AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ.

ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​
ಪ್ರಶಾಂತ್​ ಸಂಬರಗಿ-ಶುಭಾ ಪೂಂಜಾ
ಮದನ್​ ಕುಮಾರ್​
| Edited By: |

Updated on: Apr 25, 2021 | 4:04 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಪ್ರಶಾಂತ್​ ಸಂಬರಗಿ ಅವರಿಂದ ಆಗಾಗ ತಕರಾರು ನಡೆಯುತ್ತಲೇ ಇರುತ್ತವೆ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಕಿರಿಕ್​ ಮಾಡಿಕೊಂಡಿದ್ದಾರೆ. ಒಮ್ಮೆ ಬಂದು ಬೆಂಬಲ ನೀಡುವ ಅವರು ಮರುದಿನವೇ ಉಲ್ಟಾ ಹೊಡೆಯುತ್ತಾರೆ. ಇನ್ನು, ಅವರ ಸುಳ್ಳು ಹೇಳುವ ಸ್ವಭಾವವಂತೂ ಹೆಚ್ಚು ಟೀಕೆಗೆ ಒಳಗಾಗುತ್ತದೆ. ಪ್ರತಿ ವಾರ ಅವರು ಒಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ಈಗ ಶುಭಾ ಪೂಂಜಾ ಮೇಲೆ ಪ್ರಶಾಂತ್​ ಸಂಬರಗಿ ಕಣ್ಣಿಟ್ಟಿದ್ದಾರೆ.

ಏ.24ರ ಸಂಚಿಕೆಯಲ್ಲಿ ಪ್ರಶಾಂತ್​ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಮಾತನಾಡುತ್ತಿದ್ದರು. ಆಗ ಅವರಿಬ್ಬರ ನಡುವೆ ಶುಭಾ ಪೂಂಜಾ ಬಗ್ಗೆ ವಿಷಯ ಪ್ರಸ್ತಾಪ ಆಗಿದೆ. ‘ಇಷ್ಟು ವಾರಗಳ ಕಾಲ ಶುಭಾ ಪೂಂಜಾ ಅವರನ್ನು ನಾವು ಯಾಕೆ ಕಳಪೆ ಎಂದು ಪರಿಗಣಿಸಿಲ್ಲ? ಈ ಬಗ್ಗೆ ನಾವು ಆಲೋಚನೆಯನ್ನೇ ಮಾಡಿಲ್ಲವಲ್ಲ’ ಎಂದು ಪ್ರಶಾಂತ್​ ಸಂಬರಗಿ ಪ್ರಶ್ನೆ ಎತ್ತಿದ್ದಾರೆ.

‘ಶುಭಾ ಪೂಂಜಾ ಏನು ಕೊಡುಗೆ ಕೊಟ್ಟಿದ್ದಾಳೆ? ಕೆಲಸ ಕದಿತಾಳೆ. ಏನೂ ಕೆಲಸ ಮಾಡಲ್ಲ. ಅಡುಗೆ ಮಾಡಲ್ಲ, ಟೀ ಮಾಡಿಕೊಡಲ್ಲ. ಆದರೂ ಕೂಡ ನಾವು ಅವಳನ್ನು ಕಳಪೆಗೆ ಯಾಕೆ ಪರಿಗಣಿಸಿಲ್ಲ. ಅವಳ ಹೆಸರನ್ನು ಯಾರೂ ಹೇಳುವುದಿಲ್ಲ’ ಎಂದು ಪ್ರಶಾಂತ್​ ಸಂಬರಗಿ ಅವರು ತಲೆ ಕೆರೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿ ಅವರು ಕಳಪೆಗೆ ಶುಭಾ ಪೂಂಜಾ ಹೆಸರನ್ನೇ ಸೂಚಿಸುವ ಸಾಧ್ಯತೆ ಹೆಚ್ಚಿದೆ.

‘ಇರುವ ವಿರೋಧಿಗಳು ನಾನು ನೀನು ಮಾತ್ರ. ಉಳಿದವರೆಲ್ಲ ಟೆಕ್ನಿಕ್​ ಮಾಡಿಕೊಂಡು ಹೋಗುತ್ತಿದ್ದಾರೆ. ಯಾರ ಕೈಯಲ್ಲೂ ಏನೂ ಮಾಡೋಕೆ ಆಗಲ್ಲ. ಇರುವಷ್ಟು ದಿನ ಒಳ್ಳೆಯತನದ ನಾಟಕೀಯ ಮುಖವಾಡ ಹಾಕಿಕೊಂಡು ಇದಾರೆ. ಎಲ್ಲರ ಮನಸ್ಸು ಹೊಲಸೆದ್ದು ಕರಪ್ಟ್​ ಆಗಿದೆ’ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ. ಎಲ್ಲರೂ ತಮ್ಮದೇ ತಂತ್ರಗಾರಿಕೆ ಮೂಲಕ ದೊಡ್ಮನೆಯಲ್ಲಿ ಉಳಿದುಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

(Bigg Boss Kannada: Prashanth Sambargi says Shubha Poonja is worst performer in BBK8)

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್