AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

BBK8: ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಹಾಗೆ ಮಾತನಾಡಿದ್ದರಿಂದಲೇ ಈ ವರ್ಷ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಟ್ರೋಲ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ
ನಿಧಿ ಸುಬ್ಬಯ್ಯ - ದಿವ್ಯಾ ಸುರೇಶ್​ - ಮಂಜು ಪಾವಗಡ
ಮದನ್​ ಕುಮಾರ್​
|

Updated on: May 09, 2021 | 11:40 AM

Share

ಸತತ 70 ದಿನ ನಡೆದುಕೊಂಡು ಬಂದ ಕನ್ನಡ ಬಿಗ್​ ಬಾಸ್​ ಕೊನೆಗೊಳ್ಳುವ ಸಮಯ ಬಂದಿದೆ. ಕೊರೊನಾ ವೈರಸ್​ ನಿಯಂತ್ರಿಸುವ ಸಲುವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿರುವುದರಿಂದ ಎಲ್ಲ ರಿಯಾಲಿಟಿ ಶೋ, ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್​ ಬಂದ್​ ಆಗುತ್ತಿದೆ. ಮೇ 24ರವರೆಗೆ ಯಾರೂ ಚಿತ್ರೀಕರಣದಲ್ಲಿ ಭಾಗವಹಿಸುವಂತಿಲ್ಲ. ಬಿಗ್​ ಬಾಸ್​ ಅಂತ್ಯವಾಗಲು ಕೂಡ ಇದೇ ಕಾರಣ. ಆದರೆ ಟ್ರೋಲ್​ ಮಂದಿ ಲೆಕ್ಕಾಚಾರವೇ ಬೇರೆ. ಅವರು ಬೇರೆ ಕಾರಣವನ್ನು ಹುಡುಕಿ ತೆಗೆದಿದ್ದಾರೆ.

ದಿವ್ಯಾ ಸುರೇಶ್​ಗೂ ಇದಕ್ಕೂ ಏನ್​ ಸಂಬಂಧ?

ಬಿಗ್​ ಬಾಸ್​ ಗ್ರ್ಯಾಂಡ್​ ಓಪನಿಂಗ್​ ದಿನ ನಟಿ ದಿವ್ಯಾ ಸುರೇಶ್​ ಅವರು ವೇದಿಕೆ ಮೇಲೆ ಮಾತನಾಡಿದ್ದರು. ಕಿಚ್ಚ ಸುದೀಪ್​ ಜೊತೆ ತಮ್ಮ ಬದುಕಿನ ಕೆಲವು ವಿವರಗಳನ್ನು ಹಂಚಿಕೊಂಡಿದ್ದರು. ‘ನಾನು ಒಂದು ಸೀರಿಯಲ್​ ಮಾಡಿದೆ. ಆದರೆ ಆ ಸೀರಿಯಲ್​ ಅರ್ಧಕ್ಕೆ ನಿಲ್ಲಿಸಿದರು. ಒಂದು ಸಿನಿಮಾ ಮಾಡಿದೆ. ಆ ಸಿನಿಮಾ ರಿಲೀಸ್​ ಆಗಲೇ ಇಲ್ಲ. ನಾನು ಏನೇ ಮಾಡಿದರೂ ಅದು ಅರ್ಧಕ್ಕೆ ನಿಂತು ಹೋಗುತ್ತಿತ್ತು’ ಎಂದು ದಿವ್ಯಾ ಸುರೇಶ್​ ಹೇಳಿದ್ದರು. ಅದೇ ಮಾತನ್ನು ನೆಟ್ಟಿಗರು ಈಗ ಮತ್ತೆ ನೆನಪಿಸಿಕೊಂಡಿದ್ದಾರೆ. ಆ ದೃಶ್ಯ ತುಣುಕು ಇಟ್ಟುಕೊಂಡು ಟ್ರೋಲ್​ ಮಾಡಲಾಗುತ್ತಿದೆ.

ಈ ಸಲ ಕಪ್​ ನಮ್ದೇ ಎಂದಿದ್ದ ಮಂಜು!

ಪ್ರತಿ ಬಾರಿ ಐಪಿಎಲ್​ ಶುರುವಾದಾಗ ಆರ್​ಸಿಬಿ ಅಭಿಮಾನಿಗಳು ‘ಈ ಸಲ ಕಪ್​ ನಮ್ದೇ’ ಎಂದು ಕೂಗುತ್ತಾರೆ. ಆದರೆ ಒಂದು ಬಾರಿಯೂ ಅವರ ಕೈಗೆ ಕಪ್ ಸಿಕ್ಕಿಲ್ಲ. ಅಚ್ಚರಿ ಎಂದರೆ, ಬಿಗ್​ ಬಾಸ್​ ಮನೆಯ ಒಳಗೂ ಈ ಸಲ ಕಪ್​ ನಮ್ದೇ ಎಂದು ಮಂಜು ಹೇಳಿದ್ದರು. ಬಿಗ್​ ಬಾಸ್​ನಲ್ಲಿ ಗಾಜಿನ ಲೋಟ ಒಡೆದುಹಾಕಿದ್ದಕ್ಕಾಗಿ ಮಂಜುಗೆ ಶಿಕ್ಷೆಯ ರೂಪದಲ್ಲಿ ಚಿಕ್ಕ ಕಪ್​ ನೀಡಲಾಗಿತ್ತು. ಬಿಗ್​ ಬಾಸ್​ ಮುಂದಿನ ಆದೇಶ ನೀಡುವವರೆಗೆ ಅದೇ ಕಪ್​ನಲ್ಲಿ ನೀರು ಕುಡಿಯಬೇಕು ಎಂದು ಸೂಚಿಸಲಾಗಿತ್ತು. ಆ ಸಂದರ್ಭದಲ್ಲಿ ‘ಈ ಸಲ ಕಪ್​ ನಮ್ದೇ’ ಎಂದು ಮಂಜು ಹೇಳಿದ್ದರು.

ಮಂಜು ಹಾಗೆ ಹೇಳಿದ್ದರಿಂದಲೇ ಐಪಿಎಲ್​ ರೀತಿಯೇ ಬಿಗ್​ ಬಾಸ್​ ಕೂಡ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಟ್ರೋಲ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇಂದು ಬಿಗ್​ ಬಾಸ್ ಸೀಸನ್​ 8ರ​ ಕೊನೇ ಸಂಚಿಕೆ ಪ್ರಸಾರ ಆಗಲಿದೆ. ಒಟ್ಟಿನಲ್ಲಿ ಐಪಿಎಲ್​ ಮತ್ತು ಬಿಗ್​ ಬಾಸ್​ ರದ್ದಾಗಿರುವುದರಿಂದ ಟಿವಿ ಮುಂದೆ ಕೂರುತಿದ್ದ ಜನರಿಗೆ ಮನರಂಜನೆ ಇಲ್ಲದಂತಾಗಿದೆ. ಟಿವಿ ಸೀರಿಯಲ್​ ಚಿತ್ರೀಕರಣ ನಿಂತಿರುವುದರಿಂದ ಹಳೇ ಎಪಿಸೋಡ್​ಗಳನ್ನು ಮರುಪ್ರಸಾರ ಮಾಡುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ