AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್​ ಮೊದಲ ವಾರವೇ ಯಾರ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ?

Bigg Boss Elimination: ಬಿಗ್​ ಬಾಸ್​ ಮನೆಯಲ್ಲಿ ಬಹುತೇಕರು ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಂಡಿದ್ದಾರೆ. ಸುದೀಪ್​ ಅವರು ಬಹುದಿನಗಳ ಬಳಿಕ ಪಂಚಾಯಿತಿ ಮಾಡಲು ಬರುತ್ತಿರುವುದರಿಂದ ನಿರೀಕ್ಷೆ ಹೆಚ್ಚಿದೆ.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್​ ಮೊದಲ ವಾರವೇ ಯಾರ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ?
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
ಮದನ್​ ಕುಮಾರ್​
|

Updated on: Jun 26, 2021 | 9:06 AM

ಎಲ್ಲರ ನಿರೀಕ್ಷೆಯನ್ನೂ ಮೀರಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರ ಎರಡನೇ ಇನ್ನಿಂಗ್ಸ್​ ಶುರು ಆಯಿತು. ಇಷ್ಟು ವರ್ಷಗಳ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಆಗಿದ್ದು ಇದೇ ಮೊದಲು. 12 ಸ್ಪರ್ಧಿಗಳಿಗೆ ಮತ್ತೊಮ್ಮೆ ದೊಡ್ಮನೆ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಇದಕ್ಕೆ ಎರಡನೇ ಇನ್ನಿಂಗ್ಸ್​ ಎಂದು ಕರೆಯಲಾಗಿದ್ದರೂ, ಶುರುವಿನಲ್ಲೇ ಪೈಪೋಟಿ ಜೋರಾಗಿದೆ. ಈಗ ನೋಡನೋಡುತ್ತಿದ್ದಂತೆಯೇ ಎಲಿಮಿನೇಷನ್​ ಸಮಯ ಬಂದೇ ಬಿಟ್ಟಿದೆ. ಈ ವಾರ ನಾಮಿನೇಟ್​ ಆದವರ ಎದೆಯಲ್ಲಿ ಢವಢವ ಶುರು ಆಗಿದೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸದ್ಯ 12 ಜನರು ಸ್ಪರ್ಧಿಸುತ್ತಿದ್ದಾರೆ. ಒಂದು ದೀರ್ಘ ಗ್ಯಾಪ್​ನಲ್ಲಿ ಎಲ್ಲ ಎಪಿಸೋಡ್​ಗಳನ್ನು ನೋಡಿಕೊಂಡು, ಎಲ್ಲರ ಬಗ್ಗೆ ಇರುವ ಅಭಿಪ್ರಾಯನ್ನು ತಿಳಿದುಕೊಂಡು ದೊಡ್ಮನೆಗೆ ಕಾಲಿಟ್ಟಿರುವ ಸ್ಪರ್ಧಿಗಳು ನಿಷ್ಠುರವಾಗಿಯೇ ನಾಮಿನೇಷನ್​ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ರಘು ಗೌಡ, ಮಂಜು ಪಾವಗಡ, ದಿವ್ಯಾ ಸುರೇಶ್​, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅವರು ಈ ವಾರ ನಾಮಿನೇಟ್​ ಆಗಿದ್ದಾರೆ.

ಈ 7 ಜನರ ಪೈಕಿ ಯಾರು ಮನೆಯಿಂದ ಹೊರಹೋಗುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಪ್ರೇಕ್ಷಕರಲ್ಲಿ ಮೂಡಿದೆ. ಇಂದು (ಜೂ.26) ಸಂಜೆ 9 ಗಂಟೆಗೆ ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್​ ಪ್ರಸಾರ ಆಗಲಿದೆ. ಸುದೀಪ್​ ಅವರು ಬಹುದಿನಗಳ ಬಳಿಕ ಪಂಚಾಯಿತಿ ಮಾಡಲು ಬರುತ್ತಿರುವುದರಿಂದ ಆ ಬಗ್ಗೆಯೂ ನಿರೀಕ್ಷೆ ಹೆಚ್ಚಿದೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಬಹುತೇಕರು ತಮ್ಮ ಆಟದ ವೈಖರಿಯನ್ನು ಬದಲಾಯಿಸಿಕೊಂಡಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ ಸದಾ ಕಾಲ ದಿವ್ಯಾ ಸುರೇಶ್​ ಅವರ ಹಿಂದೆ ಸುತ್ತುತ್ತಿದ್ದ ಮಂಜು ಪಾವಗಡ ಈಗ ಆಟದ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಇನ್ನೇನು ಕೆಲವೇ ವಾರಗಳಲ್ಲಿ ಫಿನಾಲೆ ಬರುವುದರಿಂದ ಟ್ರೋಫಿ ಗೆಲ್ಲುವತ್ತ ಎಲ್ಲರೂ ಗುರಿ ಇರಿಸಿಕೊಂಡಿದ್ದಾರೆ.

ಇದನ್ನೂ ಓದಿ:

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್