Bigg Boss Kannada: ಮಂಜು-ದಿವ್ಯಾ ಮದುವೆ ವಿಚಾರ ಸ್ಫೋಟ; ಸುದೀಪ್​ ಎದುರಲ್ಲೇ ಸಿಡಿದೆದ್ದ ಚಂದ್ರಚೂಡ್​

Manju Pavagada Divya Suresh: ಮಂಜು-ದಿವ್ಯಾ ಸುರೇಶ್​ ಮದುವೆ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಹಾಗೂ ಮಂಜು ನಡುವೆ ಮಾತಿನ ಯುದ್ಧವೇ ನಡೆದಿದೆ. ‘ನನ್ನ ತಂದೆ-ತಾಯಿ ಇದನ್ನೆಲ್ಲ ಕಲಿಸಿಲ್ಲ’ ಎಂದು ಚಂದ್ರಚೂಡ್​ ತಿರುಗೇಟು ನೀಡಿದ್ದಾರೆ. ದಿವ್ಯಾ​ ಕಣ್ಣೀರು ಹಾಕಿದ್ದಾರೆ!

Bigg Boss Kannada: ಮಂಜು-ದಿವ್ಯಾ ಮದುವೆ ವಿಚಾರ ಸ್ಫೋಟ; ಸುದೀಪ್​ ಎದುರಲ್ಲೇ ಸಿಡಿದೆದ್ದ ಚಂದ್ರಚೂಡ್​
ಚಕ್ರವರ್ತಿ ಚಂದ್ರಚೂಡ್ - ಮಂಜು ಪಾವಗಡ
Follow us
| Updated By: ಮದನ್​ ಕುಮಾರ್​

Updated on: Jun 27, 2021 | 9:42 AM

ಕೆಲವೇ ದಿನಗಳ ಹಿಂದೆ ಶುರು ಆಗಿರುವ ಬಿಗ್​ ಬಾಸ್​ ಕನ್ನಡದ ಎರಡನೇ ಇನ್ನಿಂಗ್ಸ್​ನಲ್ಲಿ ಈಗ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಕೊರೊನಾ ಕಾರಣದಿಂದ ಈ ಶೋ 42 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಆ ವೇಳೆ ಬಹುತೇಕ ಸ್ಪರ್ಧಿಗಳು ತಮ್ಮ ಹಳೇ ಎಪಿಸೋಡ್​ಗಳನ್ನು ನೋಡಿಕೊಂಡು ಬಂದಿದ್ದಾರೆ. ಬೆನ್ನ ಹಿಂದೆ ಯಾರು ಏನೆಲ್ಲ ಮಾತನಾಡಿದ್ದಾರೆ ಎಂಬುದು ತಿಳಿದುಕೊಂಡಿರುವ ಎಲ್ಲರೂ ಹೊಸ ತಂತ್ರದ ಮೂಲಕ ಆಟ ಮುಂದುವರಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನ ಮೊದಲ ವೀಕೆಂಡ್​ನಲ್ಲೇ ಮಂಜು ಪಾವಗಡ ಮತ್ತು ಚಕ್ರವರ್ತಿ ಚಂದ್ರಚೂಡ್​ ನಡುವೆ ದೊಡ್ಡ ಜಟಾಪಟಿ ನಡೆದಿದೆ.

ಬಿಗ್​ ಬಾಸ್​ ಮನೆಯಲ್ಲಿರುವ ಜೋಡಿಗಳ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅವರು ಮಾಧ್ಯಮಗಳ ಸಂದರ್ಶನದಲ್ಲಿ ಮನಬಂದಂತೆ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎರಡನೇ ಇನ್ನಿಂಗ್ಸ್​ ಶುರುವಾಗುತ್ತಿದ್ದಂತೆಯೇ ದೊಡ್ಮನೆಯೊಳಗೆ ಈ ವಿಚಾರ ಚರ್ಚೆಗೆ ಬಂದಿತ್ತು. ಈಗ ‘ಸೂಪರ್​ ಸಂಡೇ ವಿತ್​ ಸುದೀಪ’ ಎಪಿಸೋಡ್​ನಲ್ಲಿ ಮಂಜು ಮತ್ತು ದಿವ್ಯಾ ಸುರೇಶ್​ ಅವರ ಮದುವೆ ವಿಚಾರಕ್ಕೆ ದೊಡ್ಡ ವಾಗ್ವಾದ ನಡೆದು ಹೋಗಿದೆ.

ಮೊದಲ ಇನ್ನಿಂಗ್ಸ್​ ಶುರುವಾದಾಗ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಅವರು ತಮಾಷೆಗೆ ಗಂಡ-ಹೆಂಡತಿ ರೀತಿ ನಾಟಕ ಆಡಿದ್ದರು. ಅದೇ ವಿಚಾರ ಇಟ್ಟುಕೊಂಡು ಚಕ್ರವರ್ತಿ ಚಂದ್ರಚೂಡ್​ ಈಗ ಆಕ್ಷೇಪ ಎತ್ತಿದ್ದಾರೆ. ‘ಶ್ರೀಮಾನ್​ ಮಂಜು ಪಾವಗಡ, ಒಂದು ಶೋಗೋಸ್ಕರ ಒಬ್ಬಳು ಹೆಣ್ಣನ್ನು ಹೆಂಡತಿಯಾಗಿ ಹೇಗೆ ಮಾಡಿಕೊಳ್ಳುತ್ತಾನೆ’ ಎಂದು ಚಂದ್ರಚೂಡ್​ ತೀವ್ರವಾಗಿ ಕಿಡಿಕಾರಿದ್ದಾರೆ.

ಚಂದ್ರಚೂಡ್​ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಮಂಜು, ‘ಅದು ನಾಟಕ ಎಂಬುದು ಇಡೀ ಮನೆಯವರಿಗೆ ಗೊತ್ತಿತ್ತು’ ಎಂದಿದ್ದಾರೆ. ‘ನನ್ನ ತಂದೆ-ತಾಯಿ ಇದನ್ನೆಲ್ಲ ಕಲಿಸಿಲ್ಲ ಸರ್​’ ಎಂದು ಇನ್ನಷ್ಟು ಗರಂ ಆಗಿ ಚಂದ್ರಚೂಡ್​ ತಿರುಗೇಟು ನೀಡಿದ್ದಾರೆ. ‘ಇಲ್ಲಿದ್ದಾಗ ನಕ್ಕು, ಮಜಾ ಮಾಡಿ, ಹೊರಗೆ ಹೋದಮೇಲೆ ಇದೆಲ್ಲ ನಿಮಗೆ ನೆನಪಾಯ್ತಾ’ ಎಂದು ಮಂಜು ಮರುಪ್ರಶ್ನೆ ಹಾಕಿದ್ದಾರೆ. ಒಟ್ಟಾರೆ ಕಿಚ್ಚ ಸುದೀಪ್​ ಎದುರಿನಲ್ಲೇ ನಡೆದ ಈ ಮಾತಿನ ಯುದ್ಧದಲ್ಲಿ ದಿವ್ಯಾ ಸುರೇಶ್​ ಕಣ್ಣೀರು ಹಾಕಿದ್ದಾರೆ!

ಜೂ.27ರ ‘ಸೂಪರ್​ ಸಂಡೇ ವಿತ್​ ಸುದೀಪ’ ಎಪಿಸೋಡ್​ನಲ್ಲಿ ಈ ಘಟನೆಗಳು ಪ್ರಸಾರ ಆಗಲಿವೆ. ಇದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದ್ದು, ವೀಕ್ಷಕರಲ್ಲಿ ತೀವ್ರ ಕೌತುಕ ಕೆರಳಿಸಿದೆ.

ಇದನ್ನೂ ಓದಿ:

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ