AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ ಬಾಸ್​ ಮನೆಯಲ್ಲಿ ಶೀಘ್ರವೇ ನಡೆಯಲಿದೆ ಡಬಲ್​ ಎಲಿಮಿನೇಷನ್​?

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಇನ್ನೊಂದು ವಾರದಲ್ಲಿ ಬಿಗ್​ ಬಾಸ್​ ಪೂರ್ಣಗೊಳ್ಳಬೇಕು.

ಬಿಗ್​​ ಬಾಸ್​ ಮನೆಯಲ್ಲಿ ಶೀಘ್ರವೇ ನಡೆಯಲಿದೆ ಡಬಲ್​ ಎಲಿಮಿನೇಷನ್​?
ಕಿಚ್ಚ ಸುದೀಪ್
TV9 Web
| Edited By: |

Updated on: Jul 18, 2021 | 8:45 AM

Share

‘ಬಿಗ್​ ಬಾಸ್​ ಸೀಸನ್​ 8’ ಅಂತಿಮ ಘಟ್ಟ ತಲುಪಿದೆ. ಬಿಗ್​ ಬಾಸ್​ ಮನೆಯಲ್ಲಿ 10 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇವರಲ್ಲಿ ಓರ್ವ ಸ್ಪರ್ಧಿ ಭಾನುವಾರ (ಜುಲೈ 18) ಹೊರ ಹೋಗುವುದು ಖಚಿತವಾಗಿದೆ. ಆ ನಂತರ ಮನೆಯಲ್ಲಿ ಉಳಿಯೋದು 9 ಸ್ಪರ್ಧಿಗಳು. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಇನ್ನೊಂದು ವಾರದಲ್ಲಿ ಬಿಗ್​ ಬಾಸ್​ ಪೂರ್ಣಗೊಳ್ಳಬೇಕು. ಮೂಲಗಳ ಪ್ರಕಾರ ಇನ್ನೂ ಸ್ವಲ್ಪ ವಾರ ಬಿಗ್​ ಬಾಸ್​ ಮುಂದುವರಿಯಲಿದೆ ಎನ್ನಾಗುತ್ತಿದೆ.

ಪ್ರತಿ ಸೀಸನ್​ನಲ್ಲೂ ಕೆಲ ಸಾಮಾನ್ಯ ವಿಚಾರಗಳು ಬಿಗ್ ಬಾಸ್ ಮನೆಯಲ್ಲಿ ಕಂಡುಬರುತ್ತವೆ. ಅದರಲ್ಲಿ ವೈಲ್ಡ್​ ಕಾರ್ಡ್​, ಡಬಲ್​ ಎಲಿಮಿನೇಷನ್​ ಕೂಡ ಒಂದು. ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಮೂರು ಜನರ ವೈಲ್ಡ್ ಕಾರ್ಡ್​ ಎಂಟ್ರಿ ಆಗಿದೆ. ಆದರೆ, ಈ ವರೆಗೆ ಡಬಲ್​ ಎಲಿಮಿನೇಷನ್​ ಆಗಿಲ್ಲ. ಅಲ್ಲದೆ, ದಿನಗಳು ಕಡಿಮೆ ಇದ್ದು, ಸ್ಪರ್ಧಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕೆ ಶೀಘ್ರವೇ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವಾರ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ ಗೌಡ, ಶುಭಾ ಪೂಂಜಾ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಶನಿವಾರದ ಎಪಿಸೋಡ್​ನಲ್ಲಿ ಅತಿ ಹೆಚ್ಚು ವೋಟ್ ಪಡೆದು ವೈಷ್ಣವಿ ಸೇವ್​ ಆಗಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ಶುಭಾ ಪೂಂಜಾ ಹಾಗೂ ಪ್ರಾಶಾಂತ್ ಸಂಬರಗಿ​ ನಡುವೆ ಒಬ್ಬರು ಎಲಿಮಿನೇಟ್​ ಆಗಲಿದ್ದಾರೆ. ಹೀಗಾಗಿ, ಈ ವಾರ ಡಬಲ್​ ಎಲಿಮಿನೇಷನ್​ ನಡೆಯುವುದಿಲ್ಲ.

ಈ ಎಲ್ಲಾ ಕಾರಣಗಳನ್ನು ಗಮನಿಸಿದರೆ ಮುಂದಿನವಾರ ಅಥವಾ ಅದಕ್ಕೂ ಮುಂದಿನ ವಾರ ಡಬಲ್​ ಎಲಿಮಿನೇಷನ್​ ನಡೆಯುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ. ಸುದೀಪ್​ ಜತೆ ಒಟ್ಟಿಗೆ ವೇದಿಕೆ ಹಂಚಿಕೊಳ್ಳುವ ಆ ಇಬ್ಬರು ಸ್ಪರ್ಧಿಗಳು ಯಾರು ಎನ್ನುವುದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ