AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ

BBK8: ಮೊದಲ ಇನ್ನಿಂಗ್ಸ್​​ನ ಆರಂಭದಲ್ಲಿ ಭಾರಿ ಮನರಂಜನೆ ನೀಡುತ್ತಿದ್ದ ಮಂಜು ಪಾವಗಡ ಅವರು ನಂತರದ ದಿನಗಳಲ್ಲಿ ದಿವ್ಯಾ ಸುರೇಶ್​ ಜೊತೆ ಸೇರಿಕೊಂಡು ಮಂಕಾಗಿದ್ದರು. ಅದು ಪ್ರೇಕ್ಷಕರಿಗೂ ನಿರಾಸೆ ಮೂಡಿಸಿತ್ತು.

Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ
ಮಂಜು-ದಿವ್ಯಾ ಸುರೇಶ್​
ಮದನ್​ ಕುಮಾರ್​
|

Updated on:Jun 25, 2021 | 9:29 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಹಲವು ಬದಲಾವಣೆ ಕಾಣುತ್ತಿದೆ. ಈಗಂತೂ ಆಟದ ಸ್ವರೂಪವೇ ಬದಲಾಗಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾರಣದಿಂದ ಶೋ ಅರ್ಧಕ್ಕೆ ನಿಂತಿತ್ತು. ಹಾಗಾಗಿ ಎಲ್ಲ 12 ಸ್ಪರ್ಧಿಗಳು ಒಂದೂವರೆ ತಿಂಗಳ ಕಾಲ ಗ್ಯಾಪ್​ ಪಡೆದುಕೊಂಡು ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಬಹುತೇಕರು ಹಳೇ ಎಪಿಸೋಡ್​ಗಳನ್ನು ನೋಡಿಕೊಂಡು ಬಂದಿದ್ದಾರೆ. ಅವರವರ ಪ್ಲಸ್​ ಮತ್ತು ಮೈನಸ್​ಗಳನ್ನು ಅರಿತುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಮಂಜು ಪಾವಗಡ ಕೂಡ ಆಟದ ಪ್ಲ್ಯಾನ್​ ಬದಲಾಯಿಸಿದ್ದಾರೆ.

ಮೊದಲ ಇನ್ನಿಂಗ್ಸ್​​ನ ಆರಂಭದಲ್ಲಿ ಭಾರಿ ಮನರಂಜನೆ ನೀಡುತ್ತಿದ್ದ ಮಂಜು ಪಾವಗಡ ಅವರು ನಂತರದ ದಿನಗಳಲ್ಲಿ ದಿವ್ಯಾ ಸುರೇಶ್​ ಜೊತೆ ಸೇರಿಕೊಂಡು ಮಂಕಾಗಿದ್ದರು. ಅದು ಪ್ರೇಕ್ಷಕರಿಗೂ ನಿರಾಸೆ ಮೂಡಿಸಿತ್ತು. ಅದು ಸ್ವತಃ ಅವರ ಗಮನಕ್ಕೆ ಬಂದಿದ್ದರೂ ಕೂಡ ಸಮಯ ಕೈ ಮೀರಿ ಹೋಗಿತ್ತು. ಆದರೆ ಈಗ ಹೊಸ ಉತ್ಸಾಹದೊಂದಿಗೆ ಮಂಜು ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಪಡೆದುಕೊಂಡಿದ್ದಾರೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಎದುರಲ್ಲಿ ತಾವು ಆ​ಡಿದ ಮಾತನ್ನ ಉಳಿಸಿಕೊಳ್ಳುತ್ತಿದ್ದಾರೆ.

ಎರಡನೇ ಇನ್ನಿಂಗ್ಸ್​ ಶುರುವಾಗುವಾಗ ಎಲ್ಲ ಸ್ಪರ್ಧಿಗಳನ್ನು ವೇದಿಕೆಗೆ ಕರೆದು ಸುದೀಪ್ ಮಾತನಾಡಿಸಿದ್ದರು. ‘ಬಿಗ್​ ಬಾಸ್​ ಮನೆಯ ಜರ್ನಿಯಲ್ಲಿ​ ಸಿಂಗಲ್​ ರೈಡ್​ ಇರುತ್ತೋ ಅಥವಾ ಡಬಲ್​ ರೈಡ್​ ಇರುತ್ತದೆಯೋ’ ಎಂದು ಸುದೀಪ್ ನೇರವಾಗಿ ಪ್ರಶ್ನೆ ಮಾಡಿದ್ದರು. ಆಗ ಮಂಜು, ‘ನಾನು ಸಿಂಗಲ್​ ರೈಡ್​ ಹೋಗುತ್ತೇನೆ’ ಎಂದು ಹೇಳುವ ಮೂಲಕ ದಿವ್ಯಾ ಅವರಿಂದ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ್ದರು. ಆ ಮಾತಿಗೆ ತಕ್ಕಂತೆಯೇ ಅವರೀಗ ನಡೆದುಕೊಳ್ಳುತ್ತಿದ್ದಾರೆ. ಎಲ್ಲರನ್ನೂ ನಗಿಸುತ್ತ, ಭರ್ಜರಿ ಮನರಂಜನೆ ನೀಡುತ್ತ ದೊಡ್ಮನೆಯ ರಂಗನ್ನು ಅವರು ಹೆಚ್ಚಿಸಿದ್ದಾರೆ. ಅದಕ್ಕೆ ಇತ್ತೀಚೆಗೆ ನಡೆದ ಒಂದು ಘಟನೆಯೇ ಸಾಕ್ಷಿ.

ಟಾಸ್ಕ್​ ಆಡುವಾಗ ದಿವ್ಯಾ ಸುರೇಶ್ ಕಾಲಿಗೆ ಪೆಟ್ಟಾಗಿದೆ. ಹಾಗಿದ್ದರೂ ಕೂಡ ಮಂಜು ಅತೀ ಉತ್ಸಾಹ ತೋರಿಸುತ್ತ ಅವರನ್ನು ಸಮಾಧಾನ ಮಾಡಲು ಹೋಗಿಲ್ಲ. ಎಲ್ಲರಂತೆ ತಾವೂ ಒಬ್ಬರಾಗಿ ಆ ಸಂದರ್ಭವನ್ನು ನಿಭಾಯಿಸಿದ್ದಾರೆ. ದಿವ್ಯಾಗೆ ಸಮಾಧಾನ ಮಾಡು ಎಂದು ಬೇರೆ ಸ್ಪರ್ಧಿಗಳೆಲ್ಲ ಒತ್ತಾಯಿಸಿದರೂ ಕೂಡ ಅವರು ಅತಿಯಾಗಿ ನಡೆದುಕೊಂಡಿಲ್ಲ.

ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ಈ ವಿಚಾರ ಗೊತ್ತಾಗಿದೆ. ಶನಿವಾರದ (ಜೂ.25) ಎಪಿಸೋಡ್​ನಲ್ಲಿ ಈ ದೃಶ್ಯಗಳು ಪ್ರಸಾರ ಆಗಲಿವೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Published On - 9:28 am, Fri, 25 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ