Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

Raghu Gowda: ರಘು ಗೌಡಗೆ ಸಿನಿಮಾ ಆಫರ್​; ‘ದ್ವಿಪಾತ್ರ’ದಲ್ಲಿ ಕನ್ನಡ ಬಿಗ್​ ಬಾಸ್​ ಸ್ಪರ್ಧಿ
ರಘು - ಬಿಗ್ ಬಾಸ್​ ಕನ್ನಡ ಸೀಸನ್​ 8
Follow us
|

Updated on:May 10, 2021 | 4:19 PM

ಬಿಗ್​ ಬಾಸ್​ ವೇದಿಕೆ ಏರಿಬಂದ ಮೇಲೆ ಅದೃಷ್ಟ ಬದಲಾಗುತ್ತದೆ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಈ ಮೊದಲ ಏಳು ಸೀಸನ್​ಗಳಲ್ಲಿ ಕಾಣಿಸಿಕೊಂಡ ಸಾಕಷ್ಟು ಮಂದಿಯ ಲಕ್​ ಬದಲಾಗಿದೆ. ಈ ಬಾರಿಯ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದ್ದರಿಂದ ಮನೆಯಲ್ಲಿದ್ದ 11 ಸ್ಪರ್ಧಿಗಳು ತಮ್ಮ ಮನೆ ಸೇರಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಬೆನ್ನಲ್ಲೇ ರಘು ಗೌಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ.  

ಕೊರೊನಾ ವೈರಸ್​ ಕಾರಣಕ್ಕೆ ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಂತಿದೆ. 70 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ರಘು ಇದ್ದರು. ಆರಂಭದಲ್ಲಿ ಡಲ್​ ಆಗಿದ್ದ ಅವರು ನಂತರ ಫಾರ್ಮ್​ಗೆ ಬಂದಿದ್ದರು. ಎಲ್ಲರನ್ನೂ ರಂಜಿಸುವ ಕೆಲಸದಲ್ಲಿ ತೊಡಗಿದ್ದರು. ಈಗ ಅವರು ‘ದ್ವಿಪಾತ್ರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

‘ದ್ವಿಪಾತ್ರ’ವನ್ನು ಶ್ರೀವತ್ಸ ಆರ್. ನಿರ್ದೇಶನ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್​ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಚಂದು ಗೌಡ ಹಾಗೂ ಸತ್ಯಾಶ್ರಯ ಲೀಡ್​ರೋಲ್​ ನಿರ್ವಹಿಸುತ್ತಿದ್ದಾರೆ. ರಘು ಕೂಡ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ರಘು ಗೌಡ ಬಿಗ್​ ಬಾಸ್​ಗೆ ಹೋಗುವುದಕ್ಕೂ ಮೊದಲು ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಹಲವರ ಗಮನ ಸೆಳೆದಿದ್ದರು. ಶ್ರೀವತ್ಸ ಕೂಡ ಅವರ ಯೂಟ್ಯೂಬ್​ ವಿಡಿಯೋಗಳನ್ನು ನೋಡಿ ಇಂಪ್ರೆಸ್​ ಆಗಿದ್ದರು. ಹೀಗಾಗಿ ರಘು ಅವರನ್ನು ಚಿತ್ರತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಬಿಗ್​ ಬಾಸ್​ ಹೋಗುವ ಮೊದಲೇ ರಘು ಅವರು ಎರಡು ದಿನಗಳ ಶೂಟ್​ನಲ್ಲಿ ಪಾಲ್ಗೊಂಡಿದ್ದರಂತೆ. ಇನ್ನೂ 3-4 ದಿನಗಳ ಶೂಟ್​ ಬಾಕಿ ಇದೆ. ಲಾಕ್​ಡೌನ್​ ಪೂರ್ಣಗೊಂಡ ಮೇಲೆ ಇದನ್ನು ಶೂಟ್​ ಮಾಡುವ ಆಲೋಚನೆ ನಿರ್ದೇಶಕರದ್ದು.

ದ್ವಿಪಾತ್ರದ ಪೋಸ್ಟರ್

ರಘು ಅವರ ಪಾತ್ರ ಏನು? ಅದಕ್ಕೂ ಉತ್ತರವಿದೆ. ಸೈಬರ್​ ಹ್ಯಾಕರ್​ ಆಗಿ ರಘು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಚಿತ್ರದಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆ ಎಂಬುದು ನಿರ್ದೇಶಕ ಶ್ರೀವತ್ಸ​ ಅಭಿಪ್ರಾಯ.

ಚಂದು ಗೌಡ ಹಾಗೂ ಸತ್ಯಾಶ್ರಯ ಸಿನಿಮಾದಲ್ಲಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್​ ನೀನಾಸಂ, ಸುಚೇಂದ್ರ ಪ್ರಸಾದ್​ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಸತ್ಯಾಶ್ರಯ ಅವರೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: BBK8: ರಘು ಗೌಡ ಬಿಗ್​ ಬಾಸ್​ನಿಂದ ಹೊರ​ಬಂದಾಗ ಹೆಂಡತಿ ಮನೆಯೊಳಗೆ ಸೇರಿಸೋದು ಅನುಮಾನ

Published On - 4:18 pm, Mon, 10 May 21

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು