AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ವೀಕೆಂಡ್​ನಲ್ಲಿ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆ ಕಾಣಿಸಿಕೊಳ್ಳಲಿರುವ ಸುದೀಪ್; ಕಾರಣ ಏನು?

Bigg Boss Kannada: ‘ಹೇಗಿದ್ದೀರಾ ರಘು? ಮನೆಯಿಂದ ನಿಮ್ಮನ್ನು ಹೊರಗಡೆ ಹಾಕಿಲ್ಲ ತಾನೇ?’ ಎಂದು ರಘುಗೆ ಸುದೀಪ್​ ಕಾಲೆಳೆದಿದ್ದಾರೆ. ‘ಶೋ ಮುಗಿತು ಅಂತ ಪ್ರಶಾಂತ್​ ಸಂಬರಗಿ ಅವರಿಗೆ ಬೇಸರವೇನೋ ಇದೆ. ಆದರೆ ಬೇರೆಯವರಿಗೆ ಗೆಲ್ಲೋಕೆ ಬಿಟ್ಟಿಲ್ಲವಲ್ಲ ಎಂಬ ಒಂದು ಸಮಾಧಾನ ಕೂಡ ಇದೆ’ ಎಂದು ಕಿಚ್ಚ ತಮಾಷೆ ಮಾಡಿದ್ದಾರೆ.

Kichcha Sudeep: ವೀಕೆಂಡ್​ನಲ್ಲಿ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆ ಕಾಣಿಸಿಕೊಳ್ಳಲಿರುವ ಸುದೀಪ್; ಕಾರಣ ಏನು?
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: May 23, 2021 | 8:11 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅನಿರೀಕ್ಷಿತವಾಗಿ ಅರ್ಧಕ್ಕೆ ನಿಲ್ಲುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ಕೊರೊನಾ ವೈರಸ್​ ಕಾರಣದಿಂದಾಗಿ ಶೋ ನಿಲ್ಲಿಸುವುದು ಅನಿವಾರ್ಯ ಆಯಿತು. 71ನೇ ದಿನಕ್ಕೆ ಎಲ್ಲ ಸ್ಪರ್ಧಿಗಳು ಮನೆಯಿಂದ ಹೊರಬರಬೇಕಾಯಿತು. ಬಿಗ್​ ಬಾಸ್​ ಮುಗಿದಿದ್ದರೂ ಕೂಡ ಅದರ ಮನರಂಜನೆ ಇನ್ನೂ ನಿಂತಿಲ್ಲ. ತನ್ನ ಪ್ರೇಕ್ಷಕರಿಗೆ ಒಂದಿಲ್ಲೊಂದು ರೀತಿಯಲ್ಲಿ ಮನರಂಜನೆ ನೀಡಲು ಕಲರ್ಸ್​ ಕನ್ನಡ ವಾಹಿನಿ ಪ್ರಯತ್ನಿಸುತ್ತಿದೆ. ಈಗ ಮತ್ತೆ ಬಿಗ್​ ಬಾಸ್​ ಸ್ಪರ್ಧಿಗಳ ಜೊತೆಗೆ ಸುದೀಪ್​ ವಾರದ ಪಂಚಾಯಿತಿ ಮಾಡಿದ್ದಾರೆ. ಎಲ್ಲರನ್ನೂ ಜೊತೆ ಸೇರಿಸಿಕೊಂಡು ಮಾತನಾಡಿದ್ದಾರೆ.

ಪ್ರತಿವಾರ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಸ್ಪರ್ಧಿಗಳನ್ನು ವೇದಿಕೆಗೆ ಕರೆದು ಕಿಚ್ಚ ಮಾತನಾಡಿಸುತ್ತಿದ್ದರು. ಆದರೆ ಈ ಶೋ ಮುಗಿಯುವುದಕ್ಕಿಂತಲೂ ನಾಲ್ಕು ವಾರ ಮುನ್ನವೇ ಸುದೀಪ್​ಗೆ ಆರೋಗ್ಯ ಕೈ ಕೊಟ್ಟಿದ್ದರಿಂದ ಅವರು ವೀಕೆಂಡ್​ ಎಪಿಸೋಡ್​ಗಳನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಯಾವುದೇ ಸ್ಪರ್ಧಿಯನ್ನೂ ವೇದಿಕೆಗೆ ಕರೆದು ಮಾತನಾಡಿಸಲಿಲ್ಲ. ಕೊನೇ ದಿನ ಮನೆಯಿಂದ ಹೊರಬಂದ 11 ಸ್ಪರ್ಧಿಗಳಿಗೂ ಸುದೀಪ್​ ಜೊತೆ ಮಾತನಾಡುವ ಅವಕಾಶ ಸಿಕ್ಕಿರಲಿಲ್ಲ. ಈಗ ಸುದೀಪ್​ ಜೊತೆ ಅವರೆಲ್ಲರ ಮಾತುಕತೆಗಾಗಿ ಕಲರ್ಸ್​ ಕನ್ನಡ ವಾಹಿನಿ ಒಂದು ವೇದಿಕೆ ಒದಗಿಸಿದೆ.

ಸದ್ಯ ಎಲ್ಲೆಲ್ಲೂ ಕೊರೊನಾ ವೈರಸ್​ ಹಾವಳಿ ಜೋರಾಗಿರುವುದರಿಂದ ಯಾರನ್ನೂ ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಿಡಿಯೋ ಕಾಲ್​ ಮೂಲಕ ಎಲ್ಲರ ಜೊತೆಗೆ ಸುದೀಪ್​ ಮಾತನಾಡಿದ್ದಾರೆ. ಆ ಮಾತುಕತೆಯ ಪೂರ್ಣ ಭಾಗವಾಗವನ್ನು ಭಾನುವಾರ (ಮೇ 23) ಸಂಜೆ 6.30ಕ್ಕೆ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಮಾಡಲಾಗುವುದು. ‘ನಿಮ್ಮೆಲ್ಲರನ್ನೂ ನೋಡಿ ಖುಷಿ ಆಗುತ್ತಿದೆ. ಎಲ್ಲರೂ ಹೇಗಿದ್ದೀರಿ’ ಎಂದು ಸುದೀಪ್ ಅವರು ಬಿಗ್​ ಬಾಸ್​ ಸ್ಪರ್ಧಿಗಳ​ ಆರೋಗ್ಯ ವಿಚಾರಿಸಿದ್ದಾರೆ.

‘ಹೇಗಿದ್ದೀರಾ ರಘು? ಮನೆಯಿಂದ ನಿಮ್ಮನ್ನು ಹೊರಗಡೆ ಹಾಕಿಲ್ಲ ತಾನೇ?’ ಎಂದು ರಘುಗೆ ಸುದೀಪ್​ ಕಾಲೆಳೆದಿದ್ದಾರೆ. ‘ಶೋ ಮುಗಿತು ಅಂತ ಪ್ರಶಾಂತ್​ ಸಂಬರಗಿ ಅವರಿಗೆ ಬೇಸರವೇನೋ ಇದೆ. ಆದರೆ ಬೇರೆಯವರಿಗೆ ಗೆಲ್ಲೋಕೆ ಬಿಟ್ಟಿಲ್ಲವಲ್ಲ ಎಂಬ ಒಂದು ಸಮಾಧಾನ ಕೂಡ ಇದೆ’ ಎಂದು ಕಿಚ್ಚ ತಮಾಷೆ ಮಾಡಿದ್ದಾರೆ. ಇಂಥ ಮಸ್ತ್​ ಮಾತುಕತೆಯ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ.

ಶುಭಾ ಪೂಂಜಾ, ರಘ ಗೌಡ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ದಿವ್ಯಾ ಉರುಗುಡ, ಅರವಿಂದ್​ ಕೆಪಿ, ಮಂಜು ಪಾವಗಡ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​, ವೈಷ್ಣವಿ ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅವರು ಈ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ:

Kichcha Sudeep: ಬಿಗ್​ ಬಾಸ್​ ಸ್ಪರ್ಧಿ ಸೋನು ಪಾಟೀಲ್​ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ. ನೀಡಿದ ಕಿಚ್ಚ ಸುದೀಪ್​

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್