AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ವೀಕೆಂಡ್​ನಲ್ಲಿ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆ ಕಾಣಿಸಿಕೊಳ್ಳಲಿರುವ ಸುದೀಪ್; ಕಾರಣ ಏನು?

Bigg Boss Kannada: ‘ಹೇಗಿದ್ದೀರಾ ರಘು? ಮನೆಯಿಂದ ನಿಮ್ಮನ್ನು ಹೊರಗಡೆ ಹಾಕಿಲ್ಲ ತಾನೇ?’ ಎಂದು ರಘುಗೆ ಸುದೀಪ್​ ಕಾಲೆಳೆದಿದ್ದಾರೆ. ‘ಶೋ ಮುಗಿತು ಅಂತ ಪ್ರಶಾಂತ್​ ಸಂಬರಗಿ ಅವರಿಗೆ ಬೇಸರವೇನೋ ಇದೆ. ಆದರೆ ಬೇರೆಯವರಿಗೆ ಗೆಲ್ಲೋಕೆ ಬಿಟ್ಟಿಲ್ಲವಲ್ಲ ಎಂಬ ಒಂದು ಸಮಾಧಾನ ಕೂಡ ಇದೆ’ ಎಂದು ಕಿಚ್ಚ ತಮಾಷೆ ಮಾಡಿದ್ದಾರೆ.

Kichcha Sudeep: ವೀಕೆಂಡ್​ನಲ್ಲಿ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆ ಕಾಣಿಸಿಕೊಳ್ಳಲಿರುವ ಸುದೀಪ್; ಕಾರಣ ಏನು?
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: May 23, 2021 | 8:11 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅನಿರೀಕ್ಷಿತವಾಗಿ ಅರ್ಧಕ್ಕೆ ನಿಲ್ಲುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ಕೊರೊನಾ ವೈರಸ್​ ಕಾರಣದಿಂದಾಗಿ ಶೋ ನಿಲ್ಲಿಸುವುದು ಅನಿವಾರ್ಯ ಆಯಿತು. 71ನೇ ದಿನಕ್ಕೆ ಎಲ್ಲ ಸ್ಪರ್ಧಿಗಳು ಮನೆಯಿಂದ ಹೊರಬರಬೇಕಾಯಿತು. ಬಿಗ್​ ಬಾಸ್​ ಮುಗಿದಿದ್ದರೂ ಕೂಡ ಅದರ ಮನರಂಜನೆ ಇನ್ನೂ ನಿಂತಿಲ್ಲ. ತನ್ನ ಪ್ರೇಕ್ಷಕರಿಗೆ ಒಂದಿಲ್ಲೊಂದು ರೀತಿಯಲ್ಲಿ ಮನರಂಜನೆ ನೀಡಲು ಕಲರ್ಸ್​ ಕನ್ನಡ ವಾಹಿನಿ ಪ್ರಯತ್ನಿಸುತ್ತಿದೆ. ಈಗ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆಗೆ ಸುದೀಪ್​ ವಾರದ ಪಂಚಾಯಿತಿ ಮಾಡಿದ್ದಾರೆ. ಎಲ್ಲರನ್ನೂ ಜೊತೆ ಸೇರಿಸಿಕೊಂಡು ಮಾತನಾಡಿದ್ದಾರೆ.

ಪ್ರತಿವಾರ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಸ್ಪರ್ಧಿಗಳನ್ನು ವೇದಿಕೆಗೆ ಕರೆದು ಕಿಚ್ಚ ಮಾತನಾಡಿಸುತ್ತಿದ್ದರು. ಆದರೆ ಈ ಶೋ ಮುಗಿಯುವುದಕ್ಕಿಂತಲೂ ನಾಲ್ಕು ವಾರ ಮುನ್ನವೇ ಸುದೀಪ್​ಗೆ ಆರೋಗ್ಯ ಕೈ ಕೊಟ್ಟಿದ್ದರಿಂದ ಅವರು ವೀಕೆಂಡ್​ ಎಪಿಸೋಡ್​ಗಳನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಯಾವುದೇ ಸ್ಪರ್ಧಿಯನ್ನೂ ವೇದಿಕೆಗೆ ಕರೆದು ಮಾತನಾಡಿಸಲಿಲ್ಲ. ಕೊನೇ ದಿನ ಮನೆಯಿಂದ ಹೊರಬಂದ 11 ಸ್ಪರ್ಧಿಗಳಿಗೂ ಸುದೀಪ್​ ಜೊತೆ ಮಾತನಾಡುವ ಅವಕಾಶ ಸಿಕ್ಕಿರಲಿಲ್ಲ. ಈಗ ಸುದೀಪ್​ ಜೊತೆ ಅವರೆಲ್ಲರ ಮಾತುಕತೆಗಾಗಿ ಕಲರ್ಸ್​ ಕನ್ನಡ ವಾಹಿನಿ ಒಂದು ವೇದಿಕೆ ಒದಗಿಸಿದೆ.

ಸದ್ಯ ಎಲ್ಲೆಲ್ಲೂ ಕೊರೊನಾ ವೈರಸ್​ ಹಾವಳಿ ಜೋರಾಗಿರುವುದರಿಂದ ಯಾರನ್ನೂ ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಿಡಿಯೋ ಕಾಲ್​ ಮೂಲಕ ಎಲ್ಲರ ಜೊತೆಗೆ ಸುದೀಪ್​ ಮಾತನಾಡಿದ್ದಾರೆ. ಆ ಮಾತುಕತೆಯ ಪೂರ್ಣ ಭಾಗವಾಗವನ್ನು ಭಾನುವಾರ (ಮೇ 23) ಸಂಜೆ 6.30ಕ್ಕೆ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಮಾಡಲಾಗುವುದು. ‘ನಿಮ್ಮೆಲ್ಲರನ್ನೂ ನೋಡಿ ಖುಷಿ ಆಗುತ್ತಿದೆ. ಎಲ್ಲರೂ ಹೇಗಿದ್ದೀರಿ’ ಎಂದು ಸುದೀಪ್ ಅವರು ಬಿಗ್​ ಬಾಸ್​ ಸ್ಪರ್ಧಿಗಳ​ ಆರೋಗ್ಯ ವಿಚಾರಿಸಿದ್ದಾರೆ.

‘ಹೇಗಿದ್ದೀರಾ ರಘು? ಮನೆಯಿಂದ ನಿಮ್ಮನ್ನು ಹೊರಗಡೆ ಹಾಕಿಲ್ಲ ತಾನೇ?’ ಎಂದು ರಘುಗೆ ಸುದೀಪ್​ ಕಾಲೆಳೆದಿದ್ದಾರೆ. ‘ಶೋ ಮುಗಿತು ಅಂತ ಪ್ರಶಾಂತ್​ ಸಂಬರಗಿ ಅವರಿಗೆ ಬೇಸರವೇನೋ ಇದೆ. ಆದರೆ ಬೇರೆಯವರಿಗೆ ಗೆಲ್ಲೋಕೆ ಬಿಟ್ಟಿಲ್ಲವಲ್ಲ ಎಂಬ ಒಂದು ಸಮಾಧಾನ ಕೂಡ ಇದೆ’ ಎಂದು ಕಿಚ್ಚ ತಮಾಷೆ ಮಾಡಿದ್ದಾರೆ. ಇಂಥ ಮಸ್ತ್​ ಮಾತುಕತೆಯ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ.

ಶುಭಾ ಪೂಂಜಾ, ರಘ ಗೌಡ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ದಿವ್ಯಾ ಉರುಗುಡ, ಅರವಿಂದ್​ ಕೆಪಿ, ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ವೈಷ್ಣವಿ ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅವರು ಈ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ:

Kichcha Sudeep: ಬಿಗ್​ ಬಾಸ್​ ಸ್ಪರ್ಧಿ ಸೋನು ಪಾಟೀಲ್​ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ. ನೀಡಿದ ಕಿಚ್ಚ ಸುದೀಪ್​

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!