ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ.

ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​
ಪ್ರಶಾಂತ್​ ಸಂಬರಗಿ-ಶುಭಾ ಪೂಂಜಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 25, 2021 | 4:04 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಪ್ರಶಾಂತ್​ ಸಂಬರಗಿ ಅವರಿಂದ ಆಗಾಗ ತಕರಾರು ನಡೆಯುತ್ತಲೇ ಇರುತ್ತವೆ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಕಿರಿಕ್​ ಮಾಡಿಕೊಂಡಿದ್ದಾರೆ. ಒಮ್ಮೆ ಬಂದು ಬೆಂಬಲ ನೀಡುವ ಅವರು ಮರುದಿನವೇ ಉಲ್ಟಾ ಹೊಡೆಯುತ್ತಾರೆ. ಇನ್ನು, ಅವರ ಸುಳ್ಳು ಹೇಳುವ ಸ್ವಭಾವವಂತೂ ಹೆಚ್ಚು ಟೀಕೆಗೆ ಒಳಗಾಗುತ್ತದೆ. ಪ್ರತಿ ವಾರ ಅವರು ಒಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ಈಗ ಶುಭಾ ಪೂಂಜಾ ಮೇಲೆ ಪ್ರಶಾಂತ್​ ಸಂಬರಗಿ ಕಣ್ಣಿಟ್ಟಿದ್ದಾರೆ.

ಏ.24ರ ಸಂಚಿಕೆಯಲ್ಲಿ ಪ್ರಶಾಂತ್​ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಮಾತನಾಡುತ್ತಿದ್ದರು. ಆಗ ಅವರಿಬ್ಬರ ನಡುವೆ ಶುಭಾ ಪೂಂಜಾ ಬಗ್ಗೆ ವಿಷಯ ಪ್ರಸ್ತಾಪ ಆಗಿದೆ. ‘ಇಷ್ಟು ವಾರಗಳ ಕಾಲ ಶುಭಾ ಪೂಂಜಾ ಅವರನ್ನು ನಾವು ಯಾಕೆ ಕಳಪೆ ಎಂದು ಪರಿಗಣಿಸಿಲ್ಲ? ಈ ಬಗ್ಗೆ ನಾವು ಆಲೋಚನೆಯನ್ನೇ ಮಾಡಿಲ್ಲವಲ್ಲ’ ಎಂದು ಪ್ರಶಾಂತ್​ ಸಂಬರಗಿ ಪ್ರಶ್ನೆ ಎತ್ತಿದ್ದಾರೆ.

‘ಶುಭಾ ಪೂಂಜಾ ಏನು ಕೊಡುಗೆ ಕೊಟ್ಟಿದ್ದಾಳೆ? ಕೆಲಸ ಕದಿತಾಳೆ. ಏನೂ ಕೆಲಸ ಮಾಡಲ್ಲ. ಅಡುಗೆ ಮಾಡಲ್ಲ, ಟೀ ಮಾಡಿಕೊಡಲ್ಲ. ಆದರೂ ಕೂಡ ನಾವು ಅವಳನ್ನು ಕಳಪೆಗೆ ಯಾಕೆ ಪರಿಗಣಿಸಿಲ್ಲ. ಅವಳ ಹೆಸರನ್ನು ಯಾರೂ ಹೇಳುವುದಿಲ್ಲ’ ಎಂದು ಪ್ರಶಾಂತ್​ ಸಂಬರಗಿ ಅವರು ತಲೆ ಕೆರೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿ ಅವರು ಕಳಪೆಗೆ ಶುಭಾ ಪೂಂಜಾ ಹೆಸರನ್ನೇ ಸೂಚಿಸುವ ಸಾಧ್ಯತೆ ಹೆಚ್ಚಿದೆ.

‘ಇರುವ ವಿರೋಧಿಗಳು ನಾನು ನೀನು ಮಾತ್ರ. ಉಳಿದವರೆಲ್ಲ ಟೆಕ್ನಿಕ್​ ಮಾಡಿಕೊಂಡು ಹೋಗುತ್ತಿದ್ದಾರೆ. ಯಾರ ಕೈಯಲ್ಲೂ ಏನೂ ಮಾಡೋಕೆ ಆಗಲ್ಲ. ಇರುವಷ್ಟು ದಿನ ಒಳ್ಳೆಯತನದ ನಾಟಕೀಯ ಮುಖವಾಡ ಹಾಕಿಕೊಂಡು ಇದಾರೆ. ಎಲ್ಲರ ಮನಸ್ಸು ಹೊಲಸೆದ್ದು ಕರಪ್ಟ್​ ಆಗಿದೆ’ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ. ಎಲ್ಲರೂ ತಮ್ಮದೇ ತಂತ್ರಗಾರಿಕೆ ಮೂಲಕ ದೊಡ್ಮನೆಯಲ್ಲಿ ಉಳಿದುಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

(Bigg Boss Kannada: Prashanth Sambargi says Shubha Poonja is worst performer in BBK8)

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ