AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ 11’ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ; ಏನೇಲ್ಲ ನಿರೀಕ್ಷಿಸಬಹುದು?

ಬಿಗ್ ಬಾಸ್ ಅತ್ಯಂತ ಜನಪ್ರಿಯ ಶೋಗಳಲ್ಲಿ ಒಂದು. ಈ ರಿಯಾಲಿಟಿ ಶೋ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರನ್ನು ರಂಜಿಸುತ್ತಿದೆ. ಕನ್ನಡದಲ್ಲೂ ಇದರ ಆಗಮಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ರಿಂದ ಈ ರಿಯಾಲಿಟಿ ಶೋ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿದೆ.

‘ಬಿಗ್ ಬಾಸ್ ಕನ್ನಡ 11’ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ; ಏನೇಲ್ಲ ನಿರೀಕ್ಷಿಸಬಹುದು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 23, 2024 | 11:13 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಸೆಪ್ಟೆಂಬರ್ 29ರಿಂದ ಈ ರಿಯಾಲಿಟಿ ಶೋ ಪ್ರಾರಂಭ ಆಗುತ್ತಿದೆ. ಈ ಬಾರಿಯ ಬಿಗ್ ಬಾಸ್​ನಿಂದ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಮಾಡುತ್ತಿದ್ದಾರೆ. 11ನೇ ಸೀಸನ್ ಎಂಬ ಕಾರಣಕ್ಕೆ ಈಗ ಹೊಸ ಲೆಕ್ಕ ಎಂದು ವಾಹಿನಿಯವರೇ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸುದ್ದಿಗೋಷ್ಠಿ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸುದ್ದಿಗೋಷ್ಠಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು (ಸೆಪ್ಟೆಂಬರ್ 23) ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕಿಚ್ಚ ಸುದೀಪ್ ಹಾಗೂ ಕಲರ್ಸ್​ ಕನ್ನಡ ವಾಹಿನಿಯವರು ಇದರಲ್ಲಿ ಭಾಗಿ ಆಗಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸಾಕಷ್ಟು ಪ್ರಶ್ನೆಗಳು ಎದುರಾಗಲಿದ್ದು, ಅದಕ್ಕೆ ವಾಹಿನಿಯವರು ಹಾಗೂ ಸುದೀಪ್ ಉತ್ತರ ನೀಡಲಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್​ನೊಂದಿಗೆ ಬಿಗ್ ಬಾಸ್ ಮೂಡಿ ಬರುತ್ತಿದೆ ಎನ್ನುವ ಸೂಚನೆಯನ್ನು ವಾಹಿನಿಯವರು ನೀಡಿದ್ದಾರೆ. ಇದು ಯಾವ ರೀತಿಯಲ್ಲಿ ಮೂಡಿಬರಲಿದೆ ಎನ್ನುವ ಬಗ್ಗೆ ವಾಹಿನಿ ಕಡೆಯಿಂದ ಉತ್ತರ ಸಿಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪ್ರಶ್ನೆಗಳು ಎದುರಾಗುವ ಸಾಧ್ಯತೆ ಇದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಅದರಲ್ಲಿ ಸ್ಪರ್ಧಿಗಳಾಗಿ ನಾನಾ ಕ್ಷೇತ್ರದವರು ಇರುತ್ತಾರೆ. ಈ ಬಾರಿ ಆ ಕ್ಷೇತ್ರಗಳು ಯಾವವು ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ವಾಹಿನಿಯವರು ಉತ್ತರ ನೀಡಲಿದ್ದಾರೆ. ಎಲ್ಲಕಿಂತ ಮುಖ್ಯವಾಗಿ ಸಾಮಾನ್ಯ ಜನರಿಗೆ ಅವಕಾಶ ಇದೆಯೇ ಎನ್ನುವ ಪ್ರಶ್ನೆ ಇದೆ. ಅದಕ್ಕೂ ವಾಹಿನಿಯವರು ಉತ್ತರಿಸಲಿದ್ದಾರೆ.

ಇದನ್ನೂ ಓದಿ:  ಇವರೇ ಈ ಬಾರಿಯ ‘ಬಿಗ್ ಬಾಸ್’ನ ಅತ್ಯಂತ ದುಬಾರಿ ಸ್ಪರ್ಧಿ; ಕೊಟ್ಟಿದ್ದು ಎಷ್ಟು ಹಣ?

ಪ್ರತಿ ಬಾರಿ 17 ಸ್ಪರ್ಧಿಗಳು ಇರುತ್ತಾರೆ. ಈ ಬಾರಿ ವಾಹಿನಿಯವರು ಎಷ್ಟು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ ಎಂಬ ವಿಚಾರ ರಿವೀಲ್ ಆಗಲಿದೆ. ಕಳೆದ ಬಾರಿ ಚಾರ್ಲಿ ಶ್ವಾನ ಬಿಗ್ ಬಾಸ್ ಮನೆಗೆ ಬರುತ್ತದೆ ಎಂದು ಹೇಳಲಾಗಿತ್ತು. ಈ ರೀತಿಯ ವಿಶೇಷ ಅತಿಥಿಗಳ ಘೋಷಣೆ ಆಗಲಿದೆಯೇ ಎನ್ನುವ ಕುತೂಹಲವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ