AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾಗಾಗಿ ಕರುನಾಡ ಜನತೆಯ ನಂಬಿಕೆ ಕಳೆದುಕೊಂಡ ಮಂಜು; ಈಗ ಕ್ಷಮೆ ಕೇಳಿ ಏನು ಪ್ರಯೋಜನ?

Manju Pavagada | Divya Suresh: ತಮ್ಮ ಹುಳುಕು ಬುದ್ಧಿ ಬಯಲಾದ ಮೇಲೆ ಮಂಜು ಮತ್ತು ದಿವ್ಯಾ ಸುರೇಶ್​ ಎಲ್ಲರ ಕ್ಷಮೆ ಕೇಳುತ್ತಿದ್ದಾರೆ. ಅವರಿಗೆ ಇನ್ಮುಂದೆ ಪ್ರೇಕ್ಷಕರಿಂದ ಕಡಿಮೆ ವೋಟ್​ಗಳು ಬಂದರೂ ಅಚ್ಚರಿ ಏನಿಲ್ಲ.

Bigg Boss Kannada: ದಿವ್ಯಾಗಾಗಿ ಕರುನಾಡ ಜನತೆಯ ನಂಬಿಕೆ ಕಳೆದುಕೊಂಡ ಮಂಜು; ಈಗ ಕ್ಷಮೆ ಕೇಳಿ ಏನು ಪ್ರಯೋಜನ?
ಮಂಜು ಪಾವಗಡ - ದಿವ್ಯಾ ಸುರೇಶ್​
ಮದನ್​ ಕುಮಾರ್​
|

Updated on: Apr 20, 2021 | 4:08 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಅತಿ ಹೆಚ್ಚು ಗಮನ ಸೆಳೆದ ಸ್ಪರ್ಧಿ ಎಂದರೆ ಅದು ಮಂಜು ಪಾವಗಡ. ಅವರು ಫೈನಲ್​ವರೆಗೂ ಆರಾಮಾಗಿ ಪೈಪೋಟಿ ನೀಡುವ ಸ್ಪರ್ಧಿ ಎಂಬುದು ಎಲ್ಲರ ಅಭಿಪ್ರಾಯ. ಅದಕ್ಕೆ ಕಾರಣ ಅವರ ವ್ಯಕ್ತಿತ್ವ. ಇಡೀ ಮನೆಯವರನ್ನು ನಗಿಸುತ್ತ, ಜನರಿಗೆ ಮನರಂಜನೆ ನೀಡುತ್ತಾರೆ ಈ ಕಾಮಿಡಿ ಕಲಾವಿದ. ಆದರೆ ಅವರು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ದಿವ್ಯಾ ಸುರೇಶ್​ ಸಹವಾಸದಿಂದ ಮಂಜು ಇಂಥ ಒಂದು ಕೆಲಸಕ್ಕೆ ಕೈ ಹಾಕಿದ್ದಾರೆ.

ಇತ್ತೀಚೆಗೆ ಬಿಗ್​ ಬಾಸ್​ ನೀಡಿದ ಒಂದು ಟಾಸ್ಕ್​ನಲ್ಲಿ ಹುಡುಗರು ಹುಡುಗಿಯರಿಗೆ ಗುಟ್ಟಾಗಿ ಲವ್​ ಲೆಟರ್ ಬರೆಯಬೇಕಿತ್ತು. ತಮಗೆ ಬಂದ ಲೆಟರ್​ಗಳನ್ನು ಹುಡುಗಿಯರು ಮುಚ್ಚಿಟ್ಟುಕೊಳ್ಳಬೇಕಿತ್ತು. ವಾರ್ಡನ್​ ಕೈಗೆ ಆ ಲೆಟರ್​ಗಳು ಸಿಗದಂತೆ ಎಚ್ಚರಿಕೆ ವಹಿಸಬೇಕಿತ್ತು. ಅತಿ ಹೆಚ್ಚು ಪ್ರೇಮಪತ್ರ ಬರೆಯುವ ಹುಡುಗ ಮತ್ತು ಅತಿ ಹೆಚ್ಚು ಪ್ರೇಮಪತ್ರಗಳನ್ನು ಪಡೆದು ಮುಚ್ಚಿಟ್ಟುಕೊಳ್ಳುವ ಹುಡುಗಿಗೆ ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್​ನಲ್ಲಿ ಸ್ಪರ್ಧಿಸುವ ಅವಕಾಶ ಸಿಗುತ್ತಿತ್ತು. ಲೆಟರ್​ ಪತ್ತೆ ಹಚ್ಚುವ ವಾರ್ಡನ್​ ಆಗಿ ನಿಧಿ ಸುಬ್ಬಯ್ಯ ನೇಮಕ ಆಗಿದ್ದರು. ಈ ಟಾಸ್ಕ್​ನಲ್ಲಿ ಮಂಜು ಮತ್ತು ದಿವ್ಯಾ ಇಡೀ ಮನೆಗೆ ದ್ರೋಹ ಮಾಡಿದ್ದಾರೆ.

ತಮ್ಮ ಲೆಟರ್​ಗಳನ್ನು ಕಾಪಾಡಿಕೊಳ್ಳುವ ಸಲುವಾಗಿ ವಾರ್ಡನ್​ (ನಿಧಿ) ಜೊತೆ ದಿವ್ಯಾ ಒಳಸಂಚು ರೂಪಿಸಿದ್ದಾರೆ. ಬೇರೆಯವರು ಎಲ್ಲಿ ಪತ್ರಗಳನ್ನು ಮುಚ್ಚಿಟ್ಟಿದ್ದಾರೆ ಎಂಬ ಮಾಹಿತಿಯನ್ನು ನಿಧಿಗೆ ದಿವ್ಯಾ ಸೋರಿಕೆ ಮಾಡಿದ್ದಾರೆ. ಮನೆಯ ಇತರೆ ಸದಸ್ಯರಿಗೆ ಈ ರೀತಿ ನಂಬಿಕೆ ದ್ರೋಹ ಮಾಡುವುದಕ್ಕಿಂತಲೂ ಮುಂಚೆ ಈ ಬಗ್ಗೆ ಮಂಜು ಪಾವಗಡ ಜೊತೆ ಅವರು ಚರ್ಚೆ ಮಾಡಿದ್ದರು. ಹಾಗಾಗಿ ಈ ತಪ್ಪಿನಲ್ಲಿ ಮಂಜು ಕೂಡ ಪಾಲುದಾರರಾಗಿದ್ದಾರೆ.

ವೀಕ್ಷಕರೊಬ್ಬರು ಅನಿರೀಕ್ಷಿತವಾಗಿ ಬಿಗ್​ ಬಾಸ್​ ಮನೆಗೆ ದೂರವಾಣಿ ಕರೆ​ ಮಾಡಿ ಮಾತನಾಡಿದಾಗಲೇ ಈ ನಂಬಿಕೆ ದ್ರೋಹದ ರಹಸ್ಯ ಬಯಲಾಯಿತು. ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ಸೇರಿಕೊಂಡು ಮಾಡಿದ ಈ ಕೃತ್ಯಕ್ಕೆ ಎಲ್ಲರೂ ಛೀಮಾರಿ ಹಾಕಿದ್ದಾರೆ. ಮೋಸ ಮಾಡಿ ಆಟ ಆಡಿದ ಅವರಿಬ್ಬರ ಮೇಲೆ ಇನ್ನೆಂದೂ ತಮಗೆ ನಂಬಿಕೆ ಮೂಡುವುದಿಲ್ಲ ಎಂದು ಎಲ್ಲರೂ ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ. ದಿವ್ಯಾ ಸುರೇಶ್​ ಮಾತು ಕೇಳಿಕೊಂಡು ಈ ಕುತಂತ್ರದಲ್ಲಿ ಮಂಜು ಕೂಡ ಎಲ್ಲರ ನಂಬಿಕೆ ಕಳೆದುಕೊಂಡಿದ್ದಾರೆ.

ಇದನ್ನೆಲ್ಲ ನೋಡುತ್ತಿರುವ ಪ್ರೇಕ್ಷಕರಿಗೆ ಮಂಜು ಮೇಲಿನ ನಂಬಿಕೆ ಹೊರಟುಹೋಗುವ ಸಾಧ್ಯತೆ ಇದೆ. ಹಾಗಾಗಿ ಅವರಿಗೆ ಇನ್ಮುಂದೆ ಪ್ರೇಕ್ಷಕರಿಂದ ಕಡಿಮೆ ವೋಟ್​ಗಳು ಬಂದರೂ ಅಚ್ಚರಿ ಏನಿಲ್ಲ. ತಮ್ಮ ಹುಳುಕು ಬುದ್ಧಿ ಬಯಲಾದ ಮೇಲೆ ಮಂಜು ಮತ್ತು ದಿವ್ಯಾ ಸುರೇಶ್​ ಎಲ್ಲರ ಕ್ಷಮೆ ಕೇಳುತ್ತಿದ್ದಾರೆ. ಆದರೆ ಬಿಗ್ ಬಾಸ್​ ನೋಡುತ್ತಿರುವ ಕನ್ನಡಿಗರು ಮತ್ತು ಬಿಗ್​ ಬಾಸ್ ಮನೆಯೊಳಗಿರುವ ಸ್ಪರ್ಧಿಗಳ ಎದುರಿನಲ್ಲಿ ನಂಬಿಕೆ ಕಳೆದುಕೊಂಡ ಬಳಿಕ ಕ್ಷಮೆ ಕೇಳಿ ಏನು ಉಪಯೋಗ?

ಇದನ್ನೂ ಓದಿ: Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

ಮಂಜುಗೆ ನೇರವಾಗಿಯೇ ದ್ರೋಹ ಬಗೆದ ದಿವ್ಯಾ ಸುರೇಶ್​; ಈ ತಪ್ಪನ್ನು ಅವರು ಕ್ಷಮಿಸ್ತಾರಾ?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?