AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on:May 10, 2021 | 4:19 PM

Share

ಬಿಗ್​ ಬಾಸ್​ ವೇದಿಕೆ ಏರಿಬಂದ ಮೇಲೆ ಅದೃಷ್ಟ ಬದಲಾಗುತ್ತದೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಮೊದಲ ಏಳು ಸೀಸನ್​ಗಳಲ್ಲಿ ಕಾಣಿಸಿಕೊಂಡ ಸಾಕಷ್ಟು ಮಂದಿಯ ಲಕ್​ ಬದಲಾಗಿದೆ. ಈ ಬಾರಿಯ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದ್ದರಿಂದ ಮನೆಯಲ್ಲಿದ್ದ 11 ಸ್ಪರ್ಧಿಗಳು ತಮ್ಮ ಮನೆ ಸೇರಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಬೆನ್ನಲ್ಲೇ ರಘು ಗೌಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ.  

ಕೊರೊನಾ ವೈರಸ್​ ಕಾರಣಕ್ಕೆ ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಂತಿದೆ. 70 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ರಘು ಇದ್ದರು. ಆರಂಭದಲ್ಲಿ ಡಲ್​ ಆಗಿದ್ದ ಅವರು ನಂತರ ಫಾರ್ಮ್​ಗೆ ಬಂದಿದ್ದರು. ಎಲ್ಲರನ್ನೂ ರಂಜಿಸುವ ಕೆಲಸದಲ್ಲಿ ತೊಡಗಿದ್ದರು. ಈಗ ಅವರು ‘ದ್ವಿಪಾತ್ರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

‘ದ್ವಿಪಾತ್ರ’ವನ್ನು ಶ್ರೀವತ್ಸ ಆರ್. ನಿರ್ದೇಶನ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್​ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಚಂದು ಗೌಡ ಹಾಗೂ ಸತ್ಯಾಶ್ರಯ ಲೀಡ್​ರೋಲ್​ ನಿರ್ವಹಿಸುತ್ತಿದ್ದಾರೆ. ರಘು ಕೂಡ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ರಘು ಗೌಡ ಬಿಗ್​ ಬಾಸ್​ಗೆ ಹೋಗುವುದಕ್ಕೂ ಮೊದಲು ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಹಲವರ ಗಮನ ಸೆಳೆದಿದ್ದರು. ಶ್ರೀವತ್ಸ ಕೂಡ ಅವರ ಯೂಟ್ಯೂಬ್​ ವಿಡಿಯೋಗಳನ್ನು ನೋಡಿ ಇಂಪ್ರೆಸ್​ ಆಗಿದ್ದರು. ಹೀಗಾಗಿ ರಘು ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಬಿಗ್​ ಬಾಸ್​ ಹೋಗುವ ಮೊದಲೇ ರಘು ಅವರು ಎರಡು ದಿನಗಳ ಶೂಟ್​ನಲ್ಲಿ ಪಾಲ್ಗೊಂಡಿದ್ದರಂತೆ. ಇನ್ನೂ 3-4 ದಿನಗಳ ಶೂಟ್​ ಬಾಕಿ ಇದೆ. ಲಾಕ್​ಡೌನ್​ ಪೂರ್ಣಗೊಂಡ ಮೇಲೆ ಇದನ್ನು ಶೂಟ್​ ಮಾಡುವ ಆಲೋಚನೆ ನಿರ್ದೇಶಕರದ್ದು.

ದ್ವಿಪಾತ್ರದ ಪೋಸ್ಟರ್

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

ಚಂದು ಗೌಡ ಹಾಗೂ ಸತ್ಯಾಶ್ರಯ ಸಿನಿಮಾದಲ್ಲಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀನಾಸಂ, ಸುಚೇಂದ್ರ ಪ್ರಸಾದ್​ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಸತ್ಯಾಶ್ರಯ ಅವರೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: BBK8: ರಘು ಗೌಡ ಬಿಗ್​ ಬಾಸ್​ನಿಂದ ಹೊರ​ಬಂದಾಗ ಹೆಂಡತಿ ಮನೆಯೊಳಗೆ ಸೇರಿಸೋದು ಅನುಮಾನ

Published On - 4:18 pm, Mon, 10 May 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ