AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​

Manju Pavagada: ಬಿಗ್​ ಬಾಸ್​ನಲ್ಲಿ ಇನ್ನು ಕೆಲವೇ ವಾರಗಳು ಉಳಿದಿವೆ. ಮಂಜು ಸ್ಟ್ರಾಂಗ್​ ಸ್ಪರ್ಧಿ ಎಂಬುದು ನಿಜ. ಆದರೆ ಅವರು ದಿವ್ಯಾ ಸುರೇಶ್​ ಗುಂಗಲ್ಲಿ ಕಳೆದುಹೋಗುತ್ತಿದ್ದಾರೆ ಎಂಬ ಆರೋಪ ಮೊದಲಿನಿಂದಲೂ ಇದೆ.

Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​
ಮಂಜು ಪಾವಗಡ - ದಿವ್ಯಾ ಸುರೇಶ್​
ಮದನ್​ ಕುಮಾರ್​
| Edited By: |

Updated on: May 07, 2021 | 5:13 PM

Share

ಬಿಗ್​ ಬಾಸ್​ ಕನ್ನಡ 8ನೇ ಸೀಸನ್​ನ ಮೊದಲ ದಿನದಿಂದಲೇ ದಿವ್ಯಾ ಸುರೇಶ್ ಮತ್ತು ಮಂಜು ಪಾವಗಡ ಸಿಕ್ಕಾಪಟ್ಟೆ ಕ್ಲೋಸ್​ ಆಗಿಬಿಟ್ಟರು. ಅವರಿಬ್ಬರ ನಡುವಿನ ಆಪ್ತತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬಂತು. ಈಗ ಬಿಗ್​ ಬಾಸ್​ ಮನೆಯಲ್ಲಿ ಹತ್ತು ವಾರ ಕಳೆದಿದೆ. ಈ ಸಂದರ್ಭದಲ್ಲಿ ಮಂಜು ವರ್ತನೆ ಬದಲಾಗಿದೆ. ಅದನ್ನು ದಿವ್ಯಾ ಸುರೇಶ್​ ಗಮನಿಸಿದ್ದಾರೆ. ಎಲ್ಲವನ್ನೂ ಕಣ್ಣಾರೆ ಕಂಡ ಬಳಿಕ ಅವರು ಮಂಜುಗೆ ನೇರವಾಗಿ ಹೇಳಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಅನ್​ಸೀಸ್​ ವಿಡಿಯೋದಲ್ಲಿ ಈ ವಿಚಾರ ಬಹಿರಂಗ ಆಗಿದೆ.

ಕೆಲವೇ ದಿನಗಳ ಹಿಂದೆ ಮಂಜುಗೆ ಕಿಚ್ಚ ಸುದೀಪ್​ ಒಂದು ಕಿವಿಮಾತು​ ಹೇಳಿದ್ದರು. ‘ಒಂದೇ ಪ್ರಕಾರದ ಸಿನಿಮಾ ಮಾಡುತ್ತಿದ್ದರೆ ಬೋರ್​ ಆಗುತ್ತದೆ’ ಎನ್ನುವ ಮೂಲಕ ದಿವ್ಯಾ ಜೊತೆ ಮಾತ್ರ ಮಂಜು ಹೆಚ್ಚು ಸಮಯ ಕಳೆಯುತ್ತಾರೆ ಎಂಬುದನ್ನು ಸುದೀಪ್​ ಪರೋಕ್ಷವಾಗಿ ಹೇಳಿದ್ದರು. ಅದೇ ಕಾರಣಕ್ಕೋ ಏನೂ ಮಂಜು ಈಗ ದಿವ್ಯಾ ಅವರಿಂದ ಕೊಂಚ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಎನಿಸುತ್ತಿದೆ. ಆ ವಿಚಾರವಾಗಿ ದಿವ್ಯಾ ಮಾತನಾಡಿದ್ದಾರೆ.

‘ಮಾತಾಡಿಸೋಕೆ ಸಿಗಲ್ಲ. ಬೇಗ ಮಲಗಿಕೊಂಡು, ಬೇಗ ಎದ್ದೇಳ್ತೀಯ. ಏನ್​ ಮಂಜಾ? ಕಾಫಿ ಒಬ್ಬನೇ ಮಾಡಿಕೊಳ್ತೀಯ. ನನಗೆ ತಗೊಂಡು ಬರಲ್ಲ. ಕಾಫಿನೂ ಇಲ್ಲ, ಟೀನೂ ಇಲ್ಲ. 10 ವಾರ ಆದ ಮೇಲೆ ನನಗೆ ಅರಿವಾಗ್ತಾ ಇದೆಯಲ್ಲ.. ನೀನೆಂಥ ಮೋಸಗಾರ’ ಎಂದು ನಗುನಗುತ್ತಲೇ ಮಂಜುಗೆ ದಿವ್ಯಾ ತಿವಿದಿದ್ದಾರೆ. ಈ ದೃಶ್ಯವನ್ನು ಕಂಡು ಪಕ್ಕದಲ್ಲಿದ್ದ ಅರವಿಂದ್​ ಕೆ.ಪಿ. ನಕ್ಕಿದ್ದಾರೆ.

ಬಿಗ್​ ಬಾಸ್​ನಲ್ಲಿ ಇನ್ನು ಕೆಲವೇ ವಾರಗಳು ಉಳಿದಿವೆ. ಮಂಜು ಸ್ಟ್ರಾಂಗ್​ ಸ್ಪರ್ಧಿ ಎಂಬುದು ನಿಜ. ಆದರೆ ಅವರು ದಿವ್ಯಾ ಸುರೇಶ್​ ಗುಂಗಲ್ಲಿ ಕಳೆದುಹೋಗುತ್ತಿದ್ದಾರೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈಗ ಫಿನಾಲೆ ಸಮೀಪ ಆಗುತ್ತಿರುವುದರಿಂದ ಅವರು ಟಾಸ್ಕ್​ ಮತ್ತು ತಮ್ಮ ಸ್ಟ್ರಾಟಜಿ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ. ಅದೇ ಕಾರಣಕ್ಕಾಗಿ ದಿವ್ಯಾಯಿಂದ ಮಂಜು ಅಂತರ ಕಾಪಾಡಿಕೊಳ್ಳುತ್ತಿರಬಹುದು.

ಇದನ್ನೂ ಓದಿ:

ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ದಿವ್ಯಾ ಸುರೇಶ್​ ಬಳಿ ಭವಿಷ್ಯದ ಕನಸಿನ ಗುಟ್ಟು ಬಿಚ್ಚಿಟ್ಟ ಮಂಜು

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ