Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ

BBK8: ಮೊದಲ ಇನ್ನಿಂಗ್ಸ್​​ನ ಆರಂಭದಲ್ಲಿ ಭಾರಿ ಮನರಂಜನೆ ನೀಡುತ್ತಿದ್ದ ಮಂಜು ಪಾವಗಡ ಅವರು ನಂತರದ ದಿನಗಳಲ್ಲಿ ದಿವ್ಯಾ ಸುರೇಶ್​ ಜೊತೆ ಸೇರಿಕೊಂಡು ಮಂಕಾಗಿದ್ದರು. ಅದು ಪ್ರೇಕ್ಷಕರಿಗೂ ನಿರಾಸೆ ಮೂಡಿಸಿತ್ತು.

Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ
ಮಂಜು-ದಿವ್ಯಾ ಸುರೇಶ್​
Follow us
|

Updated on:Jun 25, 2021 | 9:29 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಹಲವು ಬದಲಾವಣೆ ಕಾಣುತ್ತಿದೆ. ಈಗಂತೂ ಆಟದ ಸ್ವರೂಪವೇ ಬದಲಾಗಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ಶೋ ಅರ್ಧಕ್ಕೆ ನಿಂತಿತ್ತು. ಹಾಗಾಗಿ ಎಲ್ಲ 12 ಸ್ಪರ್ಧಿಗಳು ಒಂದೂವರೆ ತಿಂಗಳ ಕಾಲ ಗ್ಯಾಪ್​ ಪಡೆದುಕೊಂಡು ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಬಹುತೇಕರು ಹಳೇ ಎಪಿಸೋಡ್​ಗಳನ್ನು ನೋಡಿಕೊಂಡು ಬಂದಿದ್ದಾರೆ. ಅವರವರ ಪ್ಲಸ್​ ಮತ್ತು ಮೈನಸ್​ಗಳನ್ನು ಅರಿತುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಮಂಜು ಪಾವಗಡ ಕೂಡ ಆಟದ ಪ್ಲ್ಯಾನ್​ ಬದಲಾಯಿಸಿದ್ದಾರೆ.

ಮೊದಲ ಇನ್ನಿಂಗ್ಸ್​​ನ ಆರಂಭದಲ್ಲಿ ಭಾರಿ ಮನರಂಜನೆ ನೀಡುತ್ತಿದ್ದ ಮಂಜು ಪಾವಗಡ ಅವರು ನಂತರದ ದಿನಗಳಲ್ಲಿ ದಿವ್ಯಾ ಸುರೇಶ್​ ಜೊತೆ ಸೇರಿಕೊಂಡು ಮಂಕಾಗಿದ್ದರು. ಅದು ಪ್ರೇಕ್ಷಕರಿಗೂ ನಿರಾಸೆ ಮೂಡಿಸಿತ್ತು. ಅದು ಸ್ವತಃ ಅವರ ಗಮನಕ್ಕೆ ಬಂದಿದ್ದರೂ ಕೂಡ ಸಮಯ ಕೈ ಮೀರಿ ಹೋಗಿತ್ತು. ಆದರೆ ಈಗ ಹೊಸ ಉತ್ಸಾಹದೊಂದಿಗೆ ಮಂಜು ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಪಡೆದುಕೊಂಡಿದ್ದಾರೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಎದುರಲ್ಲಿ ತಾವು ಆ​ಡಿದ ಮಾತನ್ನ ಉಳಿಸಿಕೊಳ್ಳುತ್ತಿದ್ದಾರೆ.

ಎರಡನೇ ಇನ್ನಿಂಗ್ಸ್​ ಶುರುವಾಗುವಾಗ ಎಲ್ಲ ಸ್ಪರ್ಧಿಗಳನ್ನು ವೇದಿಕೆಗೆ ಕರೆದು ಸುದೀಪ್ ಮಾತನಾಡಿಸಿದ್ದರು. ‘ಬಿಗ್​ ಬಾಸ್​ ಮನೆಯ ಜರ್ನಿಯಲ್ಲಿ​ ಸಿಂಗಲ್​ ರೈಡ್​ ಇರುತ್ತೋ ಅಥವಾ ಡಬಲ್​ ರೈಡ್​ ಇರುತ್ತದೆಯೋ’ ಎಂದು ಸುದೀಪ್ ನೇರವಾಗಿ ಪ್ರಶ್ನೆ ಮಾಡಿದ್ದರು. ಆಗ ಮಂಜು, ‘ನಾನು ಸಿಂಗಲ್​ ರೈಡ್​ ಹೋಗುತ್ತೇನೆ’ ಎಂದು ಹೇಳುವ ಮೂಲಕ ದಿವ್ಯಾ ಅವರಿಂದ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ್ದರು. ಆ ಮಾತಿಗೆ ತಕ್ಕಂತೆಯೇ ಅವರೀಗ ನಡೆದುಕೊಳ್ಳುತ್ತಿದ್ದಾರೆ. ಎಲ್ಲರನ್ನೂ ನಗಿಸುತ್ತ, ಭರ್ಜರಿ ಮನರಂಜನೆ ನೀಡುತ್ತ ದೊಡ್ಮನೆಯ ರಂಗನ್ನು ಅವರು ಹೆಚ್ಚಿಸಿದ್ದಾರೆ. ಅದಕ್ಕೆ ಇತ್ತೀಚೆಗೆ ನಡೆದ ಒಂದು ಘಟನೆಯೇ ಸಾಕ್ಷಿ.

ಟಾಸ್ಕ್​ ಆಡುವಾಗ ದಿವ್ಯಾ ಸುರೇಶ್ ಕಾಲಿಗೆ ಪೆಟ್ಟಾಗಿದೆ. ಹಾಗಿದ್ದರೂ ಕೂಡ ಮಂಜು ಅತೀ ಉತ್ಸಾಹ ತೋರಿಸುತ್ತ ಅವರನ್ನು ಸಮಾಧಾನ ಮಾಡಲು ಹೋಗಿಲ್ಲ. ಎಲ್ಲರಂತೆ ತಾವೂ ಒಬ್ಬರಾಗಿ ಆ ಸಂದರ್ಭವನ್ನು ನಿಭಾಯಿಸಿದ್ದಾರೆ. ದಿವ್ಯಾಗೆ ಸಮಾಧಾನ ಮಾಡು ಎಂದು ಬೇರೆ ಸ್ಪರ್ಧಿಗಳೆಲ್ಲ ಒತ್ತಾಯಿಸಿದರೂ ಕೂಡ ಅವರು ಅತಿಯಾಗಿ ನಡೆದುಕೊಂಡಿಲ್ಲ.

ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ಈ ವಿಚಾರ ಗೊತ್ತಾಗಿದೆ. ಶನಿವಾರದ (ಜೂ.25) ಎಪಿಸೋಡ್​ನಲ್ಲಿ ಈ ದೃಶ್ಯಗಳು ಪ್ರಸಾರ ಆಗಲಿವೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Published On - 9:28 am, Fri, 25 June 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ