AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕಳ್ಳ​ ನನ್ಮಗ ಎಂದು ಪ್ರಶಾಂತ್​ಗೆ ಬೈಯ್ದ ನಿಧಿ! ಅಚ್ಚರಿ ಹುಟ್ಟಿಸಿದ ಸಂಬರಗಿ ಪ್ರತಿಕ್ರಿಯೆ

Nidhi Subbaiah: ಹೆಜ್ಜೆ ಹೆಜ್ಜೆಗೂ ಪ್ರಶಾಂತ್​ ಸಂಬರಗಿ ಸುಳ್ಳು ಹೇಳುತ್ತಾರೆ ಎಂಬುದು ಈಗಾಗಲೇ ಸಾಬೀತಾಗಿದೆ. ಇದು ನಿಧಿಗೆ ಕಿಂಚಿತ್ತೂ ಇಷ್ಟ ಆಗುತ್ತಿಲ್ಲ. ಹಾಗಾಗಿ ಪ್ರಶಾಂತ್​ಗೆ ‘ಕಳ್ಳ ನನ್ಮಗ’ ಎಂದು ಅವರು ಬೈಯ್ದಿದ್ದಾರೆ.

Bigg Boss Kannada: ಕಳ್ಳ​ ನನ್ಮಗ ಎಂದು ಪ್ರಶಾಂತ್​ಗೆ ಬೈಯ್ದ ನಿಧಿ! ಅಚ್ಚರಿ ಹುಟ್ಟಿಸಿದ ಸಂಬರಗಿ ಪ್ರತಿಕ್ರಿಯೆ
ನಿಧಿ ಸುಬ್ಬಯ್ಯ - ಪ್ರಶಾಂತ್​ ಸಂಬರಗಿ
ಮದನ್​ ಕುಮಾರ್​
| Edited By: |

Updated on: Apr 07, 2021 | 3:47 PM

Share

ಬಿಗ್​ ಬಾಸ್​ ಮನೆಯಲ್ಲೀಗ ಆಟ ತೀವ್ರವಾಗಿದೆ. ತಮ್ಮ ಉಳಿವಿಗಾಗಿ ಎಲ್ಲರೂ ಸಿಕ್ಕಾಪಟ್ಟೆ ಹಣಾಹಣಿ ನಡೆಸುತ್ತಿದ್ದಾರೆ. ಟಾಸ್ಕ್​ನಲ್ಲಿ ಗೆಲ್ಲುವುದು ಮಾತ್ರವಲ್ಲದೆ ಕಿರಿಕ್​ಗಳನ್ನೂ ನಿಭಾಯಿಸಬೇಕಾದ ಅನಿವಾರ್ಯತೆ ಇದೆ. ಈ ಸಂದರ್ಭದಲ್ಲಿ ಪ್ರಶಾಂತ್​ ಸಂಬರಗಿ ಅವರ ನಡೆ ಅಚ್ಚರಿ ಮೂಡಿಸುತ್ತಿದೆ. ಅವರನ್ನು ಎಲ್ಲರೂ ಟಾರ್ಗೆಟ್​ ಮಾಡುತ್ತಿದ್ದಾರೆ. ಹಾಗೆ ಟಾರ್ಗೆಟ್​ ಆಗುವ ರೀತಿಯಲ್ಲೇ ಪ್ರಶಾಂತ್​ ನಡೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನಟಿ ನಿಧಿ ಸುಬ್ಬಯ್ಯ ಅವರು ಮುಖಕ್ಕೆ ಹೊಡೆದಂತೆ ಪ್ರಶಾಂತ್​ ಸಂಬರಗಿಗೆ ಬೈಯ್ದಿದ್ದಾರೆ!

ಹೆಜ್ಜೆ ಹೆಜ್ಜೆಗೂ ಪ್ರಶಾಂತ್​ ಸಂಬರಗಿ ಸುಳ್ಳು ಹೇಳುತ್ತಾರೆ ಎಂಬುದು ಈಗಾಗಗಲೇ ಸಾಬೀತಾಗಿದೆ. ವೀಕ್ಷಕರ ಗಮನಕ್ಕೂ ಅದು ಬಂದಿದೆ. ಮೊದಲು ತಪ್ಪು ಮಾಡಿ, ಆಮೇಲೆ ತನ್ನಿಂದ ತಪ್ಪೇ ಆಗಿಲ್ಲ ಎಂದು ವಾದಿಸುವ ಚಾಳಿ ಪ್ರಶಾಂತ್​ ಅವರದ್ದು. ಇದು ನಿಧಿಗೆ ಕಿಂಚಿತ್ತೂ ಇಷ್ಟ ಆಗಿಲ್ಲ. ಇದೇ ವಿಚಾರವಾಗಿ ಅಡುಗೆ ಮನೆಯಲ್ಲಿ ಚರ್ಚೆ ಆಗುತ್ತಿತ್ತು. ಈ ವೇಳೆ ಪ್ರಶಾಂತ್​ಗೆ ‘ಕಳ್ಳ ನನ್ಮಗ’ ಎಂದು ನಿಧಿ ಬೈಯ್ದರು.

‘ಅರ್ಧ ಚಮಚ ತುಪ್ಪದ ವಿಚಾರಕ್ಕೆ ಮನೆಯವರನ್ನು ನೋಡಿ ಇಡೀ ಕರ್ನಾಟಕ ನಗುವಂತೆ ಮಾಡಿದ್ರಲ್ಲ ಅಂತ ಸುದೀಪ್​ ಹೇಳಿದ್ರು’ ಎಂದು ಅಡುಗೆ ಮನೆಯಲ್ಲಿ ಚಂದ್ರಚೂಡ್​ಗೆ ಪ್ರಶಾಂತ್​ ಹೇಳುತ್ತಿದ್ದರು. ಆ ಮಾತಿಗೆ ನಿಧಿ ವಿರೋಧ ವ್ಯಕ್ತಪಡಿಸಿದರು. ಸುದೀಪ್​ ಆ ರೀತಿ ಹೇಳಿಯೇ ಇಲ್ಲ ಎಂದು ನಿಧಿ ವಾದಿಸಿದರು. ಆದರೂ ಹಠ ಬಿಡಿದೇ ಪ್ರಶಾಂತ್​ ಮಾತು ಮುಂದುವರಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನಿಧಿ, ‘ಯಾಕೆ ಸುಳ್ಳು ಹೇಳುತ್ತೀರಿ? ಮಾತು ಮಾತಿಗೆ ತಾಯಾಣೆ ಹಾಕೋದು. ಕಳ್​ ನನ್ಮಗ’ ಎಂದು ಹೇಳಿದರು.

‘ಕಳ್​ ನನ್ಮಗ’ ಎಂದು ನಿಧಿ ಹೇಳಿದ್ದು ಪ್ರಶಾಂತ್​ಗೆ ಸ್ಪಷ್ಟವಾಗಿ ಕೇಳಿಸಿತು. ಅವರು ಅರ್ಧ ಸೆಕೆಂಡ್​ ಮೌನವಾದರೇ ಹೊರತು ಹೆಚ್ಚಿನ ಪ್ರತಿಕ್ರಿಯೆ ನೀಡಲಿಲ್ಲ. ಇದು ಎಲ್ಲರಿಗೂ ಅಚ್ಚರಿ ಮೂಡಿಸುತ್ತಿದೆ. ಚಿಕ್ಕ ಪುಟ್ಟ ವಿಚಾರಗಳಿಗೆ ನೇರಾನೇರ ಜಗಳ ಮಾಡುವ ಪ್ರಶಾಂತ್​ ಸಂಬರಗಿ ಅವರು ‘ಕಳ್​ ನನ್ಮಗ’ ಎಂಬ ಬೈಯ್ಗುಳವನ್ನು ಕೇಳಿಸಿಕೊಂಡು ಯಾಕೆ ಸುಮ್ಮನಾದರೂ? ಈ ಪ್ರಶ್ನೆ ವೀಕ್ಷಕರ ತಲೆಯಲ್ಲಿ ಕೊರೆಯುತ್ತಿದೆ.

ನಿಧಿ ಹೀಗೆ ಹೀನಾಮಾನ ಬೈಯ್ದಿದ್ದನ್ನು ಕೇಳಿಸಿಕೊಂಡು ಸುಮ್ಮನಿರುವ ವ್ಯಕ್ತಿತ್ವ ಪ್ರಶಾಂತ್​ ಸಂಬರಗಿ ಅವರದ್ದು ಅಲ್ಲವೇ ಅಲ್ಲ. ಆದರೂ ಅವರು ಸೈಲೆಂಟ್​ ಆಗಿದ್ದಾರೆ ಎಂದರೆ ಅದರ ಹಿಂದೆ ಏನೋ ಸ್ಟ್ರಾಟಜಿ ಇದೆ ಎಂಬುದು ಖಂಡಿತ. ‘ನಿಧಿ ಕಳ್ ನನ್ಮಗ ಎಂದು ಬೈಯ್ದಳು. ನನಗೆ ಸ್ಪಷ್ಟವಾಗಿ ಕೇಳಿಸಿತು’ ಎಂದು ಚಕ್ರವರ್ತಿ ಚಂದ್ರಚೂಡ್​ ಕೂಡ ಆ ಘಟನೆಯನ್ನು ಪ್ರಶಾಂತ್​ಗೆ ಮತ್ತೆ ನೆನಪಿಸಿದರು. ಆದರೂ ಪ್ರಶಾಂತ್​ ಹೆಚ್ಚೇನೂ ಕೆರಳಿಲ್ಲ. ಇದು ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ. ಮನೆ ಹೊರಗೆ ಇದ್ದಾಗ ತಮಗೆ ಸಂಬಂಧವೇ ಇಲ್ಲದ ವಿಚಾರಗಳಲ್ಲಿ ತಲೆಹಾಕಿ ಕೂಗಾಡುತ್ತಿದ್ದ ಸಂಬರಗಿ, ಈಗ ತಾವೇ ಬೈಯ್ಸಿಕೊಂಡರೂ ಸೈಲೆಂಟ್​ ಆಗಿದ್ದಾರೆ!

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನಮಗೆ ಒತ್ತಡ ಹೇರುತ್ತಾರೆ! ಶಂಕರ್​ ಅಶ್ವತ್ಥ್​ ಹೀಗೆ ಹೇಳಿದ್ದು ಯಾಕೆ?

ಬಿಗ್​ ಬಾಸ್​ನಲ್ಲಿ ಗುಟ್ಟಾಗಿ ನಡೆಯುತ್ತಿದ್ದ ನಾಮಿನೇಷನ್​ ಈಗ ಬಟಾಬಯಲು! ಯಾರಿಗೆಲ್ಲ ಕಾದಿದೆ ಅಪಾಯ?

(Bigg Boss Kannada: Nidhi Subbaiah makes derogatory comment on Prashanth Sambargi in BBK8)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?