AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬರಗಿ ಎದುರು ಹಾಕ್ಕೊಂಡ ಮಂಜುಗೆ ಬಿಗ್​ಬಾಸ್​ ಮನೆಯಲ್ಲಿ ಇನ್ಮೇಲೆ ಕಷ್ಟಕಾಲ!

Bigg Boss Kannada : ಹೇಗಾದರೂ ಮಾಡಿ ಮಂಜು ಪಾವಗಡ ಅವರನ್ನು ಮನೆಗೆ ಕಳಿಸಬೇಕು ಎಂದು ಪ್ರಶಾಂತ್ ಸಂಬರಗಿ ಪ್ಲ್ಯಾನ್ ಮಾಡುತ್ತಾ ಬಂದಿದ್ದರು. ಅವರಿಗೆ ಚಕ್ರವರ್ತಿ ಚಂದ್ರಚೂಡ್ ಸಹ ಸಾಥ್ ನೀಡುತ್ತಿದ್ದಾರೆ. ಈಗ ಪ್ರಶಾಂತ್ ಸಂಬರಗಿ ಕ್ಯಾಪ್ಟನ್ ಆಗಿದ್ದಾರೆ.

ಸಂಬರಗಿ ಎದುರು ಹಾಕ್ಕೊಂಡ ಮಂಜುಗೆ ಬಿಗ್​ಬಾಸ್​ ಮನೆಯಲ್ಲಿ ಇನ್ಮೇಲೆ ಕಷ್ಟಕಾಲ!
ಮಂಜು ಪಾವಗಡ - ಪ್ರಶಾಂತ್​ ಸಂಬರಗಿ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Apr 09, 2021 | 3:47 PM

Share

ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಗಳ ನಡುವಿನ ಹಣಾಹಣಿ ಜೋರಾಗಿದೆ. ಪ್ರತಿದಿನವೂ ಮನೆಯ ಸದಸ್ಯರಿಗೆ ಬಿಗ್ ಬಾಸ್ ಹೊಸ ಹೊಸ ಟ್ವಿಸ್ಟ್ ನೀಡುತ್ತಿದ್ದಾರೆ. ಅದನ್ನೆಲ್ಲ ಎದುರಿಸಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದು ಎಲ್ಲಾ ಸ್ಪರ್ಧಿಗಳಿಗೆ ಸವಾಲಿನ ಕೆಲಸ ಆಗಿದೆ. ಅಷ್ಟೇ ಅಲ್ಲದೆ ಆಗಾಗ ಎದುರಾಗುವ ಕಿರಿಕ್​ಗಳನ್ನೂ ಬಗೆಹರಿಸಿಕೊಂಡು ಮುನ್ನುಗ್ಗಬೇಕಿದೆ. ಟಾಸ್ಕ್​​ಗಳಲ್ಲಿ ಮೇಲುಗೈ ಸಾಧಿಸುತ್ತ ಬಂದಿರುವ ಮಂಜುಗೆ ಈಗ ಒಂದು ಹೊಸ ಸಂಕಷ್ಟ ಎದುರಾಗಿದೆ.

ಮೊದಲ ವಾರದಿಂದಲೂ ಹೆಚ್ಚು ಗಮನ ಸೆಳೆದ ಸ್ಪರ್ಧಿ ಎಂದರೆ ಅದು ಮಂಜು ಪಾವಗಡ. ಅವರಿಗೆ ಸರಿಸಮನಾಗಿ ಪೈಪೋಟಿ ನೀಡಲು ಪ್ರಯತ್ನಿಸುತ್ತಿದ್ದಾರೆ ಪ್ರಶಾಂತ್ ಸಂಬರಗಿ. ಆದರೆ ಇಬ್ಬರ ಹಾದಿ ಬೇರೆ ಬೇರೆ. ಮಂಜು ಕಾಮಿಡಿ ಮೂಲಕ ಗುರುತಿಸಿಕೊಂಡರೆ, ಪ್ರಶಾಂತ್ ವಿವಾದದ ಮೂಲಕವೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಹಾಗಾಗಿ ಮಂಜು ಮತ್ತು ಪ್ರಶಾಂತ್ ನಡುವೆ ಆಗಾಗ ಕ್ಲ್ಯಾಶ್ ಆಗುತ್ತಲೇ ಇರುತ್ತದೆ.

ಹೇಗಾದರೂ ಮಾಡಿ ಮಂಜು ಪಾವಗಡ ಅವರನ್ನು ಮನೆಗೆ ಕಳಿಸಬೇಕು ಎಂದು ಪ್ರಶಾಂತ್ ಸಂಬರಗಿ ಪ್ಲ್ಯಾನ್ ಮಾಡುತ್ತಾ ಬಂದಿದ್ದರು. ಅವರಿಗೆ ಚಕ್ರವರ್ತಿ ಚಂದ್ರಚೂಡ್ ಸಹ ಸಾಥ್ ನೀಡುತ್ತಿದ್ದಾರೆ. ಈಗ ಪ್ರಶಾಂತ್ ಸಂಬರಗಿ ಕ್ಯಾಪ್ಟನ್ ಆಗಿದ್ದಾರೆ. ಹಾಗಾಗಿ ಅವರ ಕೈಯಲ್ಲಿ ಕೆಲವು ವಿಶೇಷ ಅಧಿಕಾರಗಳು ಇವೆ. ಒಂದುವೇಳೆ ಬಿಗ್ ಬಾಸ್ ಏನಾದರೂ ಅವಕಾಶ ನೀಡಿದರೆ ಮಂಜು ಅವರನ್ನು ಪ್ರಶಾಂತ್ ನೇರವಾಗಿ ನಾಮಿನೇಟ್ ಮಾಡಬಹುದು.

ಟಾಸ್ಕ್​ಗಳಲ್ಲೂ ಮಂಜುಗೆ ಕಷ್ಟ ನೀಡಬಹುದು. ಕ್ಯಾಪ್ಟನ್ ಯಾವ ಕೆಲಸ ವಹಿಸುತ್ತಾರೋ ಆ ಕೆಲಸವನ್ನು ಮನೆಯ ಸದಸ್ಯರು ಮಾಡಬೇಕು. ಮಂಜುಗೆ ಇಷ್ಟವಿಲ್ಲದ ಕೆಲಸವನ್ನೇ ಪ್ರಶಾಂತ್ ನೀಡಬಹುದು. ಹಾಗಾಗಿ ಈ ಎಲ್ಲ ಆಯಾಮಗಳಲ್ಲೂ ಮಂಜುಗೆ ಇನ್ಮುಂದೆ ಕಷ್ಟಕಾಲ ಶುರುವಾಗುವುದರಲ್ಲಿ ಅನುಮಾನವಿಲ್ಲ. ಈ ವಿಚಾರದಲ್ಲಿ ಪ್ರಶಾಂತ್​​ಗೆ ಸೂಕ್ತ ಸಲಹೆ ಕೊಡಲು ಚಕ್ರವರ್ತಿ ಚಂದ್ರಚೂಡ್ ಕೂಡ ಇದ್ದಾರೆ.

ಹಲವು ದಿನಗಳಿಂದ ಮಂಜು ವ್ಯಕ್ತಿತ್ವವನ್ನು ಅಧ್ಯಯನ ಮಾಡಿರುವ ಪ್ರಶಾಂತ್ ಮತ್ತು ಚಂದ್ರಚೂಡ್ ಈ ಬಾರ ತಮ್ಮ ಅಸಲಿ ವರಸೆ ತೋರಿಸುವ ನಿರೀಕ್ಷೆ ಇದೆ. ಅದರ ಮೊದಲ ಹಂತವಾಗಿ ಮಂಜುಗೆ ಪ್ರಶಾಂತ್ ಒಂದು ಸೂಚನೆ ನೀಡಿದ್ದಾರೆ. ಇಷ್ಟು ದಿನ ಸಲುಗೆಯಿಂದ ಪ್ರಶಾಂತ್​​ಗೆ ಮಂಜು ಮಾವ ಎನ್ನುತ್ತಿದ್ದರು. ಇನ್ಮುಂದೆ ಹಾಗೆ ಕರೆಯಬೇಡ ಎಂದು ಪ್ರಶಾಂತ್ ವಾರ್ನಿಂಗ್ ನೀಡಿದ್ದಾರೆ. ಮುಂದೆ ಏನೆಲ್ಲ ಕಾದಿದಿಯೋ ಗೊತ್ತಿಲ್ಲ.

ಇದನ್ನೂ ಓದಿ: ಮಂಜು ಬೇಡಿಕೆ ಈಡೇರಿಸಿದ ಬಿಗ್​ ಬಾಸ್​; ಒಂದೇ ದಿನ ಇಬ್ಬರು ಹೆಣ್ಮಕ್ಳು ವೈಲ್ಡ್​ ಕಾರ್ಡ್​ ಎಂಟ್ರಿ!

(Bigg Boss Kannada season 8: Clash continues between Manju Pavagada and Prashanth Sambargi in BBK8)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!