AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ರಘುಗೆ ಒಂದು ನ್ಯಾಯ, ಉಳಿದವರಿಗೊಂದು ನ್ಯಾಯ? ನಿಧಿ ತಲೆಯಲ್ಲಿ ಬಂತು ಡೌಟ್​

ಅರವಿಂದ್ ಕೆ.ಪಿ ಕೂಡ ಈ ವಾರ ನಾಮಿನೇಷನ್​ ಆಗಿದ್ದಾರೆ. ಅವರು, ಸ್ಟ್ರಾಂಗ್​ ಸ್ಪರ್ಧಿ ಎನ್ನುವ ಕಾರಣ ನೀಡಿದರು. ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಮೇಲೂ ನಾಮಿನೇಟ್​ ತೂಗುಗತ್ತಿ ಇದೆ.

ಬಿಗ್​ ಬಾಸ್​ನಿಂದ ರಘುಗೆ ಒಂದು ನ್ಯಾಯ, ಉಳಿದವರಿಗೊಂದು ನ್ಯಾಯ? ನಿಧಿ ತಲೆಯಲ್ಲಿ ಬಂತು ಡೌಟ್​
ರಘು ಗೌಡ-ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Apr 05, 2021 | 10:32 PM

Share

ಬಿಗ್​ ಬಾಸ್​ ಮನೆಯಲ್ಲಿ ಆರನೇ ವಾರದ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಒಟ್ಟು ಏಳು ಜನರ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ. ಈ ಬಾರಿಯ ನಾಮಿನೇಷನ್​ ವೇಳೆ ರಘು ಗೌಡ ಹೆಸರನ್ನು ನಿಧಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಇದನ್ನು ಬಿಗ್​ ಬಾಸ್​ ಸ್ವೀಕರಿಸಲೇ ಇಲ್ಲ. ಇದು ಏಕೆ ಎನ್ನುವ ಪ್ರಶ್ನೆಯನ್ನು ಕೂಡ ನಿಧಿ ಕೇಳಿದರು. ಆದರೆ, ಯಾರೂ ಇದಕ್ಕೆ ಉತ್ತರ ಕೊಟ್ಟಿಲ್ಲ. ಹಾಗಾದ್ರೆ ಹೀಗೆಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಬಾರಿ ನಾಮಿನೇಷನ್​ಗೆ ನಾಯಕ ಮಂಜು ಪಾವಗಡ, ನೇರವಾಗಿ ನಾಮಿನೇಟ್​ ಆದ ನಿಧಿ ಸುಬ್ಬಯ್ಯ ಹಾಗೂ ಈ ವಾರವಷ್ಟೇ ಬಂದ ಚಕ್ರವರ್ತಿ ಚಂದ್ರಚೂಡ ಅವರ ಹೆಸರನ್ನು ಎತ್ತಿಕೊಳ್ಳುವಂತಿರಲಿಲ್ಲ. ಹೀಗಾಗಿ, ಮನೆಯಲ್ಲಿ ಬಹುತೇಕರು ಶಮಂತ್​ ಬ್ರೋ ಗೌಡ ಅವರ ಹೆಸರನ್ನು ಆಯ್ಕೆ ಮಾಡಿಕೊಂಡರು. ಅವರು ತುಂಬಾನೇ ಸ್ಲೋ, ನಮ್ಮ ವೇಗಕ್ಕೆ ಅವರು ಹೊಂದಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಅರವಿಂದ್ ಕೆ.ಪಿ ಕೂಡ ಈ ವಾರ ನಾಮಿನೇಷನ್​ ಆಗಿದ್ದಾರೆ. ಅವರು, ಸ್ಟ್ರಾಂಗ್​ ಸ್ಪರ್ಧಿ ಎನ್ನುವ ಕಾರಣ ನೀಡಿದರು. ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಮೇಲೂ ಎಲಿಮಿನೇಷನ್​​ ತೂಗುಗತ್ತಿ ಇದೆ. ನಿಧಿ ಸುಬ್ಬಯ್ಯ ಅವರನ್ನು ಶಂಕರ್ ಅಶ್ವತ್ಥ್​ ನೇರವಾಗಿ ನಾಮಿನೇಟ್​ ಮಾಡಿದ್ದರು.

ಮನೆಯ ನಾಯಕ ಮಂಜುಗೆ ಒಬ್ಬರನ್ನು ನಾಮಿನೇಟ್​ ಮಾಡುವ ಅವಕಾಶ ನೀಡಲಾಗಿತ್ತು. ಈ ವೇಳೆ, ರಾಜೀವ್​ ಅವರನ್ನು ಮಂಜು ಡೇಂಜರ್​ ಜೋನ್​ಗೆ ತಳ್ಳಿದರು. ಇದೇ ವೇಳೆ ರಘು ಹೆಸರನ್ನು ಶುಭಾ ನಾಮಿನೇಟ್​ ಮಾಡಿದ್ದರು. ಆದರೆ, ಅವರ ಹೆಸರು ನಾಮಿನೇಟ್​ ಲಿಸ್ಟ್​ಗೆ ಬಂದೇ ಇಲ್ಲ.

ಇದಕ್ಕೂ ಕಾರಣವಿದೆ. ಎಲಿಮಿನೇಷನ್​ಗೆ ನಾಮಿನೇಟ್​ ಆಗಬೇಕು ಎಂದರೆ ಎರಡಕ್ಕಿಂತ ಹೆಚ್ಚು ಜನರು ಅವರ ಹೆಸರನ್ನು ತೆಗೆದುಕೊಳ್ಳಬೇಕು. ರಘು ಹೆಸರನ್ನು ಎತ್ತಿಕೊಂದಿದ್ದು ಶುಭಾ ಮಾತ್ರ. ಹೀಗಾಗಿ, ರಘು ಹೆಸರು ನಾಮಿನೇಟ್​ ಲಿಸ್ಟ್​ಗೆ ಬಂದಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಒಡೆದು ಆಳೋಕೆ ಸಿದ್ಧವಾಗಿದೆ ಪ್ಲ್ಯಾನ್​! ಸಂಬರಗಿ-ಚಂದ್ರಚೂಡ್​ ಕಿಂಗ್​ಪಿನ್​​

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?