AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು-ದಿವ್ಯಾ ಮದುವೆ ವಿಚಾರ ಸ್ಫೋಟ; ಸುದೀಪ್​ ಎದುರಲ್ಲೇ ಸಿಡಿದೆದ್ದ ಚಂದ್ರಚೂಡ್​

Manju Pavagada Divya Suresh: ಮಂಜು-ದಿವ್ಯಾ ಸುರೇಶ್​ ಮದುವೆ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಹಾಗೂ ಮಂಜು ನಡುವೆ ಮಾತಿನ ಯುದ್ಧವೇ ನಡೆದಿದೆ. ‘ನನ್ನ ತಂದೆ-ತಾಯಿ ಇದನ್ನೆಲ್ಲ ಕಲಿಸಿಲ್ಲ’ ಎಂದು ಚಂದ್ರಚೂಡ್​ ತಿರುಗೇಟು ನೀಡಿದ್ದಾರೆ. ದಿವ್ಯಾ​ ಕಣ್ಣೀರು ಹಾಕಿದ್ದಾರೆ!

Bigg Boss Kannada: ಮಂಜು-ದಿವ್ಯಾ ಮದುವೆ ವಿಚಾರ ಸ್ಫೋಟ; ಸುದೀಪ್​ ಎದುರಲ್ಲೇ ಸಿಡಿದೆದ್ದ ಚಂದ್ರಚೂಡ್​
ಚಕ್ರವರ್ತಿ ಚಂದ್ರಚೂಡ್ - ಮಂಜು ಪಾವಗಡ
TV9 Web
| Edited By: |

Updated on: Jun 27, 2021 | 9:42 AM

Share

ಕೆಲವೇ ದಿನಗಳ ಹಿಂದೆ ಶುರು ಆಗಿರುವ ಬಿಗ್​ ಬಾಸ್​ ಕನ್ನಡದ ಎರಡನೇ ಇನ್ನಿಂಗ್ಸ್​ನಲ್ಲಿ ಈಗ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಕೊರೊನಾ ಕಾರಣದಿಂದ ಈ ಶೋ 42 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಆ ವೇಳೆ ಬಹುತೇಕ ಸ್ಪರ್ಧಿಗಳು ತಮ್ಮ ಹಳೇ ಎಪಿಸೋಡ್​ಗಳನ್ನು ನೋಡಿಕೊಂಡು ಬಂದಿದ್ದಾರೆ. ಬೆನ್ನ ಹಿಂದೆ ಯಾರು ಏನೆಲ್ಲ ಮಾತನಾಡಿದ್ದಾರೆ ಎಂಬುದು ತಿಳಿದುಕೊಂಡಿರುವ ಎಲ್ಲರೂ ಹೊಸ ತಂತ್ರದ ಮೂಲಕ ಆಟ ಮುಂದುವರಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನ ಮೊದಲ ವೀಕೆಂಡ್​ನಲ್ಲೇ ಮಂಜು ಪಾವಗಡ ಮತ್ತು ಚಕ್ರವರ್ತಿ ಚಂದ್ರಚೂಡ್​ ನಡುವೆ ದೊಡ್ಡ ಜಟಾಪಟಿ ನಡೆದಿದೆ.

ಬಿಗ್​ ಬಾಸ್​ ಮನೆಯಲ್ಲಿರುವ ಜೋಡಿಗಳ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅವರು ಮಾಧ್ಯಮಗಳ ಸಂದರ್ಶನದಲ್ಲಿ ಮನಬಂದಂತೆ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎರಡನೇ ಇನ್ನಿಂಗ್ಸ್​ ಶುರುವಾಗುತ್ತಿದ್ದಂತೆಯೇ ದೊಡ್ಮನೆಯೊಳಗೆ ಈ ವಿಚಾರ ಚರ್ಚೆಗೆ ಬಂದಿತ್ತು. ಈಗ ‘ಸೂಪರ್​ ಸಂಡೇ ವಿತ್​ ಸುದೀಪ’ ಎಪಿಸೋಡ್​ನಲ್ಲಿ ಮಂಜು ಮತ್ತು ದಿವ್ಯಾ ಸುರೇಶ್​ ಅವರ ಮದುವೆ ವಿಚಾರಕ್ಕೆ ದೊಡ್ಡ ವಾಗ್ವಾದ ನಡೆದು ಹೋಗಿದೆ.

ಮೊದಲ ಇನ್ನಿಂಗ್ಸ್​ ಶುರುವಾದಾಗ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಅವರು ತಮಾಷೆಗೆ ಗಂಡ-ಹೆಂಡತಿ ರೀತಿ ನಾಟಕ ಆಡಿದ್ದರು. ಅದೇ ವಿಚಾರ ಇಟ್ಟುಕೊಂಡು ಚಕ್ರವರ್ತಿ ಚಂದ್ರಚೂಡ್​ ಈಗ ಆಕ್ಷೇಪ ಎತ್ತಿದ್ದಾರೆ. ‘ಶ್ರೀಮಾನ್​ ಮಂಜು ಪಾವಗಡ, ಒಂದು ಶೋಗೋಸ್ಕರ ಒಬ್ಬಳು ಹೆಣ್ಣನ್ನು ಹೆಂಡತಿಯಾಗಿ ಹೇಗೆ ಮಾಡಿಕೊಳ್ಳುತ್ತಾನೆ’ ಎಂದು ಚಂದ್ರಚೂಡ್​ ತೀವ್ರವಾಗಿ ಕಿಡಿಕಾರಿದ್ದಾರೆ.

ಚಂದ್ರಚೂಡ್​ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಮಂಜು, ‘ಅದು ನಾಟಕ ಎಂಬುದು ಇಡೀ ಮನೆಯವರಿಗೆ ಗೊತ್ತಿತ್ತು’ ಎಂದಿದ್ದಾರೆ. ‘ನನ್ನ ತಂದೆ-ತಾಯಿ ಇದನ್ನೆಲ್ಲ ಕಲಿಸಿಲ್ಲ ಸರ್​’ ಎಂದು ಇನ್ನಷ್ಟು ಗರಂ ಆಗಿ ಚಂದ್ರಚೂಡ್​ ತಿರುಗೇಟು ನೀಡಿದ್ದಾರೆ. ‘ಇಲ್ಲಿದ್ದಾಗ ನಕ್ಕು, ಮಜಾ ಮಾಡಿ, ಹೊರಗೆ ಹೋದಮೇಲೆ ಇದೆಲ್ಲ ನಿಮಗೆ ನೆನಪಾಯ್ತಾ’ ಎಂದು ಮಂಜು ಮರುಪ್ರಶ್ನೆ ಹಾಕಿದ್ದಾರೆ. ಒಟ್ಟಾರೆ ಕಿಚ್ಚ ಸುದೀಪ್​ ಎದುರಿನಲ್ಲೇ ನಡೆದ ಈ ಮಾತಿನ ಯುದ್ಧದಲ್ಲಿ ದಿವ್ಯಾ ಸುರೇಶ್​ ಕಣ್ಣೀರು ಹಾಕಿದ್ದಾರೆ!

ಜೂ.27ರ ‘ಸೂಪರ್​ ಸಂಡೇ ವಿತ್​ ಸುದೀಪ’ ಎಪಿಸೋಡ್​ನಲ್ಲಿ ಈ ಘಟನೆಗಳು ಪ್ರಸಾರ ಆಗಲಿವೆ. ಇದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದ್ದು, ವೀಕ್ಷಕರಲ್ಲಿ ತೀವ್ರ ಕೌತುಕ ಕೆರಳಿಸಿದೆ.

ಇದನ್ನೂ ಓದಿ:

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

Bigg Boss Kannada: ಸುದೀಪ್​ ಎದುರಲ್ಲಿ ಆಡಿದ ಮಾತು ಉಳಿಸಿಕೊಂಡ ಮಂಜು; ದೊಡ್ಮನೆಯಲ್ಲಿ ದೊಡ್ಡ ಬದಲಾವಣೆ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ