AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಎಲ್ಲ ಊರುಗಳಲ್ಲಿ ಗಿಲ್ಲಿ ನಟ ಜೊತೆ ಫೋಟೋ ತೆಗೆಸಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬಿದ್ದರು. ಕಿಕ್ಕಿರಿದು ಸೇರಿದ್ದ ಗಿಲ್ಲಿ ನಟ ಅವರ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಸ್ವಗ್ರಾಮದಲ್ಲಿ ಹೆಚ್ಚಿನ ಜನರು ಜಮಾಯಿಸಿದ್ದರಿಂದ ಮನೆಗೆ ತೆರಳಲು ಸಾಧ್ಯವಾಗದೇ ಗಿಲ್ಲಿ ನಟ ವಾಪಸ್ ಬಂದಿದ್ದಾರೆ.

ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ
Gilli Nata, Savitha, Kullappa
ದಿಲೀಪ್​, ಚೌಡಹಳ್ಳಿ
| Edited By: |

Updated on: Jan 19, 2026 | 9:50 PM

Share

‘ಬಿಗ್ ಬಾಸ್ ಕನ್ನಡ’ ವಿಜೇತ (Bigg Boss Kannada 12 Winner) ಗಿಲ್ಲಿ ನಟ ಅವರ ಬಗ್ಗೆಯೇ ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದಿರುವ ಅವರು ಮಂಡ್ಯ, ಮದ್ದೂರು, ಮಳವಳ್ಳಿ ಮುಂತಾದೆಡೆ ಮೆರವಣಿಗೆಯಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಅವರನ್ನು ನೋಡಲು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಗಿಲ್ಲಿ ನಟನನ್ನು ನೋಡಲು ಬಂದಿದ್ದಾರೆ. ಗಿಲ್ಲಿ ನಟ (Gilli Nata) ಅವರು ಸ್ವಗ್ರಾಮವಾದ ದಡದಪುರಕ್ಕೆ ಹೋಗಿದ್ದಾರೆ. ಆದರೆ ಸ್ವಂತ ಮನೆಗೆ ಹೋಗಲು ಅವರಿಗೆ ಸಾಧ್ಯವಾಗಿಲ್ಲ! ಹಾಗಾಗಿ ಅವರು ಕೂಡಲೇ ವಾಪಸ್ ಬೆಂಗಳೂರಿನ ಕಡೆಗೆ ಪಯಣ ಬೆಳೆಸಿದ್ದಾರೆ.

ಇಂದು (ಜನವರಿ 19) ಸಂಜೆ ವೇಳೆಗೆ ಗಿಲ್ಲಿ ನಟ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಡದಪುರ ತಲುಪಿದರು. ಸ್ವಗ್ರಾಮಕ್ಕೆ ಗಿಲ್ಲಿ ನಟರಾಜ್ ಬರುತ್ತಿದ್ದಂತೆಯೇ ಗ್ರಾಮಸ್ಥರಿಂದ ಸಂಭ್ರಮ ಜೋರಾಯಿತು. ದಡದಪುರ ಗ್ರಾಮದಲ್ಲಿ ಟ್ರೋಫಿ ಜೊತೆ ಗಿಲ್ಲಿ ನಟ ಮೆರವಣಿಗೆ ಮಾಡಿದರು. ಬಸವೇಶ್ವರ ದೇಗುಲದವರೆಗೆ ಗಿಲ್ಲಿ ನಟನ ಮೆರವಣಿಗೆ ನಡೆಯಿತು. ಗ್ರಾಮಸ್ಥರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ತಮ್ಮೂರಿನ ಹುಡುಗನಿಗೆ ಮಹಿಳೆಯರು ಆರತಿ ಬೆಳಗಿದರು.

ಗಿಲ್ಲಿ ಮನೆ ಬಳಿ ನೂರಾರು ಅಭಿಮಾನಿಗಳು ನೆರೆದಿದ್ದರು. ಮಗನ ಆಗಮನಕ್ಕಾಗಿ ಮನೆ ಮುಂದೆ ಸಗಣಿ ಸಾರಿಸಿ, ರಂಗೋಲಿ ಹಾಕಲಾಗಿತ್ತು. ಕೈಯಲ್ಲಿ ಗಿಲ್ಲಿ ನಟನ ಟ್ಯಾಟೂ ಹಾಕಿಸಿಕೊಂಡು ಬಂದಿದ್ದ ಅಭಿಮಾನಿಗಳು ಕೂಡ ಅಲ್ಲಿ ಜಮಾಯಿಸಿದ್ದರು. ಸ್ವಗ್ರಾಮದ ಮನೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣದಿಂದ ಗಿಲ್ಲಿ ನಟ ಅವರು ಊರಿಗೆ ಬಂದರೂ ಮನೆಗೆ ಬಾರದೇ ವಾಪಸ್ ಬೆಂಗಳೂರಿಗೆ ತೆರಳುವಂತಾಯಿತು.

ಅದಕ್ಕೂ ಮುನ್ನ ಮಳವಳ್ಳಿಯ ಪ್ರಮುಖ ರಸ್ತೆಗಳಲ್ಲಿ ಗಿಲ್ಲಿಯ ಮೆರವಣಿಗೆ ನಡೆಯಿತು. ದಂಡಿನಮಾರಮ್ಮನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಹೊರಟಿತು. ಬಿಗ್​ಬಾಸ್ ರಿಯಾಲಿಟಿ ಶೋಗೆ ಹೋಗುವಾಗಲೂ ಗಿಲ್ಲಿ ನಟ ಅವರು ಇಲ್ಲಿ ಪೂಜೆ ಮಾಡಿಸಿದ್ದರು. ಆದ್ದರಿಂದ ಈಗ ಬಿಗ್​ಬಾಸ್ ಟ್ರೋಫಿ ಜೊತೆ ಬಂದು ದಂಡಿನಮಾರಮ್ಮನ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ

ಮದ್ದೂರು, ಕೆ.ಎಂ.ದೊಡ್ಡಿ ಸೇರಿ ಹಲವು ಊರುಗಳಲ್ಲಿ ತೆರೆದ ವಾಹನದಲ್ಲಿ ನೂರಾರು ಅಭಿಮಾನಿಗಳ ಜೊತೆ ಗಿಲ್ಲಿ ನಟ ಮೆರವಣಿಗೆಯಲ್ಲಿ ಪಾಲ್ಗೊಂಡರು. ದೇವಸ್ಥಾನದಿಂದ ದಡದಪುರದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಸಾಗಿತು. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಮೆರವಣಿಗೆ ವೇಳೆ ಗಿಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ