AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಓವರ್​ ಕಾನ್ಫಿಡೆನ್ಸ್​ ಮುಳುವಾಯ್ತು; ಬಿಗ್​ ಬಾಸ್​ನಿಂದ ರಾಜೀವ್​ ಔಟ್

Rajeev: ಪ್ರತಿ ಸ್ಪರ್ಧಿಗೆ ಭಿನ್ನ ಭಿನ್ನ ಟಾಸ್ಕ್​ ನೀಡುವ ಮೂಲಕ ಎಲಿಮಿನೇಷನ್​ನಿಂದ ಬಚಾವ್ ಮಾಡಲಾಯಿತು. ಕೊನೆಗೆ ಮನೆಯಿಂದ ಹೊರ ಹೋಗುವವರ ವಿಟಿ ತೋರಿಸಲಾಯಿತು. ಈ ವೇಳೆ ರಾಜೀವ್​ ಅವರ ವಿಡಿಯೋ ಬಂತು.

Bigg Boss Kannada Elimination: ಓವರ್​ ಕಾನ್ಫಿಡೆನ್ಸ್​ ಮುಳುವಾಯ್ತು; ಬಿಗ್​ ಬಾಸ್​ನಿಂದ ರಾಜೀವ್​ ಔಟ್
ರಾಜೀವ್​ - ಬಿಗ್​ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on:Apr 25, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ಓವರ್​ ಕಾನ್ಫಿಡೆನ್ಸ್​​ ಆಗಿದ್ದವರು ರಾಜೀವ್​. ಈಗ ಅವರು ಬಿಗ್​ ಬಾಸ್​ ಮನೆಯಿಂದ ಔಟ್​ ಆಗಿದ್ದಾರೆ. ತಮ್ಮ ಬಳಿ ಗೋಲ್ಡನ್​ ಪಾಸ್ ಇದ್ದರೂ ಬಳಕೆ ಮಾಡಿಕೊಳ್ಳದೆ ಅವರು ಮನೆಯಿಂದ ಹೊರ ಹೋಗುತ್ತಿದ್ದಾರೆ. ಈ ಮೂಲಕ ಎಂಟನೇ ವಾರಕ್ಕೆ ಅವರ ಪಯಣ ಅಂತ್ಯವಾಗಿದೆ.

ಈ ವಾರ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದು ನಾಮಿನೇಟ್​ ಆದವರು ಮಂಜು ಹಾಗೂ ದಿವ್ಯಾ. ಮಂಜು ಮತ್ತು ದಿವ್ಯಾ ಏಳನೇ ವಾರದ ಟಾಸ್ಕ್​ನಲ್ಲಿ ಮೋಸದ ಹಾದಿ ತುಳಿದಿದ್ದರು. ಇದು ಮನೆಮಂದಿಗೆ ಶಾಕ್​ ನೀಡಿತ್ತು. ಈ ಘಟನೆಯಿಂದ ಮನೆಯ ಸ್ಪರ್ಧಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಹೀಗಾಗಿ, ಬಹುತೇಕರು ಮಂಜು ಮತ್ತು ದಿವ್ಯಾ ಹೆಸರನ್ನು ತೆಗೆದುಕೊಂಡರು.

ರಘು ವಿರುದ್ಧ ಮಂಜು ಹಾಗೂ ದಿವ್ಯಾ ಸುರೇಶ್​ ವೋಟ್​ ಮಾಡಿದ್ದಾರೆ. ವೈಷ್ಣವಿ ವಿರುದ್ಧ  ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ಮತ ಹಾಕಿದ್ದಾರೆ. ಹೀಗಾಗಿ, ರಘು ಮತ್ತು ವೈಷ್ಣವಿ ಕೂಡ ನಾಮಿನೇಟ್​ ಆಗಿದ್ದಾರೆ. ಕಳೆದ ವಾರದ ಟಾಸ್ಕ್​ನಲ್ಲಿ ಅಷ್ಟು ಉತ್ತಮವಾಗಿ ಆಡಿಲ್ಲ ಎಂಬ ಕಾರಣಕ್ಕೆ ಪ್ರಶಾಂತ್​ ಸಂಬರಗಿಯನ್ನು ನಾಮಿನೇಟ್​ ಮಾಡಲಾಗಿತ್ತು. ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ಕ್ಯಾಪ್ಟನ್​ ಅರವಿಂದ್​ಗೆ ಇತ್ತು. ಈ ವೇಳೆ ರಾಜೀವ್ ಅವರನ್ನು ನಾಮಿನೇಟ್​ ಮಾಡಿದರು.

ರಾಜೀವ್​ ಬಳಿ ಗೋಲ್ಡನ್​ ಪಾಸ್​ ಇದೆ ಎನ್ನುವ ಕಾರಣಕ್ಕೆ ರಾಜೀವ್​ ಅವರನ್ನು ಅರವಿಂದ್ ನಾಮಿನೇಟ್​ ಮಾಡಿದ್ದರು. ಆದರೆ, ವೀಕ್ಷಕರು ನನ್ನನ್ನು ಗೆಲ್ಲಿಸುತ್ತಾರೆ ಎಂದು ತೀವ್ರವಾಗಿ ನಂಬಿದ್ದ ರಾಜೀವ್​ ಗೋಲ್ಡನ್​ ಪಾಸ್​ ಬಳಸಲು ಹೋಗಲೇ ಇಲ್ಲ. ಆದರೆ, ಓವರ್​ ಕಾನ್ಫಿಡೆನ್ಸ್​ ಮುಳುವಾಗಿದೆ.

ಪ್ರತಿ ಸ್ಪರ್ಧಿಗೆ ಭಿನ್ನ ಭಿನ್ನ ಟಾಸ್ಕ್​ ನೀಡುವ ಮೂಲಕ ಎಲಿಮಿನೇಷನ್​ನಿಂದ ಬಚಾವ್ ಮಾಡಲಾಯಿತು. ಕೊನೆಗೆ ಮನೆಯಿಂದ ಹೊರ ಹೋಗುವವರ ವಿಟಿ ತೋರಿಸಲಾಯಿತು. ಈ ವೇಳೆ ರಾಜೀವ್​ ಅವರ ವಿಡಿಯೋ ಬಂತು. ಇದು ಮನೆಯವರಿಗೆ ಒಮ್ಮೆ ಶಾಕ್​ ಮೂಡಿಸಿದೆ. ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವಾಗ ರಾಜೀವ್​​ ಗೋಲ್ಡನ್​ ಪಾಸ್​ ಶುಭಾ ಕೈಗೆ ನೀಡಿ ತೆರಳಿದ್ದಾರೆ.

ಇದನ್ನೂ ಓದಿ: Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?

Vaarada Kathe Kicchana Jothe: ಈ ವಾರವೂ ಬಿಗ್ ಬಾಸ್ ಶೋ ಹೋಸ್ಟ್ ಮಾಡಲ್ಲ ಕಿಚ್ಚ ಸುದೀಪ್

Published On - 9:58 pm, Sun, 25 April 21

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ