AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?

Bigg Boss Kannada Season 8: ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಹಾಗಾಗಿ, ಈ ಎಲ್ಲ ಅಂಶಗಳು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?
ದಿವ್ಯಾ ಉರುಡುಗ, ಅರವಿಂದ್​ ಕೆಪಿ
Follow us
ಮದನ್​ ಕುಮಾರ್​
|

Updated on: Jun 21, 2021 | 9:52 AM

ಸ್ಯಾಂಡಲ್​ವುಡ್​ ನಟಿ ದಿವ್ಯಾ ಉರುಡುಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ನಲ್ಲಿ ಭಾಗವಹಿಸಿದ ಬಳಿಕ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡರು. ಕೊರೊನಾ ವೈರಸ್​ ಕಾರಣದಿಂದಾಗಿ ಈ ಸೀಸನ್​ ತಾತ್ಕಾಲಿಕವಾಗಿ ಅರ್ಧಕ್ಕೆ ನಿಂತ ಸಂದರ್ಭದಲ್ಲಿ ದಿವ್ಯಾ ಅವರಿಗೆ ಅನಾರೋಗ್ಯ ಕಾಡಿತ್ತು. ಆಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಎರಡನೇ ಇನ್ನಿಂಗ್​ ಆರಂಭಿಸಲು ಕಲರ್ಸ್​ ಕನ್ನಡ ವಾಹಿನಿ ನಿರ್ಧರಿಸಿದ್ದು, ಅದರಲ್ಲಿ ದಿವ್ಯಾ ಉರುಡುಗ ಕೂಡ ಭಾಗವಹಿಸುತ್ತಿದ್ದಾರೆ. ಈ ನಡುವೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 5 ಲಕ್ಷ ಮಂದಿ ಫಾಲೋವರ್ಸ್​ ಆಗಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವುದು ಸೆಲೆಬ್ರಿಟಿಗಳಿಗೆ ತುಂಬ ಅನಿವಾರ್ಯ. ಆ ವಿಚಾರದಲ್ಲಿ ದಿವ್ಯಾಗೆ ಈಗ ಸಖತ್ ಖುಷಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 5 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ. ಅವರೆಲ್ಲರ ಪ್ರೀತಿಗೆ ಫಿದಾ ಆಗಿರುವ ದಿವ್ಯಾ, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

‘ನಾನು ಏನೇ ಮಾಡಬೇಕು ಎಂದುಕೊಂಡಾಗಲೂ ನನ್ನ ಹಿಂದಿರುವ ಕುಟುಂಬವನ್ನು ನೋಡುತ್ತೇನೆ. ಇಂದು ಅದ್ಭುತವಾದ ಅರ್ಧ ಮಿಲಿಯನ್​ ಹೃದಯಗಳು ನನ್ನ ಜೊತೆ ಇರುವುದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನನ್ನನ್ನು ಖುಷಿಯಾಗಿ ಇರಿಸುತ್ತೀರಿ. ಇನ್ಮುಂದೆ ಕೂಡ ನನ್ನ ಈ ಕುಟುಂಬಕ್ಕೆ ನಾನು ಹೊಸ ಸದಸ್ಯರನ್ನು ಸ್ವಾಗತಿಸುತ್ತೇನೆ’ ಎಂದು ಹೊಸ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ದಿವ್ಯಾ ಉರುಡುಗ ಧನ್ಯವಾದ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ 2.54 ಲಕ್ಷ, ನಿಧಿ ಸುಬ್ಬಯ್ಯ 2.87 ಲಕ್ಷ, ವೈಷ್ಣವಿ ಗೌಡ 8.25 ಲಕ್ಷ, ರಘು ಗೌಡ 3.27 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ. ಜೂ.23ರಿಂದ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ ಆರಂಭ ಆಗಲಿದೆ. ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಆ ಕಾರಣಕ್ಕಾಗಿ ಈ ಎಲ್ಲ ಅಂಶಗಳು ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಇದನ್ನೂ ಓದಿ:

ದಿವ್ಯಾ ಉರುಡುಗ ನೀಡಿದ ಉಂಗುರ ಮತ್ತೆ ಕಳೆದುಕೊಂಡು ಹುಡುಕಾಡಿದ ಅರವಿಂದ್​; ವಿಡಿಯೋ ವೈರಲ್

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ