ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?

Bigg Boss Kannada Season 8: ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಹಾಗಾಗಿ, ಈ ಎಲ್ಲ ಅಂಶಗಳು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?
ದಿವ್ಯಾ ಉರುಡುಗ, ಅರವಿಂದ್​ ಕೆಪಿ

Updated on: Jun 21, 2021 | 9:52 AM

ಸ್ಯಾಂಡಲ್​ವುಡ್​ ನಟಿ ದಿವ್ಯಾ ಉರುಡುಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ನಲ್ಲಿ ಭಾಗವಹಿಸಿದ ಬಳಿಕ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡರು. ಕೊರೊನಾ ವೈರಸ್​ ಕಾರಣದಿಂದಾಗಿ ಈ ಸೀಸನ್​ ತಾತ್ಕಾಲಿಕವಾಗಿ ಅರ್ಧಕ್ಕೆ ನಿಂತ ಸಂದರ್ಭದಲ್ಲಿ ದಿವ್ಯಾ ಅವರಿಗೆ ಅನಾರೋಗ್ಯ ಕಾಡಿತ್ತು. ಆಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಎರಡನೇ ಇನ್ನಿಂಗ್​ ಆರಂಭಿಸಲು ಕಲರ್ಸ್​ ಕನ್ನಡ ವಾಹಿನಿ ನಿರ್ಧರಿಸಿದ್ದು, ಅದರಲ್ಲಿ ದಿವ್ಯಾ ಉರುಡುಗ ಕೂಡ ಭಾಗವಹಿಸುತ್ತಿದ್ದಾರೆ. ಈ ನಡುವೆ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 5 ಲಕ್ಷ ಮಂದಿ ಫಾಲೋವರ್ಸ್​ ಆಗಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವುದು ಸೆಲೆಬ್ರಿಟಿಗಳಿಗೆ ತುಂಬ ಅನಿವಾರ್ಯ. ಆ ವಿಚಾರದಲ್ಲಿ ದಿವ್ಯಾಗೆ ಈಗ ಸಖತ್ ಖುಷಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 5 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ. ಅವರೆಲ್ಲರ ಪ್ರೀತಿಗೆ ಫಿದಾ ಆಗಿರುವ ದಿವ್ಯಾ, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

‘ನಾನು ಏನೇ ಮಾಡಬೇಕು ಎಂದುಕೊಂಡಾಗಲೂ ನನ್ನ ಹಿಂದಿರುವ ಕುಟುಂಬವನ್ನು ನೋಡುತ್ತೇನೆ. ಇಂದು ಅದ್ಭುತವಾದ ಅರ್ಧ ಮಿಲಿಯನ್​ ಹೃದಯಗಳು ನನ್ನ ಜೊತೆ ಇರುವುದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನನ್ನನ್ನು ಖುಷಿಯಾಗಿ ಇರಿಸುತ್ತೀರಿ. ಇನ್ಮುಂದೆ ಕೂಡ ನನ್ನ ಈ ಕುಟುಂಬಕ್ಕೆ ನಾನು ಹೊಸ ಸದಸ್ಯರನ್ನು ಸ್ವಾಗತಿಸುತ್ತೇನೆ’ ಎಂದು ಹೊಸ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ದಿವ್ಯಾ ಉರುಡುಗ ಧನ್ಯವಾದ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ 2.54 ಲಕ್ಷ, ನಿಧಿ ಸುಬ್ಬಯ್ಯ 2.87 ಲಕ್ಷ, ವೈಷ್ಣವಿ ಗೌಡ 8.25 ಲಕ್ಷ, ರಘು ಗೌಡ 3.27 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ. ಜೂ.23ರಿಂದ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಎರಡನೇ ಇನ್ನಿಂಗ್ಸ್​ ಆರಂಭ ಆಗಲಿದೆ. ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇರುವವರಿಗೆ ಹೆಚ್ಚು ವೋಟ್​ಗಳು ಸಿಗುವುದು ಸಹಜ. ಆ ಕಾರಣಕ್ಕಾಗಿ ಈ ಎಲ್ಲ ಅಂಶಗಳು ಸ್ಪರ್ಧಿಗಳಿಗೆ ಮುಖ್ಯ ಆಗಲಿದೆ.

ಇದನ್ನೂ ಓದಿ:

ದಿವ್ಯಾ ಉರುಡುಗ ನೀಡಿದ ಉಂಗುರ ಮತ್ತೆ ಕಳೆದುಕೊಂಡು ಹುಡುಕಾಡಿದ ಅರವಿಂದ್​; ವಿಡಿಯೋ ವೈರಲ್

Divya Uruduga: ಬಿಗ್​ ಬಾಸ್ ಟ್ರೋಫಿ ಅಥವಾ ದಿವ್ಯಾ ಉರುಡುಗ; ಇದರಲ್ಲಿ ಅರವಿಂದ್​ ಆಯ್ಕೆ ಯಾವುದು? ಹೊರಬಿತ್ತು ಅಚ್ಚರಿಯ ಉತ್ತರ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us