AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ.

ಶುಭಾ ಪೂಂಜಾ ಮೇಲೆ ಕಣ್ಣಿಟ್ಟ ಪ್ರಶಾಂತ್​ ಸಂಬರಗಿ; ವೀಕೆಂಡ್​ನಲ್ಲಿ ಕಾದಿದೆ ಟ್ವಿಸ್ಟ್​
ಪ್ರಶಾಂತ್​ ಸಂಬರಗಿ-ಶುಭಾ ಪೂಂಜಾ
ಮದನ್​ ಕುಮಾರ್​
| Edited By: |

Updated on: Apr 25, 2021 | 4:04 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಪ್ರಶಾಂತ್​ ಸಂಬರಗಿ ಅವರಿಂದ ಆಗಾಗ ತಕರಾರು ನಡೆಯುತ್ತಲೇ ಇರುತ್ತವೆ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಕಿರಿಕ್​ ಮಾಡಿಕೊಂಡಿದ್ದಾರೆ. ಒಮ್ಮೆ ಬಂದು ಬೆಂಬಲ ನೀಡುವ ಅವರು ಮರುದಿನವೇ ಉಲ್ಟಾ ಹೊಡೆಯುತ್ತಾರೆ. ಇನ್ನು, ಅವರ ಸುಳ್ಳು ಹೇಳುವ ಸ್ವಭಾವವಂತೂ ಹೆಚ್ಚು ಟೀಕೆಗೆ ಒಳಗಾಗುತ್ತದೆ. ಪ್ರತಿ ವಾರ ಅವರು ಒಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ಈಗ ಶುಭಾ ಪೂಂಜಾ ಮೇಲೆ ಪ್ರಶಾಂತ್​ ಸಂಬರಗಿ ಕಣ್ಣಿಟ್ಟಿದ್ದಾರೆ.

ಏ.24ರ ಸಂಚಿಕೆಯಲ್ಲಿ ಪ್ರಶಾಂತ್​ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್​ ಅವರು ಮಾತನಾಡುತ್ತಿದ್ದರು. ಆಗ ಅವರಿಬ್ಬರ ನಡುವೆ ಶುಭಾ ಪೂಂಜಾ ಬಗ್ಗೆ ವಿಷಯ ಪ್ರಸ್ತಾಪ ಆಗಿದೆ. ‘ಇಷ್ಟು ವಾರಗಳ ಕಾಲ ಶುಭಾ ಪೂಂಜಾ ಅವರನ್ನು ನಾವು ಯಾಕೆ ಕಳಪೆ ಎಂದು ಪರಿಗಣಿಸಿಲ್ಲ? ಈ ಬಗ್ಗೆ ನಾವು ಆಲೋಚನೆಯನ್ನೇ ಮಾಡಿಲ್ಲವಲ್ಲ’ ಎಂದು ಪ್ರಶಾಂತ್​ ಸಂಬರಗಿ ಪ್ರಶ್ನೆ ಎತ್ತಿದ್ದಾರೆ.

‘ಶುಭಾ ಪೂಂಜಾ ಏನು ಕೊಡುಗೆ ಕೊಟ್ಟಿದ್ದಾಳೆ? ಕೆಲಸ ಕದಿತಾಳೆ. ಏನೂ ಕೆಲಸ ಮಾಡಲ್ಲ. ಅಡುಗೆ ಮಾಡಲ್ಲ, ಟೀ ಮಾಡಿಕೊಡಲ್ಲ. ಆದರೂ ಕೂಡ ನಾವು ಅವಳನ್ನು ಕಳಪೆಗೆ ಯಾಕೆ ಪರಿಗಣಿಸಿಲ್ಲ. ಅವಳ ಹೆಸರನ್ನು ಯಾರೂ ಹೇಳುವುದಿಲ್ಲ’ ಎಂದು ಪ್ರಶಾಂತ್​ ಸಂಬರಗಿ ಅವರು ತಲೆ ಕೆರೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿ ಅವರು ಕಳಪೆಗೆ ಶುಭಾ ಪೂಂಜಾ ಹೆಸರನ್ನೇ ಸೂಚಿಸುವ ಸಾಧ್ಯತೆ ಹೆಚ್ಚಿದೆ.

‘ಇರುವ ವಿರೋಧಿಗಳು ನಾನು ನೀನು ಮಾತ್ರ. ಉಳಿದವರೆಲ್ಲ ಟೆಕ್ನಿಕ್​ ಮಾಡಿಕೊಂಡು ಹೋಗುತ್ತಿದ್ದಾರೆ. ಯಾರ ಕೈಯಲ್ಲೂ ಏನೂ ಮಾಡೋಕೆ ಆಗಲ್ಲ. ಇರುವಷ್ಟು ದಿನ ಒಳ್ಳೆಯತನದ ನಾಟಕೀಯ ಮುಖವಾಡ ಹಾಕಿಕೊಂಡು ಇದಾರೆ. ಎಲ್ಲರ ಮನಸ್ಸು ಹೊಲಸೆದ್ದು ಕರಪ್ಟ್​ ಆಗಿದೆ’ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ.

ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಎಂಟ ವಾರ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಆಟದ ವೈಖರಿ ಬದಲಾಗುತ್ತಿದೆ. ಸ್ಪರ್ಧಿಗಳ ನಡುವೆ ಪೈಪೋಟಿ ತೀವ್ರವಾಗುತ್ತಿದೆ. ಎಲ್ಲರೂ ತಮ್ಮದೇ ತಂತ್ರಗಾರಿಕೆ ಮೂಲಕ ದೊಡ್ಮನೆಯಲ್ಲಿ ಉಳಿದುಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

(Bigg Boss Kannada: Prashanth Sambargi says Shubha Poonja is worst performer in BBK8)

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?