AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on:May 10, 2021 | 4:19 PM

Share

ಬಿಗ್​ ಬಾಸ್​ ವೇದಿಕೆ ಏರಿಬಂದ ಮೇಲೆ ಅದೃಷ್ಟ ಬದಲಾಗುತ್ತದೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಮೊದಲ ಏಳು ಸೀಸನ್​ಗಳಲ್ಲಿ ಕಾಣಿಸಿಕೊಂಡ ಸಾಕಷ್ಟು ಮಂದಿಯ ಲಕ್​ ಬದಲಾಗಿದೆ. ಈ ಬಾರಿಯ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದ್ದರಿಂದ ಮನೆಯಲ್ಲಿದ್ದ 11 ಸ್ಪರ್ಧಿಗಳು ತಮ್ಮ ಮನೆ ಸೇರಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಬೆನ್ನಲ್ಲೇ ರಘು ಗೌಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ.  

ಕೊರೊನಾ ವೈರಸ್​ ಕಾರಣಕ್ಕೆ ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಂತಿದೆ. 70 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ರಘು ಇದ್ದರು. ಆರಂಭದಲ್ಲಿ ಡಲ್​ ಆಗಿದ್ದ ಅವರು ನಂತರ ಫಾರ್ಮ್​ಗೆ ಬಂದಿದ್ದರು. ಎಲ್ಲರನ್ನೂ ರಂಜಿಸುವ ಕೆಲಸದಲ್ಲಿ ತೊಡಗಿದ್ದರು. ಈಗ ಅವರು ‘ದ್ವಿಪಾತ್ರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

‘ದ್ವಿಪಾತ್ರ’ವನ್ನು ಶ್ರೀವತ್ಸ ಆರ್. ನಿರ್ದೇಶನ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್​ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಚಂದು ಗೌಡ ಹಾಗೂ ಸತ್ಯಾಶ್ರಯ ಲೀಡ್​ರೋಲ್​ ನಿರ್ವಹಿಸುತ್ತಿದ್ದಾರೆ. ರಘು ಕೂಡ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ರಘು ಗೌಡ ಬಿಗ್​ ಬಾಸ್​ಗೆ ಹೋಗುವುದಕ್ಕೂ ಮೊದಲು ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಹಲವರ ಗಮನ ಸೆಳೆದಿದ್ದರು. ಶ್ರೀವತ್ಸ ಕೂಡ ಅವರ ಯೂಟ್ಯೂಬ್​ ವಿಡಿಯೋಗಳನ್ನು ನೋಡಿ ಇಂಪ್ರೆಸ್​ ಆಗಿದ್ದರು. ಹೀಗಾಗಿ ರಘು ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಬಿಗ್​ ಬಾಸ್​ ಹೋಗುವ ಮೊದಲೇ ರಘು ಅವರು ಎರಡು ದಿನಗಳ ಶೂಟ್​ನಲ್ಲಿ ಪಾಲ್ಗೊಂಡಿದ್ದರಂತೆ. ಇನ್ನೂ 3-4 ದಿನಗಳ ಶೂಟ್​ ಬಾಕಿ ಇದೆ. ಲಾಕ್​ಡೌನ್​ ಪೂರ್ಣಗೊಂಡ ಮೇಲೆ ಇದನ್ನು ಶೂಟ್​ ಮಾಡುವ ಆಲೋಚನೆ ನಿರ್ದೇಶಕರದ್ದು.

ದ್ವಿಪಾತ್ರದ ಪೋಸ್ಟರ್

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

ಚಂದು ಗೌಡ ಹಾಗೂ ಸತ್ಯಾಶ್ರಯ ಸಿನಿಮಾದಲ್ಲಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀನಾಸಂ, ಸುಚೇಂದ್ರ ಪ್ರಸಾದ್​ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಸತ್ಯಾಶ್ರಯ ಅವರೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: BBK8: ರಘು ಗೌಡ ಬಿಗ್​ ಬಾಸ್​ನಿಂದ ಹೊರ​ಬಂದಾಗ ಹೆಂಡತಿ ಮನೆಯೊಳಗೆ ಸೇರಿಸೋದು ಅನುಮಾನ

Published On - 4:18 pm, Mon, 10 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?