AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​

Manju Pavagada: ಬಿಗ್​ ಬಾಸ್​ನಲ್ಲಿ ಇನ್ನು ಕೆಲವೇ ವಾರಗಳು ಉಳಿದಿವೆ. ಮಂಜು ಸ್ಟ್ರಾಂಗ್​ ಸ್ಪರ್ಧಿ ಎಂಬುದು ನಿಜ. ಆದರೆ ಅವರು ದಿವ್ಯಾ ಸುರೇಶ್​ ಗುಂಗಲ್ಲಿ ಕಳೆದುಹೋಗುತ್ತಿದ್ದಾರೆ ಎಂಬ ಆರೋಪ ಮೊದಲಿನಿಂದಲೂ ಇದೆ.

Bigg Boss Kannada: ನೀನೆಂಥ ಮೋಸಗಾರ ಅಂತ 10 ವಾರದ ನಂತರ ಗೊತ್ತಾಯ್ತು; ಮಂಜುಗೆ ತಿವಿದ ದಿವ್ಯಾ​
ಮಂಜು ಪಾವಗಡ - ದಿವ್ಯಾ ಸುರೇಶ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: May 07, 2021 | 5:13 PM

Share

ಬಿಗ್​ ಬಾಸ್​ ಕನ್ನಡ 8ನೇ ಸೀಸನ್​ನ ಮೊದಲ ದಿನದಿಂದಲೇ ದಿವ್ಯಾ ಸುರೇಶ್ ಮತ್ತು ಮಂಜು ಪಾವಗಡ ಸಿಕ್ಕಾಪಟ್ಟೆ ಕ್ಲೋಸ್​ ಆಗಿಬಿಟ್ಟರು. ಅವರಿಬ್ಬರ ನಡುವಿನ ಆಪ್ತತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬಂತು. ಈಗ ಬಿಗ್​ ಬಾಸ್​ ಮನೆಯಲ್ಲಿ ಹತ್ತು ವಾರ ಕಳೆದಿದೆ. ಈ ಸಂದರ್ಭದಲ್ಲಿ ಮಂಜು ವರ್ತನೆ ಬದಲಾಗಿದೆ. ಅದನ್ನು ದಿವ್ಯಾ ಸುರೇಶ್​ ಗಮನಿಸಿದ್ದಾರೆ. ಎಲ್ಲವನ್ನೂ ಕಣ್ಣಾರೆ ಕಂಡ ಬಳಿಕ ಅವರು ಮಂಜುಗೆ ನೇರವಾಗಿ ಹೇಳಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಅನ್​ಸೀಸ್​ ವಿಡಿಯೋದಲ್ಲಿ ಈ ವಿಚಾರ ಬಹಿರಂಗ ಆಗಿದೆ.

ಕೆಲವೇ ದಿನಗಳ ಹಿಂದೆ ಮಂಜುಗೆ ಕಿಚ್ಚ ಸುದೀಪ್​ ಒಂದು ಕಿವಿಮಾತು​ ಹೇಳಿದ್ದರು. ‘ಒಂದೇ ಪ್ರಕಾರದ ಸಿನಿಮಾ ಮಾಡುತ್ತಿದ್ದರೆ ಬೋರ್​ ಆಗುತ್ತದೆ’ ಎನ್ನುವ ಮೂಲಕ ದಿವ್ಯಾ ಜೊತೆ ಮಾತ್ರ ಮಂಜು ಹೆಚ್ಚು ಸಮಯ ಕಳೆಯುತ್ತಾರೆ ಎಂಬುದನ್ನು ಸುದೀಪ್​ ಪರೋಕ್ಷವಾಗಿ ಹೇಳಿದ್ದರು. ಅದೇ ಕಾರಣಕ್ಕೋ ಏನೂ ಮಂಜು ಈಗ ದಿವ್ಯಾ ಅವರಿಂದ ಕೊಂಚ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಎನಿಸುತ್ತಿದೆ. ಆ ವಿಚಾರವಾಗಿ ದಿವ್ಯಾ ಮಾತನಾಡಿದ್ದಾರೆ.

‘ಮಾತಾಡಿಸೋಕೆ ಸಿಗಲ್ಲ. ಬೇಗ ಮಲಗಿಕೊಂಡು, ಬೇಗ ಎದ್ದೇಳ್ತೀಯ. ಏನ್​ ಮಂಜಾ? ಕಾಫಿ ಒಬ್ಬನೇ ಮಾಡಿಕೊಳ್ತೀಯ. ನನಗೆ ತಗೊಂಡು ಬರಲ್ಲ. ಕಾಫಿನೂ ಇಲ್ಲ, ಟೀನೂ ಇಲ್ಲ. 10 ವಾರ ಆದ ಮೇಲೆ ನನಗೆ ಅರಿವಾಗ್ತಾ ಇದೆಯಲ್ಲ.. ನೀನೆಂಥ ಮೋಸಗಾರ’ ಎಂದು ನಗುನಗುತ್ತಲೇ ಮಂಜುಗೆ ದಿವ್ಯಾ ತಿವಿದಿದ್ದಾರೆ. ಈ ದೃಶ್ಯವನ್ನು ಕಂಡು ಪಕ್ಕದಲ್ಲಿದ್ದ ಅರವಿಂದ್​ ಕೆ.ಪಿ. ನಕ್ಕಿದ್ದಾರೆ.

ಬಿಗ್​ ಬಾಸ್​ನಲ್ಲಿ ಇನ್ನು ಕೆಲವೇ ವಾರಗಳು ಉಳಿದಿವೆ. ಮಂಜು ಸ್ಟ್ರಾಂಗ್​ ಸ್ಪರ್ಧಿ ಎಂಬುದು ನಿಜ. ಆದರೆ ಅವರು ದಿವ್ಯಾ ಸುರೇಶ್​ ಗುಂಗಲ್ಲಿ ಕಳೆದುಹೋಗುತ್ತಿದ್ದಾರೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈಗ ಫಿನಾಲೆ ಸಮೀಪ ಆಗುತ್ತಿರುವುದರಿಂದ ಅವರು ಟಾಸ್ಕ್​ ಮತ್ತು ತಮ್ಮ ಸ್ಟ್ರಾಟಜಿ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ. ಅದೇ ಕಾರಣಕ್ಕಾಗಿ ದಿವ್ಯಾಯಿಂದ ಮಂಜು ಅಂತರ ಕಾಪಾಡಿಕೊಳ್ಳುತ್ತಿರಬಹುದು.

ಇದನ್ನೂ ಓದಿ:

ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ದಿವ್ಯಾ ಸುರೇಶ್​ ಬಳಿ ಭವಿಷ್ಯದ ಕನಸಿನ ಗುಟ್ಟು ಬಿಚ್ಚಿಟ್ಟ ಮಂಜು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ