AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ರಘುಗೆ ಒಂದು ನ್ಯಾಯ, ಉಳಿದವರಿಗೊಂದು ನ್ಯಾಯ? ನಿಧಿ ತಲೆಯಲ್ಲಿ ಬಂತು ಡೌಟ್​

ಅರವಿಂದ್ ಕೆ.ಪಿ ಕೂಡ ಈ ವಾರ ನಾಮಿನೇಷನ್​ ಆಗಿದ್ದಾರೆ. ಅವರು, ಸ್ಟ್ರಾಂಗ್​ ಸ್ಪರ್ಧಿ ಎನ್ನುವ ಕಾರಣ ನೀಡಿದರು. ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಮೇಲೂ ನಾಮಿನೇಟ್​ ತೂಗುಗತ್ತಿ ಇದೆ.

ಬಿಗ್​ ಬಾಸ್​ನಿಂದ ರಘುಗೆ ಒಂದು ನ್ಯಾಯ, ಉಳಿದವರಿಗೊಂದು ನ್ಯಾಯ? ನಿಧಿ ತಲೆಯಲ್ಲಿ ಬಂತು ಡೌಟ್​
ರಘು ಗೌಡ-ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 10:32 PM

Share

ಬಿಗ್​ ಬಾಸ್​ ಮನೆಯಲ್ಲಿ ಆರನೇ ವಾರದ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಒಟ್ಟು ಏಳು ಜನರ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ. ಈ ಬಾರಿಯ ನಾಮಿನೇಷನ್​ ವೇಳೆ ರಘು ಗೌಡ ಹೆಸರನ್ನು ನಿಧಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಇದನ್ನು ಬಿಗ್​ ಬಾಸ್​ ಸ್ವೀಕರಿಸಲೇ ಇಲ್ಲ. ಇದು ಏಕೆ ಎನ್ನುವ ಪ್ರಶ್ನೆಯನ್ನು ಕೂಡ ನಿಧಿ ಕೇಳಿದರು. ಆದರೆ, ಯಾರೂ ಇದಕ್ಕೆ ಉತ್ತರ ಕೊಟ್ಟಿಲ್ಲ. ಹಾಗಾದ್ರೆ ಹೀಗೆಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಬಾರಿ ನಾಮಿನೇಷನ್​ಗೆ ನಾಯಕ ಮಂಜು ಪಾವಗಡ, ನೇರವಾಗಿ ನಾಮಿನೇಟ್​ ಆದ ನಿಧಿ ಸುಬ್ಬಯ್ಯ ಹಾಗೂ ಈ ವಾರವಷ್ಟೇ ಬಂದ ಚಕ್ರವರ್ತಿ ಚಂದ್ರಚೂಡ ಅವರ ಹೆಸರನ್ನು ಎತ್ತಿಕೊಳ್ಳುವಂತಿರಲಿಲ್ಲ. ಹೀಗಾಗಿ, ಮನೆಯಲ್ಲಿ ಬಹುತೇಕರು ಶಮಂತ್​ ಬ್ರೋ ಗೌಡ ಅವರ ಹೆಸರನ್ನು ಆಯ್ಕೆ ಮಾಡಿಕೊಂಡರು. ಅವರು ತುಂಬಾನೇ ಸ್ಲೋ, ನಮ್ಮ ವೇಗಕ್ಕೆ ಅವರು ಹೊಂದಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಅರವಿಂದ್ ಕೆ.ಪಿ ಕೂಡ ಈ ವಾರ ನಾಮಿನೇಷನ್​ ಆಗಿದ್ದಾರೆ. ಅವರು, ಸ್ಟ್ರಾಂಗ್​ ಸ್ಪರ್ಧಿ ಎನ್ನುವ ಕಾರಣ ನೀಡಿದರು. ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಮೇಲೂ ಎಲಿಮಿನೇಷನ್​​ ತೂಗುಗತ್ತಿ ಇದೆ. ನಿಧಿ ಸುಬ್ಬಯ್ಯ ಅವರನ್ನು ಶಂಕರ್ ಅಶ್ವತ್ಥ್​ ನೇರವಾಗಿ ನಾಮಿನೇಟ್​ ಮಾಡಿದ್ದರು.

ಮನೆಯ ನಾಯಕ ಮಂಜುಗೆ ಒಬ್ಬರನ್ನು ನಾಮಿನೇಟ್​ ಮಾಡುವ ಅವಕಾಶ ನೀಡಲಾಗಿತ್ತು. ಈ ವೇಳೆ, ರಾಜೀವ್​ ಅವರನ್ನು ಮಂಜು ಡೇಂಜರ್​ ಜೋನ್​ಗೆ ತಳ್ಳಿದರು. ಇದೇ ವೇಳೆ ರಘು ಹೆಸರನ್ನು ಶುಭಾ ನಾಮಿನೇಟ್​ ಮಾಡಿದ್ದರು. ಆದರೆ, ಅವರ ಹೆಸರು ನಾಮಿನೇಟ್​ ಲಿಸ್ಟ್​ಗೆ ಬಂದೇ ಇಲ್ಲ.

ಇದಕ್ಕೂ ಕಾರಣವಿದೆ. ಎಲಿಮಿನೇಷನ್​ಗೆ ನಾಮಿನೇಟ್​ ಆಗಬೇಕು ಎಂದರೆ ಎರಡಕ್ಕಿಂತ ಹೆಚ್ಚು ಜನರು ಅವರ ಹೆಸರನ್ನು ತೆಗೆದುಕೊಳ್ಳಬೇಕು. ರಘು ಹೆಸರನ್ನು ಎತ್ತಿಕೊಂದಿದ್ದು ಶುಭಾ ಮಾತ್ರ. ಹೀಗಾಗಿ, ರಘು ಹೆಸರು ನಾಮಿನೇಟ್​ ಲಿಸ್ಟ್​ಗೆ ಬಂದಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ