AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಚೂಡ್​ ಮಾಜಿ ಪತ್ನಿ ಶ್ರುತಿ ವಿಚಾರ ಕೆದಕಿದ ಮಂಜು; ಬಿಗ್​ ಬಾಸ್​ನಲ್ಲಿ ನಡೆಯಿತು ಯುದ್ಧ

Chakravarthy Chandrachud | Manju Pavagada: ‘ಹೆಣ್ಣಿನ ಬಗ್ಗೆ ಕಾಳಜಿ ತೋರಿಸುತ್ತ ಇಷ್ಟೆಲ್ಲ ಮಾತನಾಡುವ ಇವರು ಎಲ್ಲಿಂದ ಬಂದಿದ್ದಾರೆ ಅಂತ ಎಲ್ಲರಿಗೂ ಗೊತ್ತು’ ಎಂದು ಚಕ್ರವರ್ತಿ ಚಂದ್ರಚೂಡ್​ಗೆ ಮಂಜು ಪಾವಗಡ ತಿವಿದರು. ಅದು ಚಕ್ರವರ್ತಿಯನ್ನು ಇನ್ನಷ್ಟು ಕೆರಳಿಸಿತು.

ಚಂದ್ರಚೂಡ್​ ಮಾಜಿ ಪತ್ನಿ ಶ್ರುತಿ ವಿಚಾರ ಕೆದಕಿದ ಮಂಜು; ಬಿಗ್​ ಬಾಸ್​ನಲ್ಲಿ ನಡೆಯಿತು ಯುದ್ಧ
ಮಂಜು ಪಾವಗಡ, ಚಕ್ರವರ್ತಿ ಚಂದ್ರಚೂಡ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 28, 2021 | 3:26 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಯುದ್ಧವೇ ನಡೆದುಹೋಗಿದೆ. ಮಂಜು ಪಾವಗಡ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರ ನಡುವೆ ದೊಡ್ಡ ಸಂಘರ್ಷ ಆಗಿದೆ. ಇದೆಲ್ಲವೂ ನಡೆದಿರುವುದು ಕಿಚ್ಚ ಸುದೀಪ್​ ಅವರ ಎದುರಿನಲ್ಲೇ! ಜೂ.27ರ ‘ವೀಕೆಂಡ್​ ವಿಥ್​ ಸುದೀಪ’ ಎಪಿಸೋಡ್​ನಲ್ಲಿ ಎಲ್ಲರನ್ನೂ ಸುದೀಪ್​ ಮಾತನಾಡಿಸುತ್ತಿದ್ದರು. ಆಗ ಚಕ್ರವರ್ತಿ ಚಂದ್ರಚೂಡ್​ ಯಾಕೋ ಮಂಕಾಗಿ ಇರುವಂತೆ​ ಕಂಡರು. ಏನು ಸಮಾಚಾರ ಎಂದು ವಿಚಾರಿಸಿದಾಗ ದೊಡ್ಡ ಆಕ್ರೋಶ ಸ್ಫೋಟವಾಯಿತು.

ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ನಡುವಿನ ಫೇಕ್​ ಲವ್​ಸ್ಟೋರಿ ಚಕ್ರವರ್ತಿಗೆ ಇಷ್ಟವಾಗಿಲ್ಲ. ಅದನ್ನು ವಿರೋಧಿಸಿರುವ ಅವರು ತುಂಬ ಕಟುವಾದ ಪದಗಳಿಂದ ಟೀಕೆ ಮಾಡಿದ್ದಾರೆ. ಇದನ್ನು ಕೇಳಿಸಿಕೊಂಡು ಮಂಜು ಕೂಡ ಪ್ರತ್ಯುತ್ತರ ನೀಡಿದ್ದಾರೆ. ‘ಇಷ್ಟೆಲ್ಲ ಮಾತನಾಡುವ ಇವರು ಎಲ್ಲಿಂದ ಬಂದಿದ್ದಾರೆ ಅಂತ ಎಲ್ಲರಿಗೂ ಗೊತ್ತು’ ಮಂಜು ಎಂದು ತಿವಿದರು. ಅದು ಚಕ್ರವರ್ತಿಯನ್ನು ಇನ್ನಷ್ಟು ಕೆರಳಿಸಿತು.

‘ಹೆಣ್ಣಿನ ಬಗ್ಗೆ ಬಹಳ ಕಾಳಜಿ ತೋರುವಂತೆ ಮಾತನಾಡುವ ಇವರು ಹೆಂಗಿದ್ದಾರೆ? ಇಲ್ಲಿಗೆ ಹೇಗೆ ಬಂದಿದ್ದಾರೆ ಎಂಬುದು ಎಲ್ಲರಿಗೋ ಗೊತ್ತು’ ಎಂದು ಚಕ್ರವರ್ತಿಯನ್ನು ಮಂಜು ಕೆರಳಿದರು. ‘ಈ ಮಾತಿನ ಅರ್ಥ ಏನು’ ಎಂದು ಸುದೀಪ್​ ಕೂಡ ಮಂಜುಗೆ ಪ್ರಶ್ನೆ ಕೇಳಿದರು. ‘ಚಕ್ರವರ್ತಿ ಯಾರು ಎಂಬುದು ಮಾತ್ರ ನೆನಪಿತ್ತು. ಇವರ ಮದುವೆಯಿಂದ ಮಾತ್ರ ಇವರ ಬಗ್ಗೆ ನನಗೆ ಗೊತ್ತಾಗಿದ್ದು’ ಎಂದು ಮಂಜು ಸಮರ್ಥನೆ ನೀಡಿದರು.

‘ನನ್ನ ಜೀವನವನ್ನು ಈ ಮನುಷ್ಯ ಏನು ನೋಡಿದಾನೆ? ನನಗೆ ಎರಡು ಡಿವೋರ್ಸ್​ ಆಗಿದೆ. 11 ಕ್ಷೇತ್ರದಲ್ಲಿ ಕೆಲಸ ಮಾಡಿದ್ದೀನಿ. ಒಬ್ಬರು ಖ್ಯಾತ ನಟಿಗೆ (ಶ್ರುತಿ) ಡಿವೋರ್ಸ್​​ ನೀಡಿದ್ದೇನೆ. ಅವರು ‘ಮಜಾ ಭಾರತ’ದಲ್ಲಿ ಇದ್ದರು. ಭಾರತದ ಸಂವಿಧಾನದ ಪ್ರಕಾರ ವಿಚ್ಛೇದನ ಪಡೆದಿದ್ದೇನೆ. ನಾನು ನಾಟಕ ಮಾಡಿ ಡಿವೋರ್ಸ್​ ಪಡೆದಿಲ್ಲ. ಇದಕ್ಕೆ ನಾನು ಬೇರೆ ಬೇರೆ ಕಡೆ ಉತ್ತರ ಕೊಡುತ್ತೇನೆ’ ಎಂದು ಚಕ್ರವರ್ತಿ ಕೂಗಾಡಿದರು. ಮಾತಿನ ನಡುವಿನ ಬ್ರೇಕ್​ನಲ್ಲಿ ‘ನನ್ನ ಹೆಂಡತಿಯರ ಬಗ್ಗೆ ಮಾತಾಡ್ತಾನೆ’ ಎಂದು ಮಂಜು ವಿರುದ್ಧ ಚಕ್ರವರ್ತಿ ಹಲ್ಲು ಕಡಿದರು.

ಇದನ್ನೂ ಓದಿ:

Bigg Boss Kannada: ಮಂಜು-ದಿವ್ಯಾ ಮದುವೆ ವಿಚಾರ ಸ್ಫೋಟ; ಸುದೀಪ್​ ಎದುರಲ್ಲೇ ಸಿಡಿದೆದ್ದ ಚಂದ್ರಚೂಡ್​

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

Published On - 8:31 am, Mon, 28 June 21

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ