AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ

BBK8: ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಹಾಗೆ ಮಾತನಾಡಿದ್ದರಿಂದಲೇ ಈ ವರ್ಷ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಟ್ರೋಲ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

Bigg Boss Kannada: ಬಿಗ್​ ಬಾಸ್​ ರದ್ದಾಗಿದ್ದು ಯಾಕೆ? ಟ್ರೋಲ್​ ಮಂದಿ ಹುಡುಕಿದ 2 ಫನ್ನಿ ಕಾರಣ ಇಲ್ಲಿದೆ
ನಿಧಿ ಸುಬ್ಬಯ್ಯ - ದಿವ್ಯಾ ಸುರೇಶ್​ - ಮಂಜು ಪಾವಗಡ
ಮದನ್​ ಕುಮಾರ್​
|

Updated on: May 09, 2021 | 11:40 AM

Share

ಸತತ 70 ದಿನ ನಡೆದುಕೊಂಡು ಬಂದ ಕನ್ನಡ ಬಿಗ್​ ಬಾಸ್​ ಕೊನೆಗೊಳ್ಳುವ ಸಮಯ ಬಂದಿದೆ. ಕೊರೊನಾ ವೈರಸ್​ ನಿಯಂತ್ರಿಸುವ ಸಲುವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿರುವುದರಿಂದ ಎಲ್ಲ ರಿಯಾಲಿಟಿ ಶೋ, ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್​ ಬಂದ್​ ಆಗುತ್ತಿದೆ. ಮೇ 24ರವರೆಗೆ ಯಾರೂ ಚಿತ್ರೀಕರಣದಲ್ಲಿ ಭಾಗವಹಿಸುವಂತಿಲ್ಲ. ಬಿಗ್​ ಬಾಸ್​ ಅಂತ್ಯವಾಗಲು ಕೂಡ ಇದೇ ಕಾರಣ. ಆದರೆ ಟ್ರೋಲ್​ ಮಂದಿ ಲೆಕ್ಕಾಚಾರವೇ ಬೇರೆ. ಅವರು ಬೇರೆ ಕಾರಣವನ್ನು ಹುಡುಕಿ ತೆಗೆದಿದ್ದಾರೆ.

ದಿವ್ಯಾ ಸುರೇಶ್​ಗೂ ಇದಕ್ಕೂ ಏನ್​ ಸಂಬಂಧ?

ಬಿಗ್​ ಬಾಸ್​ ಗ್ರ್ಯಾಂಡ್​ ಓಪನಿಂಗ್​ ದಿನ ನಟಿ ದಿವ್ಯಾ ಸುರೇಶ್​ ಅವರು ವೇದಿಕೆ ಮೇಲೆ ಮಾತನಾಡಿದ್ದರು. ಕಿಚ್ಚ ಸುದೀಪ್​ ಜೊತೆ ತಮ್ಮ ಬದುಕಿನ ಕೆಲವು ವಿವರಗಳನ್ನು ಹಂಚಿಕೊಂಡಿದ್ದರು. ‘ನಾನು ಒಂದು ಸೀರಿಯಲ್​ ಮಾಡಿದೆ. ಆದರೆ ಆ ಸೀರಿಯಲ್​ ಅರ್ಧಕ್ಕೆ ನಿಲ್ಲಿಸಿದರು. ಒಂದು ಸಿನಿಮಾ ಮಾಡಿದೆ. ಆ ಸಿನಿಮಾ ರಿಲೀಸ್​ ಆಗಲೇ ಇಲ್ಲ. ನಾನು ಏನೇ ಮಾಡಿದರೂ ಅದು ಅರ್ಧಕ್ಕೆ ನಿಂತು ಹೋಗುತ್ತಿತ್ತು’ ಎಂದು ದಿವ್ಯಾ ಸುರೇಶ್​ ಹೇಳಿದ್ದರು. ಅದೇ ಮಾತನ್ನು ನೆಟ್ಟಿಗರು ಈಗ ಮತ್ತೆ ನೆನಪಿಸಿಕೊಂಡಿದ್ದಾರೆ. ಆ ದೃಶ್ಯ ತುಣುಕು ಇಟ್ಟುಕೊಂಡು ಟ್ರೋಲ್​ ಮಾಡಲಾಗುತ್ತಿದೆ.

ಈ ಸಲ ಕಪ್​ ನಮ್ದೇ ಎಂದಿದ್ದ ಮಂಜು!

ಪ್ರತಿ ಬಾರಿ ಐಪಿಎಲ್​ ಶುರುವಾದಾಗ ಆರ್​ಸಿಬಿ ಅಭಿಮಾನಿಗಳು ‘ಈ ಸಲ ಕಪ್​ ನಮ್ದೇ’ ಎಂದು ಕೂಗುತ್ತಾರೆ. ಆದರೆ ಒಂದು ಬಾರಿಯೂ ಅವರ ಕೈಗೆ ಕಪ್ ಸಿಕ್ಕಿಲ್ಲ. ಅಚ್ಚರಿ ಎಂದರೆ, ಬಿಗ್​ ಬಾಸ್​ ಮನೆಯ ಒಳಗೂ ಈ ಸಲ ಕಪ್​ ನಮ್ದೇ ಎಂದು ಮಂಜು ಹೇಳಿದ್ದರು. ಬಿಗ್​ ಬಾಸ್​ನಲ್ಲಿ ಗಾಜಿನ ಲೋಟ ಒಡೆದುಹಾಕಿದ್ದಕ್ಕಾಗಿ ಮಂಜುಗೆ ಶಿಕ್ಷೆಯ ರೂಪದಲ್ಲಿ ಚಿಕ್ಕ ಕಪ್​ ನೀಡಲಾಗಿತ್ತು. ಬಿಗ್​ ಬಾಸ್​ ಮುಂದಿನ ಆದೇಶ ನೀಡುವವರೆಗೆ ಅದೇ ಕಪ್​ನಲ್ಲಿ ನೀರು ಕುಡಿಯಬೇಕು ಎಂದು ಸೂಚಿಸಲಾಗಿತ್ತು. ಆ ಸಂದರ್ಭದಲ್ಲಿ ‘ಈ ಸಲ ಕಪ್​ ನಮ್ದೇ’ ಎಂದು ಮಂಜು ಹೇಳಿದ್ದರು.

ಮಂಜು ಹಾಗೆ ಹೇಳಿದ್ದರಿಂದಲೇ ಐಪಿಎಲ್​ ರೀತಿಯೇ ಬಿಗ್​ ಬಾಸ್​ ಕೂಡ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಟ್ರೋಲ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇಂದು ಬಿಗ್​ ಬಾಸ್ ಸೀಸನ್​ 8ರ​ ಕೊನೇ ಸಂಚಿಕೆ ಪ್ರಸಾರ ಆಗಲಿದೆ. ಒಟ್ಟಿನಲ್ಲಿ ಐಪಿಎಲ್​ ಮತ್ತು ಬಿಗ್​ ಬಾಸ್​ ರದ್ದಾಗಿರುವುದರಿಂದ ಟಿವಿ ಮುಂದೆ ಕೂರುತಿದ್ದ ಜನರಿಗೆ ಮನರಂಜನೆ ಇಲ್ಲದಂತಾಗಿದೆ. ಟಿವಿ ಸೀರಿಯಲ್​ ಚಿತ್ರೀಕರಣ ನಿಂತಿರುವುದರಿಂದ ಹಳೇ ಎಪಿಸೋಡ್​ಗಳನ್ನು ಮರುಪ್ರಸಾರ ಮಾಡುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ