‘ಬಿಗ್ ಬಾಸ್ ಕನ್ನಡ 11’ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ; ಏನೇಲ್ಲ ನಿರೀಕ್ಷಿಸಬಹುದು?

ಬಿಗ್ ಬಾಸ್ ಅತ್ಯಂತ ಜನಪ್ರಿಯ ಶೋಗಳಲ್ಲಿ ಒಂದು. ಈ ರಿಯಾಲಿಟಿ ಶೋ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರನ್ನು ರಂಜಿಸುತ್ತಿದೆ. ಕನ್ನಡದಲ್ಲೂ ಇದರ ಆಗಮಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ರಿಂದ ಈ ರಿಯಾಲಿಟಿ ಶೋ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿದೆ.

‘ಬಿಗ್ ಬಾಸ್ ಕನ್ನಡ 11’ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ; ಏನೇಲ್ಲ ನಿರೀಕ್ಷಿಸಬಹುದು?
ಬಿಗ್ ಬಾಸ್
Follow us
|

Updated on: Sep 23, 2024 | 11:13 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಸೆಪ್ಟೆಂಬರ್ 29ರಿಂದ ಈ ರಿಯಾಲಿಟಿ ಶೋ ಪ್ರಾರಂಭ ಆಗುತ್ತಿದೆ. ಈ ಬಾರಿಯ ಬಿಗ್ ಬಾಸ್​ನಿಂದ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಮಾಡುತ್ತಿದ್ದಾರೆ. 11ನೇ ಸೀಸನ್ ಎಂಬ ಕಾರಣಕ್ಕೆ ಈಗ ಹೊಸ ಲೆಕ್ಕ ಎಂದು ವಾಹಿನಿಯವರೇ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸುದ್ದಿಗೋಷ್ಠಿ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸುದ್ದಿಗೋಷ್ಠಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು (ಸೆಪ್ಟೆಂಬರ್ 23) ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕಿಚ್ಚ ಸುದೀಪ್ ಹಾಗೂ ಕಲರ್ಸ್​ ಕನ್ನಡ ವಾಹಿನಿಯವರು ಇದರಲ್ಲಿ ಭಾಗಿ ಆಗಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸಾಕಷ್ಟು ಪ್ರಶ್ನೆಗಳು ಎದುರಾಗಲಿದ್ದು, ಅದಕ್ಕೆ ವಾಹಿನಿಯವರು ಹಾಗೂ ಸುದೀಪ್ ಉತ್ತರ ನೀಡಲಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್​ನೊಂದಿಗೆ ಬಿಗ್ ಬಾಸ್ ಮೂಡಿ ಬರುತ್ತಿದೆ ಎನ್ನುವ ಸೂಚನೆಯನ್ನು ವಾಹಿನಿಯವರು ನೀಡಿದ್ದಾರೆ. ಇದು ಯಾವ ರೀತಿಯಲ್ಲಿ ಮೂಡಿಬರಲಿದೆ ಎನ್ನುವ ಬಗ್ಗೆ ವಾಹಿನಿ ಕಡೆಯಿಂದ ಉತ್ತರ ಸಿಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪ್ರಶ್ನೆಗಳು ಎದುರಾಗುವ ಸಾಧ್ಯತೆ ಇದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಅದರಲ್ಲಿ ಸ್ಪರ್ಧಿಗಳಾಗಿ ನಾನಾ ಕ್ಷೇತ್ರದವರು ಇರುತ್ತಾರೆ. ಈ ಬಾರಿ ಆ ಕ್ಷೇತ್ರಗಳು ಯಾವವು ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ವಾಹಿನಿಯವರು ಉತ್ತರ ನೀಡಲಿದ್ದಾರೆ. ಎಲ್ಲಕಿಂತ ಮುಖ್ಯವಾಗಿ ಸಾಮಾನ್ಯ ಜನರಿಗೆ ಅವಕಾಶ ಇದೆಯೇ ಎನ್ನುವ ಪ್ರಶ್ನೆ ಇದೆ. ಅದಕ್ಕೂ ವಾಹಿನಿಯವರು ಉತ್ತರಿಸಲಿದ್ದಾರೆ.

ಇದನ್ನೂ ಓದಿ:  ಇವರೇ ಈ ಬಾರಿಯ ‘ಬಿಗ್ ಬಾಸ್’ನ ಅತ್ಯಂತ ದುಬಾರಿ ಸ್ಪರ್ಧಿ; ಕೊಟ್ಟಿದ್ದು ಎಷ್ಟು ಹಣ?

ಪ್ರತಿ ಬಾರಿ 17 ಸ್ಪರ್ಧಿಗಳು ಇರುತ್ತಾರೆ. ಈ ಬಾರಿ ವಾಹಿನಿಯವರು ಎಷ್ಟು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ ಎಂಬ ವಿಚಾರ ರಿವೀಲ್ ಆಗಲಿದೆ. ಕಳೆದ ಬಾರಿ ಚಾರ್ಲಿ ಶ್ವಾನ ಬಿಗ್ ಬಾಸ್ ಮನೆಗೆ ಬರುತ್ತದೆ ಎಂದು ಹೇಳಲಾಗಿತ್ತು. ಈ ರೀತಿಯ ವಿಶೇಷ ಅತಿಥಿಗಳ ಘೋಷಣೆ ಆಗಲಿದೆಯೇ ಎನ್ನುವ ಕುತೂಹಲವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ