AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ನಾವೇನು ಲೆಫ್ಟ್​ನಲ್ಲಿ ಧ್ವನಿ ಎತ್ತುತ್ತೀವೇನ್ರೀ?’ ಸಂಬರಗಿಗೆ ಸುದೀಪ್​ ನೇರ ಪ್ರಶ್ನೆ

Kichcha Sudeep: ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ ಆರಂಭದಲ್ಲಿಯೇ ಮನೆಯ ಬಹುತೇಕ ಸದಸ್ಯರಿಂದ ಪ್ರಶಾಂತ್​ ಸಂಬರಗಿ ವಿರೋಧ ಎದುರಿಸುತ್ತಿದ್ದಾರೆ. ಹೆಚ್ಚು ಜನರು ಅವರನ್ನು ನಾಮಿನೇಟ್​ ಮಾಡಿದ್ದಾರೆ.

Bigg Boss Kannada: ‘ನಾವೇನು ಲೆಫ್ಟ್​ನಲ್ಲಿ ಧ್ವನಿ ಎತ್ತುತ್ತೀವೇನ್ರೀ?’ ಸಂಬರಗಿಗೆ ಸುದೀಪ್​ ನೇರ ಪ್ರಶ್ನೆ
ಪ್ರಶಾಂತ್​ ಸಂಬರಗಿ, ಕಿಚ್ಚ ಸುದೀಪ್​
TV9 Web
| Updated By: ಮದನ್​ ಕುಮಾರ್​|

Updated on: Jun 24, 2021 | 12:29 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರದಿಂದಾಗಿ ಅರ್ಧಕ್ಕೆ ನಿಂತಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ರಿಯಾಲಿಟಿ ಶೋ ಮತ್ತೆ ಆರಂಭಗೊಂಡಿದೆ. ಹೊಸ ಉತ್ಸಾಹದೊಂದಿಗೆ ಸ್ಪರ್ಧಿಗಳೆಲ್ಲರೂ ದೊಡ್ಮೆನೆಗೆ ಎಂಟ್ರಿ ನೀಡಿದ್ದಾರೆ. ಬಹಳ ಅದ್ದೂರಿಯಾಗಿಯೇ ಎಲ್ಲ 12 ಜನರನ್ನು ಕಿಚ್ಚ ಸುದೀಪ್​ ಅವರು ವೇದಿಕೆ ಆಹ್ವಾನಿಸಿ ಮಾತನಾಡಿಸಿದ್ದಾರೆ. ಎಂದಿನಂತೆ ಕಾಲೆಳೆಯುತ್ತ, ತಮಾಷೆ ಮಾಡುತ್ತ ಇಡೀ ಕಾರ್ಯಕ್ರಮದ ರಂಗೇರಿಸಿದ್ದಾರೆ ಕಿಚ್ಚ. ಈ ವೇಳೆ ಸುದೀಪ್​ ಮತ್ತು ಪ್ರಶಾಂತ್​ ಸಂಬರಗಿ ನಡುವೆ ಕೆಲವು ಮಾತುಕಥೆ ಆಗಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಸ್ಪರ್ಧಿಗಳು ತಮ್ಮದೇ ಆದಂತಹ ಸ್ಟ್ರಾಟಜಿ ಬಳಸಿದ್ದರು. ಅದು ವರ್ಕೌಟ್ ಆಗುವುದಕ್ಕೂ ಮುನ್ನವೇ ಶೋ ಅರ್ಧಕ್ಕೆ ನಿಲ್ಲುವಂತಾಗಿತ್ತು. ಆ ಬಳಿಕ ಮನೆಯಿಂದ ಹೊರ ಹೋಗಿದ್ದ ಎಲ್ಲರೂ ತಮ್ಮ ತಮ್ಮ ಎಪಿಸೋಡ್​ಗಳನ್ನು ನೋಡಿಕೊಂಡು ಈಗ ಪುನಃ ಬಂದಿದ್ದಾರೆ. ಎಲ್ಲರಿಗೂ ಅವರವರ ಪ್ಲಸ್​ ಮತ್ತು ಮೈನಸ್​ಗಳು ಚೆನ್ನಾಗಿ ಅರ್ಥ ಆಗಿವೆ. ಅದನ್ನೆಲ್ಲ ತಿದ್ದಿಕೊಂಡು ಎರಡನೇ ಇನ್ನಿಂಗ್ಸ್​ನಲ್ಲಿ ಆಟ ಶುರು ಮಾಡಿದ್ದಾರೆ.

ತಾವು ಮಾಡಿಕೊಳ್ಳಬೇಕು ಎಂದುಕೊಂಡಿರುವ ಬದಲಾವಣೆಗಳ ಬಗ್ಗೆ ಪ್ರಶಾಂತ್​ ಸಂಬರಗಿ ಅವರು ಹೇಳಿಕೊಂಡರು. ‘ಎಲ್ಲದಕ್ಕೂ ವಾಯ್ಸ್​ ಹೊರತೆಗೆಯಬೇಕು ಅಂತೇನಿಲ್ಲ. ಆ ವಾಯ್ಸ್​ಗೆ ಬೆಲೆ ಇದ್ದರೆ ಮಾತ್ರ ಮಾತನಾಡಬೇಕು. ಸುಮ್ಮನೆ ವಾಯ್ಸ್​ ತೆಗೆಯುವುದು ಬೇಡ ಎಂಬ ಲೆಕ್ಕಾಚಾರದಲ್ಲಿ ಬಂದಿದ್ದೇನೆ’ ಎಂದು ಸಂಬರಗಿ ಹೇಳಿದರು. ‘ಇದು ಅದ್ಭುತ ಪಾಯಿಂಟ್​. ಹೊರಗಡೆಯೂ ಇದನ್ನೇ ಅಳವಡಿಸಿಕೊಳ್ಳುತ್ತೀರಾ?’ ಎಂದು ಸುದೀಪ್​ ಮರುಪ್ರಶ್ನೆ ಹಾಕಿದರು.

‘ಖಂಡಿತವಾಗಿ ಹೊರಗಡೆಯೂ ಅಳವಡಿಸಿಕೊಳ್ಳುತ್ತೇನೆ’ ಎಂದು ಪ್ರಶಾಂತ್​ ಸಂಬರಗಿ ಉತ್ತರಿಸಿದರು. ‘ಇದನ್ನು ದಯವಿಟ್ಟು ಎಲ್ಲ ಸುದ್ದಿ ವಾಹಿನಿಯವರು ನೋಟ್​ ಮಾಡಿಕೊಳ್ಳಿ. ಸಂಬರಗಿ ಹೇಳಿದ್ದೇನೆಂದರೆ, ಧ್ವನಿ ಇದೆ ಅಂತ ಎತ್ತುವುದಲ್ಲ. ಎಲ್ಲಿ ಬೆಲೆ ಇದೆಯೋ ಅಲ್ಲಿ ಮಾತ್ರ ಎತ್ತಬೇಕು ಅಂತ. ಅಪ್ಪಿತಪ್ಪಿ ಏನಾದರೂ ಇವರು ನಿಮಗೆ ಸುಮ್ಮನೆ ಮಾತನಾಡಲು ಸಿಕ್ಕಿದರೆ, ದಯವಿಟ್ಟು ನಮ್​ ಕಡೆಯಿಂದ (ಕ್ಲಾಸ್​ತೆಗೆದುಕೊಳ್ಳಿ)’ ಎಂದು ಸುದೀಪ್​ ಲುಕ್​ ಕೊಟ್ಟರು. ‘ನನ್ನ ಧ್ವನಿ ಯಾವಾಗಲೂ ರೈಟ್​ ಆಗಿ ಎತ್ತಿದ್ದೇನೆ ಸರ್​’ ಎಂದು ಸಂಬರಗಿ ಸಮಜಾಯಿಷಿ ನೀಡಲು ಮುಂದಾದರು. ‘ನಾವೇನು ಲೆಫ್ಟ್​ನಲ್ಲಿ ಧ್ವನಿ ಎತ್ತುತ್ತೀವೇನ್ರೀ?’ ಎಂದು ಕಿಚ್ಚ ಸುದೀಪ್​ ಕೌಂಟರ್ ನೀಡಿದರು.

ಸದ್ಯ ಎರಡನೇ ಇನ್ನಿಂಗ್ಸ್​ ಆರಂಭದಲ್ಲಿಯೇ ಮನೆಯ ಬಹುತೇಕ ಸದಸ್ಯರಿಂದ ಪ್ರಶಾಂತ್​ ಸಂಬರಗಿ ವಿರೋಧ ಎದುರಿಸುತ್ತಿದ್ದಾರೆ. ಹೆಚ್ಚು ಜನರು ಅವರನ್ನು ನಾಮಿನೇಟ್​ ಮಾಡಿದ್ದಾರೆ. 73ನೇ ದಿನದಿಂದ ಆಟ ಮುಂದುವರಿದಿದೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ