AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಸಾಲಿನಲ್ಲಿದ್ದಾರೆ. ಭಿನ್ನಾಭಿಪ್ರಾಯ, ಎಲ್ಲರ ಜತೆ ಹೊಂದುಕೊಳ್ಳುತ್ತಿಲ್ಲ, ಅವರು ತೆಗೆದುಕೊಳ್ಳುವ ನಿರ್ಧಾರ ಸರಿ ಇರುವುದಿಲ್ಲ ಎಂದು ಮನೆಯ ಸದಸ್ಯರು ಕಾರಣ ನೀಡಿದ್ದರು.

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?
ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Mar 13, 2021 | 7:55 PM

Share

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ನಾಮಿನೇಟ್​ ಆಗಿ ಮನೆಯಿಂದ ಹೊರಹೋಗಿದ್ದರು. ಈಗ ಎರಡನೇ ವಾರದ ಎಲಿಮಿನೇಷನ್​ಗೆ ಕ್ಷಣಗಣನೆ ಆರಂಭವಾಗಿದೆ. ಎರಡನೇ ವಾರದಲ್ಲಿ ಎಲಿಮಿನೇಷನ್​ಗೆ ಎಂಟು ಜನರು ನಾಮಿನೇಟ್​ ಆಗಿದ್ದಾರೆ. ಇವರಲ್ಲಿ ಯಾರು ಮನೆಯಿಂದ ಹೊರಹೋಗುತ್ತಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ. ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಸಾಲಿನಲ್ಲಿದ್ದಾರೆ. ಭಿನ್ನಾಭಿಪ್ರಾಯ, ಎಲ್ಲರ ಜತೆ ಹೊಂದುಕೊಳ್ಳುತ್ತಿಲ್ಲ, ಅವರು ತೆಗೆದುಕೊಳ್ಳುವ ನಿರ್ಧಾರ ಸರಿ ಇರುವುದಿಲ್ಲ, ಅವರಿಂದ ಮನೆಯ ವಾತಾವರಣ ಬದಲಾಗಿದೆ ಎಂದು ಮನೆಯ ಸದಸ್ಯರು ಕಾರಣ ನೀಡಿದ್ದರು. ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಆದರು. ಪ್ರಶಾಂತ್​ ಡಾಮಿನೇಟ್​ ಮಾಡುತ್ತಾರೆ. ಎಲ್ಲರನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮಾತನಾಡುತ್ತಾರೆ ಎನ್ನುವ ಕಾರಣ ನೀಡಿ ಅವರನ್ನು ಮನೆಯ ಸದಸ್ಯರು ನಾಮಿನೇಟ್​ ಮಾಡಿದ್ದರು. ಎಲ್ಲರ ಜತೆ ಸರಿಯಾಗಿ ಬೆರೆಯುತ್ತಿಲ್ಲ, ಒಂಟಿಯಾಗಿ ಇರುತ್ತಾರೆ ಎನ್ನುವ ಕಾರಣ ನೀಡಿ ದಿವ್ಯಾ ಸುರೇಶ್​ ನಾಮಿನೇಟ್​ ಆಗಿದ್ದರು. ಇವರ ಜತೆಗೆ ಗೀತಾ, ನಿಧಿ ಸುಬ್ಬಯ್ಯ, ವಿಶ್ವನಾಥ್, ಶುಭಾ ಪೂಂಜಾ ​ ಮತ್ತು ಚಂದ್ರಕಲಾ ಅವರ ಮೇಲೂ ಈ ಬಾರಿಯ ನಾಮಿನೇಟ್​ ಕತ್ತಿ ತೂಗಾಡುತ್ತಿದೆ.

ನಾಮಿನೇಟ್​ ಸಾಲಿನಲ್ಲಿರುವವರ ಸಣ್ಣ ವಿಮರ್ಷೆ ಮಾಡಿದರೆ ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಮೆಲ್ನೋಟಕ್ಕೆ ಸೇಫ್​ ಆಗಿರುವ ಹಾಗೆ ಕಾಣುತ್ತಿದ್ದಾರೆ. ಏಕೆಂದರೆ, ಈ ನಾಲ್ಕೂ ಜನರು ಪ್ರೇಕ್ಷಕರಿಗೆ ಇಷ್ಟವಾಗಿದ್ದಾರೆ. ದಿವ್ಯಾ-ಶುಭಾ ಪ್ರೇಕ್ಷಕರನ್ನು ಹೆಚ್ಚು ಎಂಟರ್​ಟೇನ್​ ಮಾಡುತ್ತಿದ್ದಾರೆ. ಪ್ರಶಾಂತ್​ ಸ್ಪೋರ್ಟಿವ್​ ಆಗಿ ಆಡುತ್ತಿದ್ದಾರೆ. ಈ ಕಾರಣಕ್ಕೆ ಈ ನಾಲ್ವರು ಸೇಫ್​ ಆಗುವ ಸಾಧ್ಯತೆ ಹೆಚ್ಚು.

ನಿರ್ಮಲಾ, ಗೀತಾ ಬಗ್ಗೆ ದೂರುಗಳು ತುಂಬಾನೇ ಇದೆ. ಗೀತಾ ಮೊಸಳೆ ಕಣ್ಣೀರು ಸುರಿಸುತ್ತಾರೆ ಎನ್ನುವ ಮಾತಿದೆ. ನಿರ್ಮಲಾ ವಿರುದ್ಧ ಮನೆ ಸದಸ್ಯರೇ ತಿರುಗಿ ಬಿದ್ದಿದ್ದಾರೆ. ವಿಶ್ವ ತುಂಬಾನೇ ಸಣ್ಣವನಾಗಿದ್ದರಿಂದ ಈ ಮೂವರಿಗೆ ಕಷ್ಟವಿದೆ ಎನ್ನಲಾಗುತ್ತಿದೆ. ಈ ಎಲ್ಲಾ ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ.

ಇದನ್ನೂ ಓದಿ: BBK8: ಬಿಗ್​ ಬಾಸ್​ 8 ವಿನ್ನರ್​ ರಾಜೀವ್​, ರನ್ನರ್​ ಅಪ್​ ಮಂಜು; ಹೀಗೆ ಭವಿಷ್ಯ ನುಡಿದವರಾರು?

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?