ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?

Bigg Boss Kannada Season 8: ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಹಾಗಾಗಿ, ಈ ಎಲ್ಲ ಅಂಶಗಳು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?
ದಿವ್ಯಾ ಉರುಡುಗ, ಅರವಿಂದ್​ ಕೆಪಿ
Follow us
|

Updated on: Jun 21, 2021 | 9:52 AM

ಸ್ಯಾಂಡಲ್​ವುಡ್​ ನಟಿ ದಿವ್ಯಾ ಉರುಡುಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ನಲ್ಲಿ ಭಾಗವಹಿಸಿದ ಬಳಿಕ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡರು. ಕೊರೊನಾ ವೈರಸ್​ ಕಾರಣದಿಂದಾಗಿ ಈ ಸೀಸನ್​ ತಾತ್ಕಾಲಿಕವಾಗಿ ಅರ್ಧಕ್ಕೆ ನಿಂತ ಸಂದರ್ಭದಲ್ಲಿ ದಿವ್ಯಾ ಅವರಿಗೆ ಅನಾರೋಗ್ಯ ಕಾಡಿತ್ತು. ಆಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಎರಡನೇ ಇನ್ನಿಂಗ್​ ಆರಂಭಿಸಲು ಕಲರ್ಸ್​ ಕನ್ನಡ ವಾಹಿನಿ ನಿರ್ಧರಿಸಿದ್ದು, ಅದರಲ್ಲಿ ದಿವ್ಯಾ ಉರುಡುಗ ಕೂಡ ಭಾಗವಹಿಸುತ್ತಿದ್ದಾರೆ. ಈ ನಡುವೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 5 ಲಕ್ಷ ಮಂದಿ ಫಾಲೋವರ್ಸ್​ ಆಗಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವುದು ಸೆಲೆಬ್ರಿಟಿಗಳಿಗೆ ತುಂಬ ಅನಿವಾರ್ಯ. ಆ ವಿಚಾರದಲ್ಲಿ ದಿವ್ಯಾಗೆ ಈಗ ಸಖತ್ ಖುಷಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 5 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ. ಅವರೆಲ್ಲರ ಪ್ರೀತಿಗೆ ಫಿದಾ ಆಗಿರುವ ದಿವ್ಯಾ, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

‘ನಾನು ಏನೇ ಮಾಡಬೇಕು ಎಂದುಕೊಂಡಾಗಲೂ ನನ್ನ ಹಿಂದಿರುವ ಕುಟುಂಬವನ್ನು ನೋಡುತ್ತೇನೆ. ಇಂದು ಅದ್ಭುತವಾದ ಅರ್ಧ ಮಿಲಿಯನ್​ ಹೃದಯಗಳು ನನ್ನ ಜೊತೆ ಇರುವುದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನನ್ನನ್ನು ಖುಷಿಯಾಗಿ ಇರಿಸುತ್ತೀರಿ. ಇನ್ಮುಂದೆ ಕೂಡ ನನ್ನ ಈ ಕುಟುಂಬಕ್ಕೆ ನಾನು ಹೊಸ ಸದಸ್ಯರನ್ನು ಸ್ವಾಗತಿಸುತ್ತೇನೆ’ ಎಂದು ಹೊಸ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ದಿವ್ಯಾ ಉರುಡುಗ ಧನ್ಯವಾದ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ 2.54 ಲಕ್ಷ, ನಿಧಿ ಸುಬ್ಬಯ್ಯ 2.87 ಲಕ್ಷ, ವೈಷ್ಣವಿ ಗೌಡ 8.25 ಲಕ್ಷ, ರಘು ಗೌಡ 3.27 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ. ಜೂ.23ರಿಂದ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ ಆರಂಭ ಆಗಲಿದೆ. ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಆ ಕಾರಣಕ್ಕಾಗಿ ಈ ಎಲ್ಲ ಅಂಶಗಳು ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಇದನ್ನೂ ಓದಿ:

ದಿವ್ಯಾ ಉರುಡುಗ ನೀಡಿದ ಉಂಗುರ ಮತ್ತೆ ಕಳೆದುಕೊಂಡು ಹುಡುಕಾಡಿದ ಅರವಿಂದ್​; ವಿಡಿಯೋ ವೈರಲ್

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ