AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್​ ಆದ ಮರುದಿನವೇ ಚಕ್ರವರ್ತಿಗೆ ದ್ರೋಹ ಬಗೆದ ರಘು; ಮಾಡಿದ ಸಹಾಯ ಇಷ್ಟು ಬೇಗ ಮರೆತೋಯ್ತಾ?

ಕ್ಯಾಪ್ಟನ್​ ಆದ ನಂತರ ರಘು ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಘನಘೋರ ಜಗಳವೊಂದು ನಡೆದಿದೆ. ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ.

ಕ್ಯಾಪ್ಟನ್​ ಆದ ಮರುದಿನವೇ ಚಕ್ರವರ್ತಿಗೆ ದ್ರೋಹ ಬಗೆದ ರಘು; ಮಾಡಿದ ಸಹಾಯ ಇಷ್ಟು ಬೇಗ ಮರೆತೋಯ್ತಾ?
ರಘು ಗೌಡ-ಚಕ್ರವರ್ತಿ ಚಂದ್ರಚೂಡ್
ರಾಜೇಶ್ ದುಗ್ಗುಮನೆ
|

Updated on: Apr 26, 2021 | 7:17 PM

Share

ಬಿಗ್​ ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳು ಒಬ್ಬರಿಗೊಬ್ಬರು ಆಟ್ಯಾಚ್​ ಆಗಿದ್ದಂತೆ ತೋರಿಸಿಕೊಳ್ಳುತ್ತಾರೆ. ಆದರೆ, ಕಷ್ಟದ ಸಮಯ ಬಂದರೆ ಹಿಂದುಮುಂದು ನೋಡದೆ ನಂಬಿದವರನ್ನು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಈ ರೀತಿಯ ಘಟನೆಗಳು ಬಿಗ್​ ಬಾಸ್​ ಮನೆಯಲ್ಲಿ ಅನೇಕ ಬಾರಿ ನಡೆದಿವೆ. ಈಗ ಇಂತಹುದೇ ಘಟನೆ ಮತ್ತೆ ಮರುಕಳಿಸಿದೆ. ಕ್ಯಾಪ್ಟನ್​ ಆದ ಬೆನ್ನಲ್ಲೇ ರಘು ಗೌಡ ದ್ರೋಹ ಬಗೆದ ಆರೋಪ ಕೇಳಿ ಬಂದಿದೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಎಂಟು ವಾರ ಪೂರೈಸಿ 9ನೇ ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ರಘು ಗೌಡ ಕ್ಯಾಪ್ಟನ್​. ಅವರ ನೇತೃತ್ವದಲ್ಲಿ ಮನೆ ಸಾಗಲಿದೆ. ಅವರು ಕ್ಯಾಪ್ಟನ್​ ಆಗೋಕೆ ಪ್ರಶಾಂತ್​ ಸಂಬರಗಿ, ಅರವಿಂದ್​, ಚಕ್ರವರ್ತಿ ಚಂದ್ರಚೂಡ್​ ಕೂಡ ಕಾರಣರು.

ಕ್ಯಾಪ್ಟನ್ಸಿ ಟಾಸ್ಕ್​​ ವೇಳೆ ಮನೆಯ ಅನೇಕ ಸದಸ್ಯರು ರಘುಗೆ ಸಹಾಯ ಮಾಡಿದ್ದರು. ಟಾಸ್ಕ್​ ಮುಗಿದು ಕ್ಯಾಪ್ಟನ್​ ಆದ ನಂತರ ರಘು ಬಗ್ಗೆ ಮಾತನಾಡಿದ್ದ ಪ್ರಶಾಂತ್​ ಸಂಬರಗಿ, ಆತ ಕೃತಜ್ಞನಾಗಿರುತ್ತಾನೋ ಅಥವಾ ಕೃತಘ್ನನಾಗುತ್ತಾನೋ ಎನ್ನುವುದನ್ನು ನೋಡಬೇಕು ಎಂದಿದ್ದರು. ರಘು ಅವರನ್ನು ತಮ್ಮತ್ತ ಸೆಳೆದುಕೊಳ್ಳಬೇಕು ಎನ್ನುವ ಕಾರಣಕ್ಕೆ ಪ್ರಶಾಂತ್​ ಹಾಗೂ ಚಕ್ರವರ್ತಿ ಸಹಾಯ ಮಾಡಿದ್ದರು ಎಂಬುದು ಸ್ಪಷ್ಟವಾಗಿದೆ.

ಕ್ಯಾಪ್ಟನ್​ ಆದ ನಂತರ ರಘು ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಘನಘೋರ ಜಗಳವೊಂದು ನಡೆದಿದೆ. ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ, ನನಗೆ ಕ್ಯಾಪ್ಟನ್​ ಬೆಳಗ್ಗೆ ಸಕ್ಕರೆ ಕಡಿಮೆ ಹಾಕ್ಕೊಳ್ಳಿ ಎಂದರು. ನನಗೆ ಅವಮಾನ ಆಯ್ತು ಎಂದಿದ್ದಾರೆ ಚಕ್ರವರ್ತಿ. ಆಗ ಉತ್ತರಿಸಿದ ರಘು, ನೀವು ಅನಾವಶ್ಯಕ ಜಗಳ ಮಾಡ್ತೀರಾ. ಕೆಲವೊಂದು ವಿಚಾರಗಳನ್ನು ಜಗಳ ಮಾಡಬೇಕು ಎನ್ನುವ ಕಾರಣಕ್ಕೆ ಎತ್ತಿ ಎತ್ತಿ ಹೇಳ್ತೀರಾ ಎಂದರು.

ದಯವಿಟ್ಟು ನನ್ನನ್ನು ಟಾರ್ಗೆಟ್ ಮಾಡಬೇಡಿ ಎಂದು ಚಕ್ರವರ್ತಿ ಮನವಿ ಮಾಡಿಕೊಂಡರು. ಇದಕ್ಕೆ ಕಟುವಾಗೇ ಉತ್ತರಿಸಿದ ರಘು, ಟಾರ್ಗೆಟ್​ ಮಾಡ್ತೀರಾ ಎಂಬುದನ್ನು ಪದೇಪದೇ ಒತ್ತಿ ಹೇಳಿ ಅದನ್ನು ತಲೆಯಲ್ಲಿ ತುಂಬಿಸುತ್ತಿದ್ದೀರಾ ಎಂದರು. ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ರಘು ಕ್ಯಾಪ್ಟನ್​ ಆಗೋಕೆ ನಾನು ಕಾರಣ ಎಂಬುದು ಚಕ್ರವರ್ತಿ ತಲೆಯಲ್ಲಿದೆ. ಈಗ ಕ್ಯಾಪ್ಟನ್​ ಆದ ಎರಡೇ ದಿನಕ್ಕೆ ಜಗಳ ನಡೆದಿರುವುದು ಚಕ್ರವರ್ತಿಗೆ ಬೇಸರ ಮೂಡಿಸಿದೆ. ರಘು ನನಗೆ ದ್ರೋಹ ಬಗೆದಿದ್ದಾರೆ ಎನ್ನುವುದು ಅವರ ತಲೆಯಲ್ಲಿ ಮೂಡಿದ್ದರೂ ಮೂಡಿರಬಹುದು.

ಇದನ್ನೂ ಓದಿ: ವೈಷ್ಣವಿ ಜತೆ ರಘು ಗೌಡ ಕ್ಲೋಸ್​ ಆಗಿರೋ ಬಗ್ಗೆ ಅವರ ಪತ್ನಿ ವಿದ್ಯಾಶ್ರೀ ಹೇಳಿದ್ದೇನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?