವರು ಬಿಗ್​ ಬಾಸ್​ ಮನೆಯಿಂದ ಔಟ್​ ಆಗಿದ್ದಾರೆ. ತಮ್ಮ ಬಳಿ ಗೋಲ್ಡನ್​ ಪಾಸ್ ಇದ್ದರೂ ಬಳಕೆ ಮಾಡಿಕೊಳ್ಳದೆ ಅವರು ಮನೆಯಿಂದ ಹೊರ ಹೋಗುತ್ತಿದ್ದಾರೆ. ಈ ಮೂಲಕ ಎಂಟನೇ ವಾರಕ್ಕೆ ಅವರ ಪಯಣ ಅಂತ್ಯವಾಗಿದೆ.

ಈ ವಾರ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದು ನಾಮಿನೇಟ್​ ಆದವರು ಮಂಜು ಹಾಗೂ ದಿವ್ಯಾ. ಮಂಜು ಮತ್ತು ದಿವ್ಯಾ ಏಳನೇ ವಾರದ ಟಾಸ್ಕ್​ನಲ್ಲಿ ಮೋಸದ ಹಾದಿ ತುಳಿದಿದ್ದರು. ಇದು ಮನೆಮಂದಿಗೆ ಶಾಕ್​ ನೀಡಿತ್ತು. ಈ ಘಟನೆಯಿಂದ ಮನೆಯ ಸ್ಪರ್ಧಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಹೀಗಾಗಿ, ಬಹುತೇಕರು ಮಂಜು ಮತ್ತು ದಿವ್ಯಾ ಹೆಸರನ್ನು ತೆಗೆದುಕೊಂಡರು.

ರಘು ವಿರುದ್ಧ ಮಂಜು ಹಾಗೂ ದಿವ್ಯಾ ಸುರೇಶ್​ ವೋಟ್​ ಮಾಡಿದ್ದಾರೆ. ವೈಷ್ಣವಿ ವಿರುದ್ಧ  ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ಮತ ಹಾಕಿದ್ದಾರೆ. ಹೀಗಾಗಿ, ರಘು ಮತ್ತು ವೈಷ್ಣವಿ ಕೂಡ ನಾಮಿನೇಟ್​ ಆಗಿದ್ದಾರೆ. ಕಳೆದ ವಾರದ ಟಾಸ್ಕ್​ನಲ್ಲಿ ಅಷ್ಟು ಉತ್ತಮವಾಗಿ ಆಡಿಲ್ಲ ಎಂಬ ಕಾರಣಕ್ಕೆ ಪ್ರಶಾಂತ್​ ಸಂಬರಗಿಯನ್ನು ನಾಮಿನೇಟ್​ ಮಾಡಲಾಗಿತ್ತು. ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ಕ್ಯಾಪ್ಟನ್​ ಅರವಿಂದ್​ಗೆ ಇತ್ತು. ಈ ವೇಳೆ ರಾಜೀವ್ ಅವರನ್ನು ನಾಮಿನೇಟ್​ ಮಾಡಿದರು.

ರಾಜೀವ್​ ಬಳಿ ಗೋಲ್ಡನ್​ ಪಾಸ್​ ಇದೆ ಎನ್ನುವ ಕಾರಣಕ್ಕೆ ರಾಜೀವ್​ ಅವರನ್ನು ಅರವಿಂದ್ ನಾಮಿನೇಟ್​ ಮಾಡಿದ್ದರು. ಆದರೆ, ವೀಕ್ಷಕರು ನನ್ನನ್ನು ಗೆಲ್ಲಿಸುತ್ತಾರೆ ಎಂದು ತೀವ್ರವಾಗಿ ನಂಬಿದ್ದ ರಾಜೀವ್​ ಗೋಲ್ಡನ್​ ಪಾಸ್​ ಬಳಸಲು ಹೋಗಲೇ ಇಲ್ಲ. ಆದರೆ, ಓವರ್​ ಕಾನ್ಫಿಡೆನ್ಸ್​ ಮುಳುವಾಗಿದೆ.

ಪ್ರತಿ ಸ್ಪರ್ಧಿಗೆ ಭಿನ್ನ ಭಿನ್ನ ಟಾಸ್ಕ್​ ನೀಡುವ ಮೂಲಕ ಎಲಿಮಿನೇಷನ್​ನಿಂದ ಬಚಾವ್ ಮಾಡಲಾಯಿತು. ಕೊನೆಗೆ ಮನೆಯಿಂದ ಹೊರ ಹೋಗುವವರ ವಿಟಿ ತೋರಿಸಲಾಯಿತು. ಈ ವೇಳೆ ರಾಜೀವ್​ ಅವರ ವಿಡಿಯೋ ಬಂತು. ಇದು ಮನೆಯವರಿಗೆ ಒಮ್ಮೆ ಶಾಕ್​ ಮೂಡಿಸಿದೆ. ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವಾಗ ರಾಜೀವ್​​ ಗೋಲ್ಡನ್​ ಪಾಸ್​ ಶುಭಾ ಕೈಗೆ ನೀಡಿ ತೆರಳಿದ್ದಾರೆ.

ಇದನ್ನೂ ಓದಿ: Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?

Vaarada Kathe Kicchana Jothe: ಈ ವಾರವೂ ಬಿಗ್ ಬಾಸ್ ಶೋ ಹೋಸ್ಟ್ ಮಾಡಲ್ಲ ಕಿಚ್ಚ ಸುದೀಪ್

Published On - 9:58 pm, Sun, 25 April 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು